ಬಂಟ್ವಾಳ: ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂನ ಎಇಇ ಮೃತ್ಯು
Team Udayavani, Oct 21, 2022, 2:12 PM IST
ಬಂಟ್ವಾಳ: ಇಂದು ಬೆಳಿಗ್ಗೆ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಮೃತಪಟ್ಟವರು.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನೊಂದು ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.