Bantwal ಮಣಿಹಳ್ಳ: ಅಕ್ರಮ ಮರಳು ಸಾಗಾಟ
Team Udayavani, Feb 21, 2024, 12:19 AM IST
ಬಂಟ್ವಾಳ: ನಾವೂರು ಗ್ರಾಮದ ಮಣಿಹಳ್ಳ ಜಂಕ್ಷನ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಫೆ. 20ರಂದು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪಿಎಸ್ಐ ಮೂರ್ತಿ ಅವರು ಫೆ. 20ರ ಮುಂಜಾನೆ ಸಿಬಂದಿ ಜತೆ ಗಸ್ತು ತಿರುಗುತ್ತಿದ್ದಾಗ ಬಿ.ಸಿ.ರೋಡು ಕಡೆಯಿಂದ ಮಣಿಹಳ್ಳ ಕಡೆಗೆ ಟಿಪ್ಪರ್ ಲಾರಿಯೊಂದು ಆಗಮಿಸಿದ್ದು, ತಡೆದು ನಿಲ್ಲಿಸಿ ವಿಚಾರಿಸಿದಾಗ ವಳಚ್ಚಿಲ್ ನದಿ ಬದಿಯಿಂದ ಮರಳನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಆರೋಪಿಗಳಾದ ಲಾರಿ ಚಾಲಕ ಸಮೀರ್ ಹಾಗೂ ಲಾರಿ ಮಾಲಕ ಹಮೀದ್ ವಿರುದ್ಧ ಪ್ರಕರಣ ದಾಖಲಿಸಿ, ಸುಮಾರು 5 ಲಕ್ಷ ರೂ. ಮೌಲ್ಯದ ಟಿಪ್ಪರ್ ಲಾರಿ ಹಾಗೂ 5, 000 ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ