ಬೆಳ್ಳಾರೆ: ರಸ್ತೆಯಲ್ಲೇ ಹರಿಯುತ್ತಿದೆ ಚರಂಡಿ ನೀರು

ಅಸಮರ್ಪಕ ಚರಂಡಿ ವ್ಯವಸ್ಥೆ ಕಾರಣ: ಸ್ಥಳೀಯರಲ್ಲಿ ರೋಗ ಭೀತಿ

Team Udayavani, Jun 14, 2019, 6:00 AM IST

u-35

ಬೆಳ್ಳಾರೆ: ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ಬಂತೆಂದರೆ ಬೆಳ್ಳಾರೆ ಪೇಟೆ ಹೊಳೆಯಂತಾಗಿ ಕೆಸರು ಮಯವಾಗುತ್ತದೆ. ಚರಂಡಿ ನೀರು ಹರಿದು ಪೇಟೆಯ ರಸ್ತೆಯೂ ಹದಗೆಡುತ್ತಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಎದುರಿಸುವಂತಾಗಿದೆ.

ಬೆಳ್ಳಾರೆ ಮೇಲಿನ ಪೇಟೆಯ ಬಸ್‌ ನಿಲ್ದಾಣದ ಎದುರು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು, ಕೆಸರು ನೀರು ನಿಂತು ಬಸ್‌ ಬಂದಾಗ ಪ್ರಯಾಣಿಕರಿಗೆ ಕೆಸರಿನ ಅಭಿಷೇಕವಾಗುತ್ತಿದೆ. ಬಸ್‌ ನಿಲ್ದಾಣದ ಬಳಿ ಮಾತ್ರವಲ್ಲದೆ ಕೇಳಗಿನ ಪೇಟೆಯಿಂದ ಮೇಲಿನ ಪೇಟೆಯ ವರೆಗೂ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಚರಂಡಿ ನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆ ಬದಿಯಲ್ಲಿ ಕೆಸರು ನಿಂತು ಪಾದಾಚಾರಿಗಳಿಗೆ ನಡೆದಾಡಲೂ ಅಸಾಧ್ಯವಾಗಿದೆ.

ಪಾದಾಚಾರಿಗಳಿಗೂ ಸಂಕಷ್ಟ
ಅಸಮರ್ಪಕ ಸ್ಲಾಬ್‌ ಅಳವಡಿಕೆಯಿಂದ ಪೇಟೆಯ ಹಲವು ಕಡೆ ಚರಂಡಿ ನೀರು ರಸ್ತೆಗೆ ಬಂದು ಕೆಸರಾಗುತ್ತಿದೆ. ಇದರಿಂದ ರಸ್ತೆ ಬದಿ ನಡೆದುಕೊಂಡು ಹೋಗುವ ಪಾದಾಚಾರಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ವರ್ಷದ ಮೊದಲ ಮಳೆಗೆ ಬೆಳ್ಳಾರೆ ಪೇಟೆಯಲ್ಲಿ ಹಲವರಿಗೆ ಕೆಸರಿನ ಸಿಂಚನವಾಗಿದೆ. ಬೆಳೆಯುತ್ತಿರುವ ಬೆಳ್ಳಾರೆಯಲ್ಲಿ ಚರಂಡಿ ಅವ್ಯವಸ್ಥೆ ತೀವ್ರವಾಗಿದೆ. ಇಲ್ಲಿಗೆ ಪ್ರತಿನಿತ್ಯ ಬರುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪೇಟೆಯಲ್ಲಿ ನಡೆದಾಡುವಾಗ ತೊಂದರೆ ಅನುಭವಿಸುತ್ತಾರೆ. ಮಳೆಗಾಲಕ್ಕೂ ಮೊದಲೇ ಚರಂಡಿ ಸರಿಪಡಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿದ್ದರೆ ಈ ಸಮಸ್ಯೆ ತಪ್ಪಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ರೋಗ ಭೀತಿ
ಲೋಕೋಪಯೋಗಿ ಇಲಾಖೆ 1 ಕೋಟಿ ರೂ. ಅನುದಾನದಿಂದ ಬೆಳ್ಳಾರೆ ಪೇಟೆಯ ಚರಂಡಿ ದುರಸ್ತಿ ಕಾರ್ಯ ನಡೆಸಿದೆಯಾದರೂ ಕೆಲವೆಡೆ ಅಸಮರ್ಪಕವಾಗಿ ಸ್ಲಾ$Âಬ್‌ ಅಳವಡಿಸಲಾಗಿದೆ. ಹಲವು ಹೊಟೇಲ್‌ಗ‌ಳ ತ್ಯಾಜ್ಯ ಚರಂಡಿ ನೀರು ಸೇರುವುದರಿಂದ ಚರಂಡಿ ಸೊಳ್ಳೆ ಉತ್ಪಾದನೆಯ ಕೇಂದ್ರವಾಗಿ ಬದಲಾಗಿದೆ. ಚರಂಡಿಯಲ್ಲಿ ಎಸೆದ ನೀರಿನ ಬಾಟಲಿ, ಅಂಗಡಿಗಳ ತ್ಯಾಜ್ಯವೂ ಸೇರಿಕೊಂಡು ಅಲ್ಲಲ್ಲಿ ನೀರು ನಿಂತು ದುರ್ವಾಸನೆ ಬೀರುತ್ತಿದೆ.

ಮನವಿ ಸಲ್ಲಿಸಿದ್ದೇವೆ
ಚರಂಡಿ ಸರಿಪಡಿಸಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಬೇಕೆಂದು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಅವರು ಮಾಡದಿದ್ದಲ್ಲಿ ಪಂಚಾಯತ್‌ನಿಂದಲೇ ಚರಂಡಿ ಶುಚಿಗೊಳಿಸಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಲಾಗುವುದು. ಸ್ವತ್ಛತೆಗೆ ಪಂಚಾಯತ್‌ ತ್ಯಾಜ್ಯ ಸಂಗ್ರಹಣ ವಾಹನ ಬೆಳ್ಳಾರೆ ಅಂಗಡಿ ಹಾಗೂ ಹೊಟೇಲ್‌ಗ‌ಳ ಬಾಗಿಲಿಗೆ ಹೋಗುತ್ತಿದ್ದರೂ ಬಾಟಲಿ ಹಾಗೂ ತ್ಯಾಜ್ಯಗಳನ್ನು ಚರಂಡಿಗೆ ಎಸೆಯುತ್ತಿದ್ದಾರೆ. ಈ ರೀತಿ ಮಾಡದಂತೆ ಸೂಚನೆ ನೀಡಿದ್ದೇವೆ.
– ಶಕುಂತಳಾ ನಾಗರಾಜ್‌, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.