ಬಂಟ್ವಾಳದ 4 ಕಡೆ ಅರಣ್ಯ, ಗುಡ್ಡ ಪ್ರದೇಶಕ್ಕೆ ಬೆಂಕಿ
Team Udayavani, Feb 25, 2023, 6:30 AM IST
ಬಂಟ್ವಾಳ: ಬಂಟ್ವಾಳ ತಾಲೂಕಿನ 4 ಕಡೆಗಳಲ್ಲಿ ಗುಡ್ಡ ಹಾಗೂ ಅರಣ್ಯ ಪ್ರದೇಶಕ್ಕೆ ಶುಕ್ರವಾರ ಬೆಂಕಿ ಬಿದ್ದಿರುವ ಘಟನೆ ನಡೆದಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ತಲಪಾಡಿ ಹೆದ್ದಾರಿ ಬದಿ ಗುಡ್ಡಕ್ಕೆ ಬೆಂಕಿ ಬಿದ್ದು, ಗಿಡ ಗಂಟಿಗಳ ಜತೆಗೆ ಹುಲ್ಲು ಪ್ರದೇಶ ಸುಟ್ಟು ಹೋಗಿದೆ. ಮೊಡಂಕಾಪು ಪ್ರದೇಶದಲ್ಲಿ ಅರಣ್ಯ ವ್ಯಾಪ್ತಿಗೆ ಬೆಂಕಿ ಬಿದ್ದು, ಗಿಡಗಂಟಿಗಳು ಸುಟ್ಟು ಹೋಗಿವೆ. ಸರಪಾಡಿಯಲ್ಲಿ ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದು, ಪುಂಜಾಲಕಟ್ಟೆ ಭಾಗದಲ್ಲಿ ರಬ್ಬರ್ ತೋಟಕ್ಕೆ ಬೆಂಕಿ ಬಿದ್ದು ರಬ್ಬರ್ ಗಿಡಗಳು ನಾಶವಾಗಿದೆ.
ಘಟನ ಸ್ಥಳಗಳಿಗೆ ಬಂಟ್ವಾಳ ಹಾಗೂ ಮಂಗಳೂರು ಅಗ್ನಿಶಾಮಕ ಠಾಣೆಯ ವಾಹನಗಳು ತೆರಳಿದ್ದು, ಬಂಟ್ವಾಳದಲ್ಲಿ ಒಂದೇ ವಾಹನ ಇರುವುದರಿಂದ ಹೆಚ್ಚುವರಿಯಾಗಿ ಮಂಗಳೂರಿನ ವಾಹನ ಆಗಮಿಸಿತ್ತು ಎಂದು ಇಲಾಖೆ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್