ರಜೆಗೆ ದೊಡ್ಡಮ್ಮನ ಮನೆಗೆ ಬಂದಿದ್ದ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ ಸರಕಾರಿ ಸಿಬಂದಿ ವಸತಿಗೃಹದಲ್ಲಿ ಘಟನೆ

Team Udayavani, Apr 30, 2023, 7:25 AM IST

Udayavani Kannada Newspaper

ಬೆಳ್ತಂಗಡಿ: ಚಿತ್ರದುರ್ಗ ಮೂಲದ ಬಾಲಕನೋರ್ವ ರಜೆಯ ನಿಮಿತ್ತ ತನ್ನ ದೊಡ್ಡಮ್ಮನ ಮನೆಗೆ ಬಂದವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಎ. 28 ರಂದು ತಾ.ಪಂ. ಸಮೀಪದ ಸರಕಾರಿ ವಸತಿಗೃಹದ ಕೊಠಡಿಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೊಸ ಎಳನಾಡಿನ ರಮೇಶ್‌ ಹಾಗೂ ಭಾಗ್ಯಮ್ಮ ಅವರ ಪುತ್ರ ಶಿವಪ್ರಸಾದ್‌ (14) ಆತ್ಮಹತ್ಯೆಗೆ ಶರಣಾದ ಬಾಲಕ.

ಹತ್ತು ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ಶಿವಪ್ರಸಾದ್‌ ಆಟ ಆಡುತ್ತ ಲವಲವಿಕೆಯಿಂದ ಇದ್ದ. ಘಟನೆ ಸಂದರ್ಭ ದೊಡ್ಡಮ್ಮ ಮತ್ತು ಅವರ ಮಗ ಕೆಲಸಕ್ಕೆ ತೆರಳಿದ್ದು, ಪುತ್ರಿ ಕಾಲೇಜಿಗೆ ತೆರಳಿದ್ದಳು. ದೊಡ್ಡಮ್ಮ ಕೆಲಸದಿಂದ ಮಧ್ಯಾಹ್ನ ಮನೆಗೆ ಹಿಂದಿರುಗುವ ವೇಳೆ ಶಿವಪ್ರಸಾದ್‌ ಅತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.

ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ, ಮೃತ ಬಾಲಕನ ಹೆತ್ತವರಿಗೆ ಮಾಹಿತಿ ನೀಡಿದ್ದಾರೆ. ಅವರು ಬರುವ ವರೆಗೆ ಮೃತದೇಹ ತೆರವು ಮಾಡದಂತೆ ಕೇಳಿಕೊಂಡಿದ್ದರಿಂದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯನ್ನು ಬೀಗ ಹಾಕಿ ಭದ್ರಗೊಳಿಸಲಾಯಿತು. ಬಳಿಕ ಹೆತ್ತವರ ಸಮಕ್ಷಮದಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ.

ಮೃತ ಶಿವಪ್ರಸಾದ್‌ ಅವರ ತಂದೆ ತಾಯಿ ಇಬ್ಬರು ಕೂಲಿ ಕೆಲಸ ಮಾಡುವವರಾಗಿದ್ದು ಈತ ಚಿತ್ರದುರ್ಗದ ಹೊಸೆಳನಾಡು ಪಬ್ಲಿಕ್‌ ಶಾಲೆಯಲ್ಲಿ 9ನೇ ತರಗತಿ ತೇರ್ಗಡೆ ಹೊಂದಿದ್ದ.

ರಜೆಯಲ್ಲಿ ಬಂದಿದ್ದ ಶಿವಪ್ರಸಾದ್‌ ದೊಡ್ಡಮ್ಮನ ಮಗನೊಂದಿಗೆ ಹಿಂದಿನ ದಿನ ಮಂಗಳೂರು ಮಾಲ್‌ಗೆ ತೆರಳಿದ್ದು ಶುಕ್ರವಾರ ಬೆಳಗ್ಗೆ ವ್ಯಾಯಾಮ ಶಾಲೆಗೆ ತೆರಳಿದ್ದರು. ಆದರೆ ಬಳಿಕ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಪೊಲೀಸ್‌ ತನಿಖೆಯಿಂದಷ್ಟೆ ತಿಳಿದುಬರಬೇಕಿದೆ.
ಮೃತ ಶಿವಪ್ರಸಾದ್‌ ತಂದೆ, ತಾಯಿ, ಇಬ್ಬರು ಅಕ್ಕಂದಿರು, ತಂಗಿ ಯನ್ನು ಅಗಲಿದ್ದಾನೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.