ಬಿ.ಸಿ.ರೋಡ್: ಸಂಚಾರ ಪೊಲೀಸರಿಂದ ಕಾರ್ಯಾಚರಣೆ
Team Udayavani, Apr 24, 2020, 5:47 AM IST
ಬಂಟ್ವಾಳ: ಲಾಕ್ಡೌನ್ ಆದೇಶ ಮೀರಿ ಅಗತ್ಯ ವಸ್ತುಗಳ ನೆಪದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದವರಿಗೆ ಗುರುವಾರ ಬಿ.ಸಿ. ರೋಡ್ನಲ್ಲಿ ಬಂಟ್ವಾಳ ಸಂಚಾರಿ ಪೊಲೀಸರು ಕಾನೂನಿನ ಬಿಸಿ ಮುಟ್ಟಿಸಿದ್ದಾರೆ.
ಗುರುವಾರ ಬೆಳಗ್ಗೆಯೇ ಕಾರ್ಯಾ ಚರಣೆಗಿಳಿದ ಬಂಟ್ವಾಳ ಸಂಚಾರಿ ಠಾಣೆಯ ಪಿಎಸ್ಐ ರಾಮ ನಾಯ್ಕ ಹಾಗೂ ಸಿಬಂದಿ ಅನಗತ್ಯ ತಿರುಗಾಟ ನಡೆಸಿದವರಿಗೆ ಎಚ್ಚರಿಕೆ ನೀಡುವ ಜತೆಗೆ ಸಾಕಷ್ಟು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.ಲಾಕ್ಡೌನ್ ಆದೇಶದ ಪ್ರಕಾರ ಅಗತ್ಯ ವಸ್ತುಗಳ ಖರೀದಿಯ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಒಬ್ಬರೇ ತೆರಳಬೇಕು. ಆಟೋ ರಿಕ್ಷಾ, ಕಾರುಗಳಲ್ಲಿ ಚಾಲಕ ಹೊರತುಪಡಿಸಿ ಹಿಂಬದಿ ಒಬ್ಬರಿಗೆ ಮಾತ್ರ ಪ್ರಯಾಣಿಸುವುದಕ್ಕೆ ಅವಕಾಶವಿದೆ. ಆದರೆ ಜನತೆ ಅದನ್ನೆಲ್ಲಾ ಗಾಳಿಗೆ ತೂರಿ ತಿರುಗಾಟ ನಡೆಸುತ್ತಿದ್ದರು.
ಪ್ರಸ್ತುತ ಬಂಟ್ವಾಳ ಪೇಟೆ ಸೀಲ್ಡೌನ್ ಆಗಿರುವುದರಿಂದ ಬಿ.ಸಿ.ರೋಡ್ನಲ್ಲಿ ಜನರ ಓಡಾಟವೂ ಹೆಚ್ಚಾಗಿದೆ. ಹೀಗಾಗಿ ಸಾಮಾಜಿಕ ಅಂತರಕ್ಕೂ ತೊಂದರೆ ಎದುರಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಬಿ.ಸಿ.ರೋಡ್ನಲ್ಲಿ ಕಾರ್ಯಾಚರಣೆ ನಡೆಸಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು