ಕುರಿಯಾಳಪಡು ತ್ಯಾಜ್ಯ ಡಂಪ್ ಪ್ರಕರಣ: ಗುತ್ತಿಗೆದಾರನಿಂದ ಕಸ ತೆಗೆಸಿ ದಂಡದ ಶಿಕ್ಷೆ
Team Udayavani, Jun 18, 2022, 1:40 AM IST
ಬಂಟ್ವಾಳ: ಫರಂಗಿ ಪೇಟೆ ಭಾಗದಿಂದ ತ್ಯಾಜ್ಯ ಸಂಗ್ರಹದ ಗುತ್ತಿಗೆ ವಹಿಸಿಕೊಂಡ ವ್ಯಕ್ತಿಯೋರ್ವ ಅಮ್ಟಾಡಿ ಗ್ರಾಮದ ಕುರಿಯಾಳಪಡುನಲ್ಲು ಕಸ ತಂದು ಡಂಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಿಂದ ಕಸ ವನ್ನು ತೆಗೆಸುವ ಜತೆಗೆ ದಂಡ ವಿಧಿಸಿದ ಘಟನೆ ಶುಕ್ರವಾರ ನಡೆದಿದೆ.
ಕುರಿಯಾಳಪಡುನಲ್ಲಿ ಗುರುವಾರ ರಾತ್ರಿ ಯಾರೋ ವಾಹನದಲ್ಲಿ ಕಸ ತಂದು ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾ. ಪಂ. ಪಿಡಿಒ ರವಿ ಅವರು ಆರೋಪಿಯ ಕುರಿತು ಯಾವುದಾದರೂ ಸುಳಿವು ಸಿಗುತ್ತದೆಯೇ ಎಂದು ತನಿಖೆ ನಡೆಸಲು ಮುಂದಾದರು.
ಆ ವೇಳೆ ಗ್ರಾ.ಪಂ.ನ ಬಿಲ್ ಕಲೆಕ್ಟರ್ ಚೇತನ್ಗೆ ಕಸದ ರಾಶಿಯಲ್ಲಿ ಫರಂಗಿಪೇಟೆ ಬಾರೊಂದರ ಬಿಲ್ ಸಿಕ್ಕಿತು. ಅದರ ಆಧಾರದಲ್ಲಿ ಮಾಹಿತಿ ಸಂಗ್ರಹಿಸಿದಾಗ ಅದು ಪುದು ಗ್ರಾ.ಪಂ. ವ್ಯಾಪ್ರಿಯ ತ್ಯಾಜ್ಯ ಎಂಬ ವಿಚಾರ ಖಚಿತವಾಯಿತು. ಮುಂದೆ ಗ್ರಾ.ಪಂ.ನಲ್ಲಿ ವಿಚಾರಿಸಿ ಅದು ಗುತ್ತಿಗೆ ವಹಿಸಿಕೊಂಡ ವ್ಯಕ್ತಿಯ ಕೃತ್ಯ ಎಂದು ಖಚಿತವಾಯಿತು.
ಕಸದ ಗುತ್ತಿಗೆ ವಹಿಸಿಕೊಂಡ ವ್ಯಕ್ತಿಯನ್ನು ಸ್ಥಳಕ್ಕೆ ಕರೆಸಿ ಆತನಿಂದಲೇ ಕಸ ತೆಗೆಸಿ 5 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ. ಅಮ್ಟಾಡಿ ಗ್ರಾ.ಪಂ.ನ ಈ ಕಾರ್ಯಾಚರಣೆಯಲ್ಲಿ ಪಿಡಿಒ ಅವರ ಜತೆಗೆ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ ಹಾಗೂ ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ