ಅವಕಾಶ ದೊರೆತರೆ ಸಾಧನೆ: ರಾಜೇಶ್‌


Team Udayavani, Feb 24, 2019, 6:24 AM IST

24-february-7.jpg

ಬಂಟ್ವಾಳ: ವಿಶಿಷ್ಟ ಮಕ್ಕಳಿಗೆ ಅವಕಾಶಗಳು ಸಿಕ್ಕಿದರೆ ಯಾವ ರೀತಿಯಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಗೆದ್ದು ಬಂದಿರುವ ವಿದ್ಯಾರ್ಥಿನಿ ಯಶಸ್ವಿನಿಯೇ ಸಾಕ್ಷಿ. ಅವರಿಗೆ ಇನ್ನಷ್ಟು ಉತ್ತಮ ಅವಕಾಶಗಳ ವೇದಿಕಗಳನ್ನು ನೀಡುವ ಕೆಲಸ ಆಗಬೇಕಾಗಿದೆ. ಅವರಲ್ಲಿ ಇರುವಂತಹ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ, ಮುಖ್ಯವಾಹಿನಿಗೆ ಮುಟ್ಟಿಸುವಲ್ಲಿ ಹಾಕಿಕೊಂಡಿರುವ ಕಾರ್ಯಕ್ರಮ ಅಭಿನಂದನೀಯ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಫೆ. 23ರಂದು ಬಿ.ಸಿ. ರೋಡ್‌ ಸ್ವರ್ಶ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನ ಮಕ್ಕಳ ಹಬ್ಬವನ್ನು ಉದ್ದೇಶಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್‌ ಕ್ರೀಡಾಪಟು ಯಶಸ್ವಿನಿ ದೀಪ ಬೆಳಗಿಸಿ ಉದ್ಘಾಟಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ವಿವಿಧ ಶಿಕ್ಷಕರ ಸಂಘ ಹಾಗೂ ನೌಕರರ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಆಕಾಶ ಮುಟ್ಟುತ್ತಾರೆ ಎಂದರು.

ಕವನ ಸಂಕಲನ ಬಿಡುಗಡೆ
ವಿಶೇಷ ಚೇತನ ಮಕ್ಕಳು ಬರೆದ ಕವನ ಸಂಕಲನ ಬಿಡುಗಡೆ ನಡೆಯಿತು. ಕವನಸಂಕಲನ ಬರೆದ ವಿಶಿಷ್ಟ ಮಕ್ಕಳಾದ ಕೌಶಿಕ್‌ ಕಂಚಿಕಾರ್‌ ಪೇಟೆ, ಭಾಗ್ಯಶ್ರೀ ಕುರಿಯಾಳ, ಸಾಧನೆಗೈದ ಚೆಸ್‌ ಕ್ರೀಡಾಪಟು ಯಶಸ್ವಿನಿ, ಚಂದ್ರಿಕಾ, ಶ್ರೀಕೃಷ್ಣ, ಮಹಮ್ಮದ್‌ ಜುನೈದ್‌, ಬಿ. ಪಾತುಮಾ ಅವರನ್ನು ಸಮ್ಮಾನಿಸಲಾಯಿತು.

ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಎಂ.ಎಸ್‌. ಮಹಮ್ಮದ್‌, ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯರಾದ ಪ್ರಭಾಕರ ಪ್ರಭು, ಸಂಜೀವ ಪೂಜಾರಿ, ಶಾರದ ಪ್ರೌ. ಶಾಲಾ ಸಂಚಾಲಕ ವೇ| ಮೂ| ಜನಾರ್ದನ ಭಟ್‌, ಡಯಟ್‌ ಸಂಸ್ಥೆ ಯ ಪ್ರಾಂಶುಪಾಲ ಸಿಪ್ರಿಂಯಾನ್‌ ಮೊಂತೆರೋ, ಜೇಮ್ಸ್‌ ಸಂಸ್ಥೆಯ ಅಧಿಕಾರಿ ಕುಟಿನ್ಹೋ, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ , ಶಿಕ್ಷಣ ಪರಿವೀಕ್ಷಣಾಧಿಕಾರಿ ರಘುನಾಥ್‌, ಸ. ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಸ್ಪರ್ಶ ಕಲಾ ಮಂದಿರದ ಮಾಲಕ ಸುಭಾಶ್ಚಂದ್ರ ಜೈನ್‌, ಚುಟುಕು ಸಾ.ಪ. ಅಧ್ಯಕ್ಷ ನೇಮು ಪೂಜಾರಿ ಇರಾ, ಸ. ನೌಕರರ ವಿವಿಧ ಸಂಘಟನೆಗಳ ಅಧ್ಯಕ್ಷರಾದ ಗಂಗಾಧರ ರೈ, ಶಿವಪ್ರಸಾದ್‌, ರಮಾನಂದ, ಜೋಯೆಲ್‌ ಲೋಬೋ, ಜತ್ತಪ್ಪ, ಸುರೇಶ್‌,  ಚಿನ್ನಪ್ಪ, ಸಂತೋಷ್‌, ಚೆನ್ನಕೇಶವ, ಮಹಮ್ಮದ್‌ ತುಂಬೆ, ರಾಜೇಶ್‌, ಅಖಿಲ್‌ ಶೆಟ್ಟಿ, ಜಗದೀಶ್‌ ಬಾಳ್ತಿಲ, ಯುವಜನ ಸಬಲೀಕರಣ ಅಧಿ ಕಾರಿ ನವೀನ್‌ ಪಿ.ಎಸ್‌., ಕಾರ್ಯಕ್ರಮ ಸಂಯೋಜಕಿ ಸುರೇಖಾ ಉಪಸ್ಥಿತರಿದ್ದರು. ಸಮನ್ವಯ ಅಧಿಕಾರಿ ರಾಧಾಕೃಷ್ಣ ಭಟ್‌ ಸ್ವಾಗತಿಸಿ, ಶಿಕ್ಷಕ ರಾಮಚಂದ್ರ ರಾವ್‌ ನಿರೂಪಿಸಿದರು.

ವೈಶಿಷ್ಟ್ಯಗಳು
·ಬಂಟ್ವಾಳ ತಾಲೂಕಿನಾದ್ಯಂತದ ಮುನ್ನೂರಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳು ಪಾಲ್ಗೊಂಡಿದ್ದರು. 
·ಕಲಾ ಮಂದಿರದ ಮುಂಭಾಗದಲ್ಲಿ ಎಲ್ಲರಿಗೂ ಕಬ್ಬಿನ ಹಾಲು ಉಚಿತವಾಗಿ ನೀಡಲಾಗುತ್ತಿತ್ತು.
·30ಕ್ಕೂ ಹೆಚ್ಚು ಸ್ಟಾಲ್‌ಗ‌ಳಲ್ಲಿ ವಿಶೇಷ ಚೇತನ ಮಕ್ಕಳಿಗೆ ಅವರು ಬಯಸಿದ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು.
·ವಿಶೇಷ ಚೇತನ ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಮಕ್ಕಳಿಗೆ ವಿಶಿಷ್ಟ ಆಟಗಳ ಸರಣಿಗಳು.
·ವಿಶೇಷವಾಗಿ ಸ್ವಾಗತಿಸಿಲು ವಾದ್ಯವೃಂದ ಹಾಗೂ ಬೊಂಬೆಗಳ ಮೆರುಗು, ಕ್ಲೇ ಮಾಡಲಿಂಗ್‌, ವಿವಿಧ ರೀತಿಗಳ ಕ್ರಾಫ್ಟ್‌ಗಳು, ವರ್ಣಮಯ ಚಿತ್ರಗಳನ್ನು ಬರೆಯಲು ಮಕ್ಕಳಿಗೆ
ಅವಕಾಶ ಕಲ್ಪಿಸಲಾಗಿತ್ತು.
·ಕರಕುಶಲ ವಸ್ತುಗಳ ಪ್ರದರ್ಶನ, ಸಾಧಕರೊಂದಿಗೆ ಸಂವಾದ, ಸ್ಮರಣೀಯ ಆಟಿಕೆಗಳ ಸ್ಟಾಲುಗಳು, ನುರಿತರಿಂದ ಮಾಹಿತಿಗಳ ಮಹಾಪೂರ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.