Bantwal ಅಕ್ರಮ ಮರಳು ಸಾಗಾಟ ಲಾರಿ ವಶ; ಪ್ರಕರಣ ದಾಖಲು
Team Udayavani, Feb 6, 2024, 9:27 PM IST
ಬಂಟ್ವಾಳ: ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ಸಹಿತ ಲಾರಿಯನ್ನು ವಶಕ್ಕೆ ಪಡೆದು ಆರೋಪಿಗಳಾದ ಲಾರಿ ಮಾಲಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಫೆ. 4ರ ತಡರಾತ್ರಿ ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ಕ್ರಾಸ್ ಬಳಿ ನಡೆದಿದೆ.
ಆರೋಪಿಗಳು ವಳಚ್ಚಿಲ್ನಲ್ಲಿ ನೇತ್ರಾವತಿ ನದಿಯಿಂದ ಮರಳನ್ನು ತುಂಬಿಸಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದು, ಗ್ರಾಮಾಂತರ ಇನ್ಸ್ಪೆಕ್ಟರ್ ಶಿವಕುಮಾರ್ಹಾಗೂ ಸಿಬಂದಿ ಲಾರಿಯನ್ನು ತಡೆದು ವಿಚಾರಣೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಲಾರಿ ಚಾಲಕ ಮಹಮ್ಮದ್ ನವಾಜ್, ಮಾಲಕ ಅಬೂಬಕ್ಕರ್ ಸಿದ್ದೀಕ್ ಬೋಳಂತೂರು ವಿರುದ್ಧ ಪ್ರಕರಣ ದಾಖಲಾಗಿದೆ.