Soumya Bhat ಪ್ರಕರಣಕ್ಕೆ 26 ವರ್ಷ: ಆರೋಪಿ ಮಿಲಿಟ್ರಿ ಅಶ್ರಫ್‌ ಇನ್ನೂ ನಿಗೂಢ..!

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪ್ರಕರಣ; 2ನೇ ಬಾರಿ ತಪ್ಪಿಸಿಕೊಂಡಾತನ ಸುಳಿವಿಲ್ಲ

Team Udayavani, Aug 8, 2023, 7:25 AM IST

Soumya Bhat ಹತ್ಯೆ ಪ್ರಕರಣಕ್ಕೆ 26 ವರ್ಷ: ಆರೋಪಿ ಮಿಲಿಟ್ರಿ ಅಶ್ರಫ್‌ ಇನ್ನೂ ನಿಗೂಢ..!

ಪುತ್ತೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ವಿದ್ಯಾರ್ಥಿನಿ ವಡ್ಯ ಸೌಮ್ಯಾ ಭಟ್‌ ಕೊಲೆ ಪ್ರಕರಣಕ್ಕೆ 26 ವರ್ಷ ತುಂಬಿದ್ದು ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ.
ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್‌ ಅವರನ್ನು ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್‌ ಬರ್ಬರವಾಗಿ ಕೊಲೆಗೈದಿದ್ದ. ಈ ಘಟನೆಯಿಂದ ಇಡೀ ಪುತ್ತೂರು ಕೆರಳಿ ಕೆಂಡದಂತೆ ಆಗಿತ್ತು.

ಘಟನೆ ವಿವರ
1997ರ ಆಗಸ್ಟ್‌ 7 ರಂದು ಸಂಜೆ 5 ಗಂಟೆ ಹೊತ್ತಿಗೆ ಕಾಲೇಜು ಮುಗಿಸಿ ಬಸ್‌ನಲ್ಲಿ ಬಂದು ಕಬಕದಲ್ಲಿ ಇಳಿದ ಸೌಮ್ಯಾ ತನ್ನ ಮನೆಗೆ ಕೆದಿಲಕ್ಕೆ ಹೋಗುವ ಒಳ ರಸ್ತೆಯಲ್ಲಿ ರೈಲ್ವೇ ಹಳಿಯನ್ನು ದಾಟಿ ಹೋಗುತ್ತಿದ್ದರು. ಅದು ನಿರ್ಜನ ಪ್ರದೇಶ. ಸಂಜೆಯ ವೇಳೆ ಆಗಿದ್ದ ಕಾರಣ ಕತ್ತಲು ಆವರಿಸಿತ್ತು. ಸೌಮ್ಯಾಳನ್ನು ಕಬಕದಿಂದ ಹಿಂಬಾಲಿಸಿದ್ದ ಆರೋಪಿ ನಿರ್ಜನ ದಾರಿಯಲ್ಲಿ ಆಕೆಗೆ ಅಡ್ಡಲಾಗಿ ನಿಂತಿದ್ದ. ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಅವನಿಂದ ತಪ್ಪಿಸಿಕೊಂಡ ಸೌಮ್ಯಾ ಅಲ್ಲಿಂದ ಓಟಕ್ಕಿತ್ತಿದ್ದಾರೆ. ಆಲದಗುಂಡಿ ಬಳಿಕ ಆಕೆಯನ್ನು ಬೆನ್ನತ್ತಿ ಬಂದ ಅಶ್ರಫ್‌ ಚಾಕುವಿನಿಂದ ಮನಬಂದಂತೆ ಚುಚ್ಚಿದ್ದ. 20ಕ್ಕೂ ಅಧಿಕ ಬಾರಿ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಆರೋಪಿ ವಶ, ಪರಾರಿ
ಈ ಪ್ರಕರಣದ ಬಳಿಕ ಪುತ್ತೂರಿನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಕಪ್ಯೂì ಜಾರಿ ಘೋಷಣೆಯಾಗಿತ್ತು. ಬಂದ್‌ಗೆ ಕರೆ ನೀಡಲಾಯಿತು. ಕೊನೆಗೂ ಆರೋಪಿ ಬಂಧನವಾಯಿತು. ಅದಾದ ಎರಡು ತಿಂಗಳಲ್ಲಿ ಆರೋಪಿ ಮಂಗಳೂರಿನಿಂದ ತಪ್ಪಿಸಿಕೊಂಡ. ಕೆಲವೇ ದಿನದಲ್ಲಿ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿ ಆತನನ್ನು ಬಂಧಿಸಲಾಯಿತು. ಅನಂತರ ಎರಡೇ ವರ್ಷದಲ್ಲಿ ಮತ್ತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಹೀಗೆ ತಪ್ಪಿಸಿಕೊಂಡ ಅಶ್ರಫ್‌ ಇನ್ನೂ ಪತ್ತೆಯಾಗಿಲ್ಲ. ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನುವ ಮಾತು ಹಬ್ಬಿದೆ. ಆದರೆ ಈತನಕ ಆತನ ಸುಳಿವು ಸಿಕ್ಕಿಲ್ಲ.

ಮಿಲಿಟರಿಯಲ್ಲಿದ್ದ ಅಶ್ರಫ್‌
ಅಶ್ರಫ್‌ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತಿದ್ದ. ಘಟನೆ ನಡೆಯುವ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದ ಎನ್ನಲಾಗಿದೆ. ಘಟನೆ ನಡೆಯುವ ಎರಡು ದಿನದ ಹಿಂದೆ ಸೌಮ್ಯಾಳ ತಂದೆಯನ್ನು ಭೇಟಿಯಾಗಿ ಮಗಳ ಬಗ್ಗೆ ವಿಚಾರಿಸಿದ್ದ. ಈತ ಸಹಪಾಠಿ ಆಗಿರಬಹುದು ಎಂದು ಭಾವಿಸಿದ ಗಣಪತಿ ಭಟ್ಟರು ಸೌಮ್ಯಾ ಕಾಲೇಜಿಗೆ ಹೋಗುವ ವಿಷಯ ತಿಳಿಸಿದ್ದರು. ಆದರೆ ಆತ ದುಷ್ಕೃತ್ಯ ಎಸಗಲೆಂದೇ ಈ ಮಾಹಿತಿ ಸಂಗ್ರಹಿಸಿದ್ದ. ಕೊಲೆ ಪ್ರಕರಣದ ಬಳಿಕ ಆರೋಪಿ ವಿಕೃತ ಕಾಮಿ ಎನ್ನುವ ಬಗ್ಗೆಯೂ ಮಾಹಿತಿ ಹಬ್ಬಿತ್ತು. ಸೌಮ್ಯಾ ಭಟ್‌ ಕೊಲೆ ನಡೆಯುವ ಎರಡು ದಿನ ಮೊದಲು ಹತ್ತಿರದಲ್ಲೇ ಮನೆಯೊಂದಕ್ಕೆ ನುಗ್ಗಿ ಹುಡುಗಿಯ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.

 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.