Bantwal ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ
Team Udayavani, Jan 8, 2024, 11:17 PM IST
ಬಂಟ್ವಾಳ: ಪಶ್ಚಿಮಬಂಗಾಳ ಮೂಲದ ಕಾರ್ಮಿಕನೋರ್ವ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿ ಜುಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 7ರಂದು ಸಜೀಪನಡುವಿನಲ್ಲಿ ನಡೆದಿದೆ.
ಪಶ್ಚಿಮಬಂಗಾಳದ ಸುಲ್ತಾನ್ನಗರ ಸರ್ಯಾ ಪಾಲೆª ಕುನಿಯಾ ಪಹರ್ ನಿವಾಸಿ ಶಂಭುದಾಸ್ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಬಳಿಕ ಆ ಕೆಲಸ ಬಿಟ್ಟು ಸುಳ್ಯದಲ್ಲಿ ಶಾಮಿಯಾನ ಕೆಲಸ ಮಾಡಿಕೊಂಡಿದ್ದರು. ಅವರು ಕುಟುಂಬದ ಜತೆಗೆ ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ನೆಲೆಸಿದ್ದರು.
ಅವರ ತಾಯಿ ಹಾಗೂ ಪತ್ನಿಯ ಮಧ್ಯೆ ಪ್ರತೀದಿನ ಗಲಾಟೆ ನಡೆಯುತ್ತಿದ್ದು, ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅವರ ತಮ್ಮ ಕೇಶವದಾಸ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು