ಅಡುಗೆ ಅನಿಲ ಸಂಪರ್ಕ ಬಾಕಿ: ಕುಟುಂಬಗಳ ಗುರುತಿಗೆ ಸೂಚನೆ


Team Udayavani, Feb 3, 2019, 6:42 AM IST

3-february-8.jpg

ಬೆಳ್ತಂಗಡಿ : ಹೊಗೆ ಮುಕ್ತ ತಾ| ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ವಿತರಣೆಗೆ ಬಾಕಿ ಉಳಿದಿರುವ ಕುಟುಂಬಗಳಿಗೆ ಶೀಘ್ರ ಅಡುಗೆ ಅನಿಲ ಸಂಪರ್ಕ ನೀಡಬೇಕಿದೆ. ಪ್ರಧಾನ ಮಂತ್ರಿ ಉಜ್ವಲ ಪ್ಲಸ್‌ ಮೂಲಕ ಯಾವುದೇ ನಿಬಂಧನೆಗಳಿಲ್ಲದೆ ಸೌಲಭ್ಯ ವಿತರಿಸ ಬಹುದಾಗಿದ್ದು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಬಾಕಿ ಉಳಿದ ಕುಟುಂಬ ಗಳನ್ನು ಗುರುತಿಸುವ ಕುರಿತು ಕ್ರಮ ಜರಗಿಸಬೇಕಿದೆ ಎಂದು ಶಾಸಕ ಹರೀಶ್‌ ಪೂಂಜ ಸೂಚನೆ ನೀಡಿದರು.

ಶನಿವಾರ ಇಲ್ಲಿನ ತಾ.ಪಂ. ಸಭಾಂ ಗಣದಲ್ಲಿ ತಾ|ನ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯದಲ್ಲೇ ಮೊದಲ ಬಾರಿಗೆ ಅರಣ್ಯ ದಂಚಿನ 5 ಸಾವಿರ ಕುಟುಂಬಗಳಿಗೆ ಅಡುಗೆ ಅನಿಲ ಸೌಲಭ್ಯ ವಿತರಿಸಲಾಗಿದೆ. ಒಟ್ಟು 10,573 ಕುಟುಂಬಗಳಿಗೆ ಸೌಲಭ್ಯ ವಿತರಿಸಲಾ ಗಿದ್ದು, 4,700 ಕುಟುಂಬಗಳಿಗೆ ವಿತ ರಣೆಗೆ ಬಾಕಿ ಇದೆ ಎಂದು ಅಂಕಿಅಂಶ ಹೇಳುತ್ತಿದೆ. ಆದರೆ ಕೆಲವೊಂದು ಗ್ರಾ.ಪಂ.ಗಳಲ್ಲಿ ಹೆಚ್ಚಿನ ಕುಟುಂಬಗಳಿಗೆ ವಿತರಣೆಗೆ ಬಾಕಿ ಇದ್ದು, ಗ್ಯಾಸ್‌ ಏಜೆನ್ಸಿಗಳ ಮೂಲಕ ಅರ್ಜಿ ಪಡೆದು ವಿತರಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಪ್ರತಿ ಮನೆ ಮನೆಯ ವರದಿ ಸಂಗ್ರಹಿಸಿ, ಹೊಗೆ ಮುಕ್ತ ತಾಲೂಕು ಘೋಷಣೆಗೆ ಸಹಕರಿಸುವಂತೆ ತಿಳಿಸಿದರು.

ನಿವೇಶನ ಹಂಚಿಕೆಗೆ ಕ್ರಮ
ತಾ|ನಲ್ಲಿ ನಿವೇಶನ ವಿತರಣೆ ಕುರಿತು ಹಲವು ದೂರುಗಳು ಬರು ತ್ತಿವೆ ಎಂದ ಶಾಸಕರು, ಪ್ರತಿ ಗ್ರಾ.ಪಂ.ಗಳ ಪಿಡಿಒಗಳಿಂದ ಲಭ್ಯ ಸರಕಾರಿ ಜಾಗದ ಮಾಹಿತಿ, ನಿವೇಶನ ಹಂಚಿಕೆಗೆ ತೆಗೆದುಕೊಂಡ ಕ್ರಮ, ನಿವೇಶನದ ಬೇಡಿಕೆ ಕುರಿತು ಮಾಹಿತಿ ಪಡೆದರು.

ಹೆಚ್ಚಿನ ಗ್ರಾ.ಪಂ.ಗಳಲ್ಲಿ ಅರಣ್ಯ ಇಲಾಖೆ ಆಕ್ಷೇಪದ ಕುರಿತು ತಿಳಿಸಿದರು. ಅಂತಹ ಆಕ್ಷೇಪ ಬಂದರೆ ಅವುಗಳನ್ನು ತನಿಖೆ ಮಾಡಿ, ನಿವೇಶನಕ್ಕೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. ಬಡ ಕುಟುಂಬ ಗಳಿಗೆ ಸ್ವಂತ ನಿವೇಶನ ನೀಡಿದರೆ ನಿಮಗೂ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.

ನೆರಿಯ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರು ನಿಲ್ಲುವ ಪ್ರದೇಶಕ್ಕೆ ಮಣ್ಣು ಹಾಕಿ ನಿವೇಶನ ಹಂಚಿಕೆಗೆ ಮಾಡುವುದನ್ನು ನಿಲ್ಲಿಸಿ, ಪ್ರತ್ಯೇಕ ಸರಕಾರಿ ಸ್ಥಳವನ್ನು ಗುರುತಿಸಿ. ನೀರು ನಿಲ್ಲುವ ಪ್ರದೇಶದಿಂದ ಸಾಕಷ್ಟು ಪ್ರಯೋಜನಗಳಿವೆ ಎಂದು ನೆರಿಯ ಪಿಡಿಒಗೆ ತಿಳಿಸಿದರು.

ಪ್ರತಿ ಗ್ರಾಮಗಳಲ್ಲಿ ಹಿಂದೂ ರುದ್ರ ಭೂಮಿ ಅಗತ್ಯವಾಗಿದ್ದು, ಹೀಗಾಗಿ ನಿವೇ ಶನ ಕಾಯ್ದಿರಿಸಲು ಕ್ರಮ ಕೈಗೊಳ್ಳಬೇಕು. ಬಾಕಿಯಿರುವ ನಿಡ್ಲೆ ಗ್ರಾ.ಪಂ.ನಲ್ಲಿ ರುದ್ರಭೂಮಿಗೆ ಶೀಘ್ರ ಕ್ರಮವಾಗಬೇಕು ಎಂದರು. ತಾಲೂಕಿನ 15 ಗ್ರಾ.ಪಂ.ಗಳಲ್ಲಿ ರುದ್ರಭೂಮಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್‌ ಬಿ. ತಿಳಿಸಿದರು. ಗ್ರಾ.ಪಂ.ಗಳಲ್ಲಿ ಆರ್‌ಟಿಸಿ ಹಾಗೂ ಆಧಾರ್‌ ಕಾರ್ಡ್‌ ನೀಡುವ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿದರು.

ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌ ಉಪಸ್ಥಿತರಿದ್ದರು. ತಾಲೂಕು ಸಂಯೋಜಕ ಜಯಾನಂದ ಲಾೖಲ ಸ್ವಾಗತಿಸಿ, ವಂದಿಸಿದರು.

ಕೆರೆಗಳ ಅಭಿವೃದ್ಧಿ ಅಗತ್ಯ 
ಪ್ರಸ್ತುತ ಇತರ ಜಿಲ್ಲೆಗಳಲ್ಲಿ ಕಾಡುತ್ತಿರುವ ಜಲಕ್ಷಾಮ ನಮ್ಮ ತಾಲೂಕಿಗೂ ಬಾರದಂತೆ ಕ್ರಮ ಕೈಗೊಳ್ಳಲು ತಾ|ನ ಸಾರ್ವಜನಿಕ ಕೆರೆಗಳ ಅಭಿವೃದ್ಧಿಗೆ ಪಿಡಿಒಗಳು ಹೆಚ್ಚಿನ ಮುತುವರ್ಜಿ ವಹಿಸ ಬೇಕಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆರೆಗಳ ಹೂಳೆತ್ತುವುದಕ್ಕೆ ಅವಕಾಶವಿದ್ದು, ಗ್ರಾ.ಪಂ. ವ್ಯಾಪ್ತಿಯಲ್ಲಿ ಲಭ್ಯವಿ ರುವ ಕೆರೆಗಳ ಮಾಹಿತಿ ಸಂಗ್ರಹಿಸಬೇಕು. ಜತೆಗೆ ಒತ್ತುವರಿ ಕುರಿತೂ ಕ್ರಮ ಜರಗಿಸಬೇಕಾಗಿದ್ದು, ಕೆರೆಗಳ ಅಭಿವೃದ್ಧಿಗೆ ತಾನೂ ಅನುದಾನ ನೀಡುವುದಾಗಿ ಶಾಸಕ ಪೂಂಜ ಭರವಸೆ ನೀಡಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.