ಬಿ.ಸಿ.ರೋಡ್‌ನ‌ ರಂಗಮಂದಿರ ಇನ್ನು ನೆನಪು ಮಾತ್ರ


Team Udayavani, May 7, 2021, 4:00 AM IST

ಬಿ.ಸಿ.ರೋಡ್‌ನ‌ ರಂಗಮಂದಿರ ಇನ್ನು ನೆನಪು ಮಾತ್ರ

ಬಂಟ್ವಾಳ: ತಾಲೂಕಿನ ಸಾವಿರಾರು ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ವೇದಿಕೆಯಾಗಿದ್ದ ಬಿ.ಸಿ.ರೋಡ್‌ನ‌ ಮಿನಿ ವಿಧಾನಸೌಧದ ಮುಂಭಾಗದಲ್ಲಿರುವ ಸುಮಾರು 4 ದಶಕಗಳಷ್ಟು ಹಳೆಯದಾದ ರಂಗಮಂದಿರ ಇನ್ನು ನೆನಪು ಮಾತ್ರ.

ಕೈಕುಂಜೆ ರಸ್ತೆ ಅಭಿವೃದ್ಧಿಯ ದೃಷ್ಟಿಯಿಂದ ಈ ರಂಗಮಂದಿರವನ್ನು ತೆರವುಗೊಳಿಸುವ ಕಾರ್ಯ ಗುರುವಾರ ಆರಂಭಗೊಂಡಿದೆ.

ಕಳೆದ ಹಲವು ವರ್ಷಗಳಿಂದ ಯಾವುದೇ ಉಪಯೋಗವಿಲ್ಲದೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿ ಸಲಾಗಿತ್ತು. 1983ರಲ್ಲಿ ಅಂದಿನ ತಹಶೀ ಲ್ದಾರ್‌ ಆಗಿದ್ದ ಆರ್‌.ಕೆ.ರಾಜು ಅವರ ಅವಧಿಯಲ್ಲಿ ತಾಲೂಕು ಕಚೇರಿಯ ಹಳೆ ಕಟ್ಟಡದ ಮುಂಭಾಗದಲ್ಲಿ ಈ ರಂಗಮಂದಿರ ನಿರ್ಮಾಣಗೊಂಡಿತ್ತು.

ಈ ರೀತಿ ನಿರ್ಮಾಣಗೊಂಡಿದ್ದ ರಂಗ ಮಂದಿರಕ್ಕೆ ಶೌಚಾಲಯ ಸೇರಿದಂತೆ ಹಲವಾರು ಮೂಲಸೌಕರ್ಯಗಳ ಬೇಡಿಕೆಯ ಮಧ್ಯೆಯೇ ಇಲ್ಲಿ ಸಾವಿ ರಾರು ಕಾರ್ಯಕ್ರಮಗಳು ನಡೆದು ಹೋಗಿತ್ತು. ಪ್ರಸ್ತುತ ರಂಗಮಂದಿರ ತೆರವು ಗೊಳ್ಳುವವರೆಗೂ ರಂಗಮಂದಿರದ ಮೂಲ ಸೌಕರ್ಯದ ಬೇಡಿಕೆ ಈಡೇರಲೇ ಇಲ್ಲ.

ಇಂತಹ ಇಲ್ಲಗಳ ಮಧ್ಯೆಯೇ ನಾಟಕ, ನೃತ್ಯ, ಸಂಗೀತ, ಯಕ್ಷಗಾನ, ವಾರ್ಷಿಕೋತ್ಸವ, ರಾಜಕೀಯ ಸಭೆ ಮೊದಲಾದ ಸಾವಿರಾರು ಕಾರ್ಯಕ್ರಮಗಳು ನಡೆದಿವೆ. ಕಳೆದ ಕೆಲವು ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯದೆ ತೀರಾ ಹಳೆಯ ಕಟ್ಟಡದಂತೆ ಕಾಣುತ್ತಿತ್ತು.

ಈ ರಂಗಮಂದಿರಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಿಂತ ಬಳಿಕ ಬಂಟ್ವಾಳಕ್ಕೆ ರಂಗಮಂದಿರವೊಂದು ಬೇಕು ಎಂಬ ಬೇಡಿಕೆ ಕೇಳಿಬರುತ್ತಿತ್ತು. ಹಿಂದೊಮ್ಮೆ ಬಿ.ಸಿ.ರೋಡ್‌ನ‌ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ರಂಗಮಂದಿರ ನಿರ್ಮಾಣದ ಮಾತುಗಳು ಕೇಳಿಬಂದಿದ್ದು, ಆದರೆ ಅದು ನಿರ್ಮಾಣಗೊಂಡಿಲ್ಲ.ರಂಗಮಂದಿರವು ರಸ್ತೆಗೆ ತಾಗಿಕೊಂಡಿರುವುದರಿಂದ ಪ್ರಸ್ತುತ ಕಾಮಗಾರಿ ಮುಂದುವರಿಯಲು ರಂಗ ಮಂದಿರ ತೆರವುಗೊಳ್ಳುತ್ತಿದ್ದು, ಗುರು ವಾರ ಅದರ ಒಳಗಿದ್ದ ಸೊತ್ತುಗಳು, ಮೇಲ್ಛಾವಣಿ ಯನ್ನು ತೆರವುಗೊಳಿಸುವ ಕಾರ್ಯ ನಡೆದಿದೆ. ಮುಂದೆ ಜೇಸಿಬಿ ಯಂತ್ರದ ಮೂಲಕ ಪೂರ್ಣವಾಗಿ ನೆಲಸಮಗೊಳಿಸಲಾಗುತ್ತಿದೆ.

ಅಟಲ್‌ ಜನಸ್ನೇಹಿ ಕೇಂದ್ರ :

ಈ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಿಂತು ಹೋದ ಬಳಿಕ ಹಾಗೇ ಉಳಿದಿದ್ದ ರಂಗಮಂದಿರದಲ್ಲಿ ಬಂಟ್ವಾಳ ತಾಲೂಕು ಕಚೇರಿಯ ಅಟಲ್‌ ಜನಸ್ನೇಹಿ ಕೇಂದ್ರ ಕಾರ್ಯಾಚರಿಸುತ್ತಿತ್ತು. ಇದನ್ನು ಕೇಂದ್ರಕ್ಕೆ ಬೇಕಾದ ರೀತಿಯಲ್ಲಿ ಪರಿವರ್ತನೆಗೊಳಿಸಲಾಗಿತ್ತು. ಜನಸ್ನೇಹಿ ಕೇಂದ್ರವು ಮಿನಿ ವಿಧಾನಸೌಧಕ್ಕೆ ಸ್ಥಳಾಂತರ ಗೊಂಡ ಬಳಿಕ ರಂಗಮಂದಿರ ಪಾಳು ಬಿದ್ದ ಸ್ಥಿತಿಯಲ್ಲಿತ್ತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.