ಬೆಳ್ತಂಗಡಿ: ಅರಣ್ಯ ಇಲಾಖೆ ಗೋದಾಮಿಗೆ ಸಿಸಿ ಕೆಮರಾ
ಶ್ರೀಗಂಧದ ಕೊರಡು ಕಳವಾದ ಬೆನ್ನಲ್ಲೇ ಎಚ್ಚೆತ್ತ ಇಲಾಖೆ
Team Udayavani, Aug 4, 2019, 5:00 AM IST
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿಯಿರುವ ಅರಣ್ಯ ಇಲಾಖೆಯ ಗೋದಾಮಿನಲ್ಲಿ ದಾಸ್ತಾನಿರಿಸಲಾಗಿದ್ದ ಸುಮಾರು 14 ಲಕ್ಷ ರೂ. ಮೌಲ್ಯದ 350 ಕೆ.ಜಿ. ಶ್ರೀಗಂಧದ ಕೊರಡು ಜು.13ರಂದು ಕಳವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಗೊದಾಮು, ಅರಣ್ಯ ಇಲಾಖೆ ಕಚೇರಿಗೆ ಸಿಸಿ ಕೆಮರಾ ಅಳವಡಿಸಿದೆ.
ಅರಣ್ಯ ಇಲಾಖೆ ಯವರು ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದು ಗೋದಾ ಮಿನಲ್ಲಿದ್ದ ಶ್ರೀಗಂಧದ ಕೊರಡುಗಳು ಕಾಣೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಈ ವರೆಗೂ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ. ಈ ಹಿಂದೆ 1997ರಲ್ಲೂ ಅರಿವಿಗೆ ಬಾರದಂತೆ ಇಲ್ಲಿ ಕಳವಾಗಿತ್ತು.
ಕಳ್ಳರು ಬೀಗ ತುಂಡು ಮಾಡಿ ಒಳಗೆ ಪ್ರವೇಶಿಸಿದ್ದು, ಬಳಿಕ ಗಮ್ಮಿನ ಮೂಲಕ ಅಂಟಿಸಿದ್ದಾರೆ. ಜತೆಗೆ ಬೀಗ ಮುರಿದಿರುವ ಭಾಗವು ತುಕ್ಕು ಹಿಡಿದಿರುವ ಜತೆಗೆ ಕೊರಡುಗಳಿದ್ದ ಪ್ರದೇಶದಲ್ಲಿ ಜೇಡರ ಬಲೆ ಇದ್ದು, ಘಟನೆ ಒಂದು ವಾರದ ಮುಂಚೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದರು.
ಗೋದಾಮಿನಲ್ಲಿ ಸುಮಾರು 400 ಕೆ.ಜಿ.ಯಷ್ಟು ಶ್ರೀಗಂಧ ಕೊರಡುಗಳ ದಾಸ್ತಾನಿದ್ದು, ಅದರಲ್ಲಿ 50 ಕೆ.ಜಿ.ಯಷ್ಟು ಅಲ್ಲೇ ಇದೆ. ಈ ಹಿನ್ನೆಲೆಯಲ್ಲಿ ಕಡೆಗೂ ಇಲಾಖೆ ಸಿಸಿ ಕೆಮರಾ ಆಳವಡಿಸುವ ಮೂಲಕ ಎಚ್ಚೆತ್ತುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ