ಬಂಟ್ವಾಳ ಪುರಸಭೆ ಚುನಾವಣೆ: ಶಾಂತಿಯುತ ಮತದಾನ 


Team Udayavani, Sep 1, 2018, 12:56 PM IST

secptember-11.jpg

ಬಂಟ್ವಾಳ : ಬಂಟ್ವಾಳ ಪುರಸಭೆ ಚುನಾವಣೆ ಮತದಾನ ಯಾವುದೇ ಅಹಿತಕರ ಘಟನೆಗಳು ಇಲ್ಲದೆ ಶಾಂತವಾಗಿ ನಡೆದಿದೆ. ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದ್ದು, ಎಲ್ಲಿಯೂ ಇವಿಎಂ ಯಂತ್ರ ಕೈಕೊಟ್ಟ ಘಟನೆ ಸಂಭವಿಸಿಲ್ಲ. ಎಲ್ಲ 27 ವಾರ್ಡ್‌ಗಳಲ್ಲಿ ಬೆಳಗ್ಗೆ ಸರತಿ ಸಾಲು ಕಂಡುಬಂದಿತ್ತು. ಪಾಣೆಮಂಗಳೂರು, ಬಿ. ಮೂಡ, ಬಿ. ಕಸ್ಬಾ , ಅಗ್ರಾರ್‌ ಸಹಿತ ವಿವಿಧ ಮತಗಟ್ಟೆಗಳಲ್ಲಿ ಪಕ್ಷಗಳು ಕಾರ್ಯಕರ್ತರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿತ್ತು.

ಬಿಗು ಬಂದೊಬಸ್ತು
ಪೊಲೀಸರು ಬಿಗು ಬಂದೋಬಸ್ತು ಮಾಡಿದ್ದರು. ಅತೀ ಸೂಕ್ಷ್ಮ  ಮತಗಟ್ಟೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪರ್ಲಿಯಾ ಮತಗಟ್ಟೆಯಲ್ಲಿ ಮತದಾರರನ್ನು ವಾಹನದಲ್ಲಿ ಕರೆದು ತರುತ್ತಿರುವ ಬಗ್ಗೆ, ಮತಚೀಟಿ ನೀಡುವ ಬಗ್ಗೆ ಕಾರ್ಯಕರ್ತರೊಳಗೆ ಮಾತಿನ ಚಕಮಕಿ ಸಂಭವಿಸಿತು. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರಿಕೆ ವಹಿಸಿದರು. ಇದೇ ಮತಗಟ್ಟೆಯಲ್ಲಿ ಮತ ಚಲಾವಣೆಗೆ ಬಂದ ವ್ಯಕ್ತಿಯೊಬ್ಬರು ನಿರ್ದಿಷ್ಟ ಅಭ್ಯರ್ಥಿಯೊಬ್ಬರಿಗೆ ಮತ ಚಲಾಯಿಸುವಂತೆ ಬೂತ್‌ ಹತ್ತಿರವೇ ಪ್ರಚಾರ ನಡೆಸಿದ್ದು, ಪೊಲೀಸರು ಆ ವ್ಯಕ್ತಿಯನ್ನು ಬಳಿಕ ಸ್ಥಳದಿಂದ ತೆರಳುವಂತೆ ಕ್ರಮ ಕೈಗೊಂಡರು.

ಸಂಚಾರ ಅಡಚಣೆ
ಅಜ್ಜಿಬೆಟ್ಟು ಮತಗಟ್ಟೆಗೆ ಸಂಪರ್ಕಿಸುವ ರಸ್ತೆಯಲ್ಲಿ ಮತದಾನಕ್ಕೆ ಬಂದವರ ವಾಹನಗಳಿಂದ ಸಂಚಾರ ಅಡಚಣೆ ಉಂಟಾಯಿತು. ಸಾರ್ವಜನಿಕರೇ ಪರಸ್ಪರ ಸಹಕರಿಸಿ ಸಂಚಾರ ಸುವ್ಯವಸ್ಥೆ ಮಾಡಿಕೊಟ್ಟರು. ಬಹುತೇಕ ಬೂತ್‌ನಲ್ಲಿಯೂ ಅಭ್ಯರ್ಥಿಗಳು ಪರಸ್ಪರ ಒಟ್ಟಿಗೆ ಇದ್ದುಕೊಂಡು ಮತ ಚಲಾಯಿಸುವಂತೆ ಮತದಾರರಲ್ಲಿ ವಿನಂತಿಸುತ್ತಿದ್ದುದು ಕಂಡುಬಂತು.

ಡಿಸಿ ಭೇಟಿ
ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಸಾಮಾನ್ಯ ವೀಕ್ಷಕ ಬಾಲಚಂದ್ರ (ಖರ್ಚುವೆಚ್ಚ ವಿಭಾಗ), ಸಹಾಯಕ ಆಯುಕ್ತ ರವಿಚಂದ್ರ ನಾಯಕ್‌ ಪುರಸಭೆ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.