Belthangady ಮುಳಿಕ್ಕಾರು: ಕಾಡಾನೆಯಿಂದ ಕೃಷಿ ನಾಶ
Team Udayavani, Jan 11, 2024, 12:10 AM IST
ಬೆಳ್ತಂಗಡಿ: ಕೆಲವು ದಿನಗಳಿಂದ ನಾಡಿಗೆ ಕಾಲಿರಿಸದೇ ಇದ್ದ ಒಂಟಿ ಸಲಗವು ಬುಧವಾರ ಮತ್ತೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನಲ್ಲಿ ಕೃಷಿ ಭೂಮಿಗೆ ನುಗ್ಗಿ ಹಾನಿ ಉಂಟುಮಾಡಿದೆ.
ಬುಧವಾರ ಬೆಳಗ್ಗಿನ ಜಾವ ಡೀಕಯ್ಯ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ ಆನೆ ಒಂದು ದೊಡ್ಡ ತೆಂಗಿನ ಮರವನ್ನು ನೆಲಕ್ಕುರುಳಿಸಿ ಪುಡಿಗೈದಿದೆ. ಇತರ ತೆಂಗಿನ ಮರ, ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಉಂಟುಮಾಡಿದೆ. ಕಳೆದ ಕೆಲದಿನಗಳಿಂದ ಒಂಟಿ ಸಲಗ ಇದೇ ಪರಿಸರದ ಅರಣ್ಯದಲ್ಲಿ ತಿರುಗಾಟ ನಡೆಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.
ಆನೆ ಮುಳಿಕಾರಿನ ಅರಣ್ಯದಲ್ಲಿಯೇ ಇದ್ದು ರಾತ್ರಿ ಮತ್ತೆ ಕೃಷಿ ಭೂಮಿಗೆ ನುಗ್ಗುವ ಅಪಾಯವಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಆನೆಯನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಜನರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ