ಬೆಳ್ತಂಗಡಿ: ಹೃದಯಾಘಾತದಿಂದ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ್ ಸಾವು
Team Udayavani, Aug 24, 2022, 5:33 PM IST
ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ (52) ಅವರು ಆ. 23ರಂದು ಹೃದಯಾಘಾತದಿಂದ ಪುಂಜಾಲಕಟ್ಟೆಯ ತಮ್ಮ ಬಾಡಿಗೆ ಮನೆಯಲ್ಲಿ ಸಾವನ್ನಪ್ಪಿದರು.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾದ ಗುತ್ತಿಕಟ್ಟಿ ಲಂಬಾಣಿ ಹಟ್ಟಿಯವರಾದ ಅವರು ಪುಂಜಾಲಕಟ್ಟೆಯ ಪಿಲಾತಬೆಟ್ಟು ಬೆರ್ಕಳ ರಸ್ತೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಶನಿವಾರ ಪತ್ನಿ ಹಾಗೂ ಮಕ್ಕಳು ರಜೆಯ ನಿಮಿತ್ತ ಊರಿಗೆ ತೆರಳಿದ್ದರು. ಮಂಗಳವಾರ ಹಿಂದಿರುಗಿ ಬಂದಾಗ ಘಟನೆ ತಿಳಿದುಬಂದಿದೆ. ತತ್ಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತಪಟ್ಟಿರುವುದು ಖಚಿತವಾಗಿದೆ.
ಮೃತ ವೀರೇಂದ್ರ ಪಾಟೀಲ ಅವರು ಈ ಹಿಂದೆ ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ನೆರಿಯ ಶಾಲೆಯಲ್ಲಿ ಕರ್ತವ್ಯದಲ್ಲಿದ್ದು ಕಳೆದ ಮೂರು ತಿಂಗಳ ಹಿಂದೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಪಿಲಿಗೂಡು ಹಿ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ವಿರೂಪಾಕ್ಷಪ್ಪ, ಶಾಸಕ ಹರೀಶ್ ಪೂಂಜ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಣ ಇಲಾಖೆ ಸಂತಾಪ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ