Belthangady ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ


Team Udayavani, Mar 10, 2024, 12:49 AM IST

Belthangady ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ

ಬೆಳ್ತಂಗಡಿ: ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್‌ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.

ಮಾ. 5ರಂದು ಪಲ್ಸ್‌ ಪೋಲಿಯೋ ಬಗ್ಗೆ ಗ್ರಾಮದಲ್ಲಿ ಮನೆ ಭೇಟಿ ವೇಳೆ ಅಂಗನವಾಡಿ ಕಾರ್ಯಕರ್ತೆ ಜತೆ ಮಾಧವ ಕುಲಾಲ್‌ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ, ಮಾನಕ್ಕೆ ಕುಂದುಂಟು ಮಾಡಿ, ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸ್‌ ಮೇಲೆ ಹಲ್ಲೆಗೆ ಯತ್ನ, ಐವರ ಸೆರೆ
ಬೆಳ್ತಂಗಡಿ: ಇಲ್ಲಿನ ತೆಂಕ ಕಾರಂದೂರು ಗ್ರಾಮದ ಪೆರಾಲ್ದ ಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ದಾಂಧಲೆ ನಡೆಸುತ್ತಿದ್ದವರನ್ನು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಈ ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿಯ ಮಹೇಶ್‌, ಸುರೇಶ್‌, ಅರುಣ್‌ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಠಾಣೆಯ ಎ.ಎಸ್‌.ಐ. ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದರು.

ಯುವಕರು ಸೋಡಾ ಬಾಟಲಿಗಳನ್ನು ಒಡೆದು ಹಾಕಿರುವುದನ್ನು ರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟುಗೊಂಡ ಆ ತಂಡ ಅವರ ಮೇಲೆ ದಾಳಿ ನಡೆಸಿದ್ದಲ್ಲದೇ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರಾಮಯ್ಯ ಅವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ: ವಿದ್ಯಾರ್ಥಿ ಆತ್ಮಹತ್ಯೆ
ಬೆಳ್ತಂಗಡಿ: ಮುಳಿಕ್ಕಾರು ನಿವಾಸಿ, ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ವಿಘ್ನೇಶ್ (19) ಮಾ.9ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.