ಸದಸ್ಯರ ಬೆರಳಚ್ಚು ಸಂಗ್ರಹ ಪೂರ್ಣ

  ಬಂಟ್ವಾಳ ತಾಲೂಕು: ಪಡಿತರ ಚೀಟಿ ಇ-ಕೆವೈಸಿ ಪ್ರಕ್ರಿಯೆ

Team Udayavani, Jan 9, 2020, 4:21 AM IST

8

ಬಂಟ್ವಾಳ: ಸರಕಾರವು ಪಡಿತರ ಚೀಟಿ ಹೊಂದಿರುವ ಸದಸ್ಯರ ಇ-ಕೆವೈಸಿ (ಬೆರಳಚ್ಚು)ಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸುವ ಕಾರ್ಯ ಪ್ರಾರಂಭಿಸಿದ್ದು, ಬಂಟ್ವಾಳದಲ್ಲಿ ಮೂರು ವಿಧಗಳ ಒಟ್ಟು 83,869 ಪಡಿತರ ಚೀಟಿಗಳಲ್ಲಿ ಈತನಕ ಒಟ್ಟು 1,28,063 ಸದಸ್ಯರು ಬೆರಳಚ್ಚು ನೀಡಿದ್ದಾರೆ.

ತಾಲೂಕಿನಲ್ಲಿ ಒಟ್ಟು 100 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರಸ್ತುತ ಮೂರು ದಿನಗಳಿಂದ ಸರ್ವರ್‌ ಸಮಸ್ಯೆಯಿಂದ ಬೆರಳಚ್ಚು ಸಂಗ್ರಹ ಪ್ರಕ್ರಿಯೆ ನಡೆದಿಲ್ಲ. ಕಳೆದ ಅಕ್ಟೋಬರ್‌ ತಿಂಗಳಲ್ಲಿ ಈ ಪ್ರಕ್ರಿಯೆ ಆರಂಭಗೊಳಿಸಲಾಗಿದ್ದು, ಆದರೆ ಸರ್ವರ್‌ ಸಮಸ್ಯೆ ಕಾಡುತ್ತಿರುವುದರಿಂದ ಬೆರಳಚ್ಚು ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆದಿಲ್ಲ. ಜತೆಗೆ ಜನರೂ ಸೂಕ್ತ ರೀತಿಯ ಸ್ಪಂದನೆ ನೀಡಿಲ್ಲ.

ಎಪಿಎಲ್‌ (ಆದ್ಯತೇತರ), ಬಿಪಿಎಲ್‌(ಆದ್ಯತಾ) ಹಾಗೂ ಅಂತ್ಯೋದಯ ಪಡಿತರ ಚೀಟಿಯ ಕುಟುಂಬದ ಸದಸ್ಯರು ಇಕೆವೈಸಿ ನೀಡಬೇಕಿದ್ದು, ಈಗಾಗಲೇ ಅದರ ಅಂತಿಮ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸಲಾಗಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲ ಸದಸ್ಯರು ಅದನ್ನು ಕಡ್ಡಾಯವಾಗಿ ಮಾಡಬೇಕಿದ್ದು, ಆದರೆ ಎಲ್ಲರೂ ಜತೆಯಾಗಿ ತೆರಳಬೇಕಿಲ್ಲ ಎಂಬ ಮಾಹಿತಿಯನ್ನೂ ನೀಡಿದೆ.
ಸರಕಾರವು ಈ ಹಿಂದೆ ಬೆರಳಚ್ಚು ಸಂಗ್ರಹ ಪ್ರಕ್ರಿಯೆಗೆ ಜ. 31ರ ಗಡುವು ನೀಡಿದ್ದು, ಅದರ ದಿನಾಂಕ ಹತ್ತಿರ ಬರುತ್ತಿದ್ದಂತೆ ಒತ್ತಡ ಅಧಿಕಗೊಂಡು ಸರ್ವರ್‌ ಸಮಸ್ಯೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸು ತ್ತಿದ್ದು, ಹೀಗಾಗಿ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸುವ ಜತೆಗೆ ಸರ್ವರ್‌ ಬದಲಾವಣೆಗೂ ಮುಂದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆ ವೇಗವಾಗಿ ಸಾಗಬಹುದು ಎಂದು ಆಹಾರ ಶಾಖೆಯ ಸಿಬಂದಿ ನಿರೀಕ್ಷಿಸುತ್ತಿದ್ದಾರೆ.

ಬಹುತೇಕ ನ್ಯಾಯಬೆಲೆ ಅಂಗಡಿಗಳು ಗ್ರಾಮೀಣ ಭಾಗ ದಲ್ಲೇ ಇರುವುದರಿಂದ ಕೆಲವೊಂದೆಡೆ ನೆಟ್‌ವರ್ಕ್‌ ಸಮಸ್ಯೆಗಳೂ ಕಾಡುತ್ತಿವೆ. ಈ ಕುರಿತು ಹಿಂದಿನಿಂದಲೂ ಆರೋಪಗಳು ಕೇಳಿಬರುತ್ತಿದ್ದು, ಹೀಗಾಗಿ ನೆಟ್‌ವರ್ಕ್‌ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸುವ ಕಾರ್ಯ ನಡೆಯಬೇಕಿದೆ.

ಬಂಟ್ವಾಳ ತಾಲೂಕಿನಲ್ಲಿ 5,977 ಅಂತ್ಯೋದಯ ಪಡಿತರ ಚೀಟಿಗಳಿದ್ದು, 31,009 ಸದಸ್ಯರಿದ್ದಾರೆ. ಅದರಲ್ಲಿ 1,365 ಪಡಿತರ ಚೀಟಿಯ 6,218 ಮಂದಿ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. 55,851 ಬಿಪಿಎಲ್‌(ಆದ್ಯತಾ) ಪಡಿತರ ಚೀಟಿಯಲ್ಲಿ 2,30,909 ಸದಸ್ಯರಿದ್ದು, ಅದರಲ್ಲಿ 24,693 ಚೀಟಿಗಳ 99,644 ಮಂದಿ ಇ-ಕೆವೈಸಿ ಪೂರ್ಣಗೊಳಿಸಿ ದ್ದಾರೆ. 22,041 ಎಪಿಎಲ್‌ (ಆದ್ಯತೇತರ) ಪಡಿತರ ಚೀಟಿ ಗಳಲ್ಲಿ 1,00,115 ಸದಸ್ಯರಿದ್ದು, ಅದರಲ್ಲಿ 5,406 ಚೀಟಿಗಳ 22201 ಮಂದಿ ಇಕೆವೈಸಿ ಪೂರ್ಣಗೊಳಿಸಿದ್ದಾರೆ ಎಂದು ತಾ| ಕಚೇರಿಯ ಮೂಲಗಳು ತಿಳಿಸಿವೆ.

ಸರ್ವರ್‌ ಸಮಸ್ಯೆಗೆ ಪರಿಹಾರ
ಅಕ್ಟೋಬರ್‌ನಲ್ಲಿ ಇ-ಕೆವೈಸಿ ಪ್ರಾರಂಭಗೊಂಡಿದ್ದು, ಸರ್ವರ್‌ ಸಮಸ್ಯೆಯಿಂದ ಕಳೆದ 3 ದಿನಗಳಲ್ಲಿ ಬೆರಳಚ್ಚು ಸಂಗ್ರಹ ಕಾರ್ಯ ನಡೆದಿಲ್ಲ. ಪ್ರಸ್ತುತ ಸರಕಾರದ ಸುತ್ತೋಲೆ ಬಂದಿದ್ದು, ಸರ್ವರ್‌ ಸಮಸ್ಯೆಗೆ ಪರಿಹಾರ ನೀಡಲು ತಂತ್ರಜ್ಞಾನ ಬದಲಾವಣೆ ಮಾಡಿ ಜ. 10ರ ಬಳಿಕ ಬೆರಳಚ್ಚು ಪ್ರಕ್ರಿಯೆ ವೇಗ ವಾಗಿ ಸಾಗುವ ಸಾಧ್ಯತೆ ಇದೆ.
 - ಶ್ರೀನಿವಾಸ್‌, ಆಹಾರ ಶಿರಸ್ತೇದಾರರು, ತಾಲೂಕು ಕಚೇರಿ, ಬಂಟ್ವಾಳ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.