Bantwal; ಅಕ್ರಮ ಮರಳು ಸಾಗಾಟದ ಲಾರಿ ವಶ
Team Udayavani, Feb 15, 2024, 12:16 AM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ಫೆ. 13ರಂದು ಕರಿಯಂಗಳ ಗ್ರಾಮದ ಪುಂಚಮೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಕ್ರಮ ಮರಳು ಸಾಗಾಟ ಕಂಡುಬಂದಿದ್ದು, ಲಾರಿ ಸಹಿತ ಮರಳನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬಂದಿ ಗಸ್ತು ತಿರುಗುತ್ತಿದ್ದಾಗ ಪೊಳಲಿ ಕಡೆಯಿಂದ ಟಿಪ್ಪರ್ ಲಾರಿ ಆಗಮಿಸಿದ್ದು, ತಡೆದು ವಿಚಾರಿಸಿದಾಗ ಪರವಾನಿಗೆ ರಹಿತ ಮರಳು ಸಾಗಾಟ ಬೆಳಕಿಗೆ ಬಂದಿದೆ. ಅಡೂxರು ಹೊಳೆಯಿಂದ ಮರಳು ತುಂಬಿಸಿ ಬಂದಿರುವುದಾಗಿ ಚಾಲಕ ಮೋಹನ್ ಕೆ. ತಿಳಿಸಿದ್ದಾನೆ. ಪೊಲೀಸರು 5 ಲಕ್ಷ ರೂ. ಮೌಲ್ಯದ ಲಾರಿ ಹಾಗೂ 5 ಸಾವಿರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದಿದ್ದಾರೆ.