ಬೆಳ್ತಂಗಡಿ -ಗುರುವಾಯನಕೆರೆ: ಹೆದ್ದಾರಿ ಹೊಂಡಕ್ಕೆ ಮುಕ್ತಿ 


Team Udayavani, Nov 9, 2018, 11:45 AM IST

9-november-8.gif

ಬೆಳ್ತಂಗಡಿ: ಬೆಳ್ತಂಗಡಿ ನಗರ ಸಹಿತ ಗುರುವಾಯನಕೆರೆ, ಉಜಿರೆ ಪರಿಸರದ ಹೆದ್ದಾರಿ ಅವ್ಯವಸ್ಥೆಗೆ ನಿತ್ಯವೂ ಹೆದ್ದಾರಿ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದ ವಾಹನ ಚಾಲಕರು/ಸವಾರರಿಗೆ ಹೊಂಡಗಳಿಂದ ಕೊಂಚ ಮುಕ್ತಿ ಸಿಕ್ಕಿದ್ದು, ಸದ್ಯಕ್ಕೆ ಬೆಳ್ತಂಗಡಿ- ಗುರುವಾಯನಕೆರೆ ಮಧ್ಯೆ ಹೆದ್ದಾರಿಯ ಹೊಂಡಗಳಿಗೆ ತೇಪೆ ಕಾರ್ಯ ನಡೆದಿದೆ.

ಕಳೆದ ಕೆಲವು ದಿನಗಳ ಹಿಂದೆ ಗುರುವಾಯನಕೆರೆ ಪೇಟೆಯಿಂದ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಗುರುವಾರ ಬೆಳ್ತಂಗಡಿ ನಗರದಲ್ಲಿನ ಹೊಂಡಗಳಿಗೆ ತೇಪೆ ಕಾರ್ಯ ನಡೆದಿದೆ. ಗುರುವಾಯನ ಕರೆಯಿಂದ ಉಜಿರೆವರೆಗೆ ಸುಮಾರು 50ಕ್ಕೂ ಅಧಿಕ ಕಡೆಗಳಲ್ಲಿ ಹೆದ್ದಾರಿಯಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನಗಳು ಎದ್ದು ಬಿದ್ದು ಸಾಗಬೇಕಾದ ಸ್ಥಿತಿ ಇತ್ತು.

ಗುರುವಾಯನಕರೆ ಜಂಕ್ಷನ್‌ನಲ್ಲಿ ಹೆದ್ದಾರಿ ಪೂರ್ತಿ ಹದಗೆಟ್ಟ ಪರಿಣಾಮ ಮಳೆಗಾಲದಲ್ಲಿ ಜಲ್ಲಿ ಹುಡಿಗಳನ್ನು ಹಾಕಿ ಹೊಂಡ ಮುಚ್ಚಲಾಗಿತ್ತು. ಆದರೆ ಮಳೆ ಹೋದ ತತ್‌ಕ್ಷಣ ಇಡೀ ಪೇಟೆಯೇ ಧೂಳಿನಿಂದ ತುಂಬಿ ವರ್ತಕರು ನಿತ್ಯವೂ ಧೂಳು ತಿನ್ನಬೇಕಾದ ಪರಿಸ್ಥಿತಿ ಉಂಟಾಗಿತ್ತು. ಹೀಗಾಗಿ ಸ್ಥಳೀಯ ವರ್ತಕರು ಸೇರಿ ಒಂದಷ್ಟು ಮೊತ್ತ ಸಂಗ್ರಹಿಸಿ, ಹೆದ್ದಾರಿಗ ನೀರು ಹಾಕುವ ಕಾರ್ಯ ಮಾಡುತ್ತಿದ್ದರು.

ಆದರೆ ಇಲಾಖೆಯು ದಸರಾ ಮುಗಿದ ತತ್‌ಕ್ಷಣ ಹೆದ್ದಾರಿಗೆ ತೇಪೆ ಕಾರ್ಯ ನಡೆಸಲಾಗುವುದು ಎಂದು ಹೇಳಿದಂತೆ ಪ್ರಸ್ತುತ ದೀಪಾವಳಿಯ ಸಂದರ್ಭದಲ್ಲಿ ತೇಪೆ ಕಾರ್ಯ ನಡೆದಿದೆ. ದಸರಾ ಮುಗಿದ ಬಳಿಕ ಕೆಲವು ದಿನ ಮಳೆ ಸುರಿದ ಹಿನ್ನೆಲೆಯಲ್ಲಿ ತೇಪೆ ಕಾರ್ಯ ವಿಳಂಬವಾಗಿತ್ತು. ಪ್ರಸ್ತುತ ಹೊಂಡಗಳಿಂದ ವಾಹನಗಳಿಗೆ ಮುಕ್ತಿ ಸಿಕ್ಕಿದರೆ, ವರ್ತಕರಿಗೆ ಧೂಳಿನಿಂದ ಮುಕ್ತಿ ಸಿಕ್ಕಿದಂತಾಗಿದೆ.

ಅಪಘಾತಗಳಿಗೂ ಬ್ರೇಕ್‌
ಬೆಳ್ತಂಗಡಿ ಮೂರು ಮಾರ್ಗದ ಬಳಿ ತಿರುವಿನಲ್ಲೇ ಹೊಂಡಗಳಿದ್ದ ಪರಿಣಾಮ ವಾಹನಗಳು ವೇಗವಾಗಿ ಬಂದು ತತ್‌ ಕ್ಷಣ ಬ್ರೇಕ್‌ ಹಾಕುತ್ತಿದ್ದ ಪರಿಣಾಮ ನಿತ್ಯವೂ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿದ್ದವು. ಆ ಸಂದರ್ಭ ವಾಹನದವರು ರಸ್ತೆಯಲ್ಲೇ ತಮ್ಮ ವಾಹನ ನಿಲ್ಲಿಸಿ, ಇನ್ನೊಂದು ವಾಹನದವರ ಜತೆಗೆ ಗಲಾಟೆ ನಡೆಸುತ್ತಿದ್ದರು. ಆದರೆ ಈಗ ಹೊಂಡಗಳಿಗೆ ಮುಕ್ತಿ ಸಿಕ್ಕಿರುವುದರಿಂದ ಸಣ್ಣಪುಟ್ಟ ಅಪಘಾತಗಳಿಗೂ ಬ್ರೇಕ್‌ ಬಿದ್ದಂತಾಗಿದೆ. ಆದರೆ ಕಾಮಗಾರಿ ಅವಸರದಲ್ಲಿ ನಡೆದಿರುವುದರಿಂದ ಈ ತೇಪೆ ಕಾರ್ಯ ಎಷ್ಟು ದಿನಗಳವರೆಗೆ ನಿಲ್ಲುತ್ತದೆ ಎಂಬ ಪ್ರಶ್ನೆಯೂ ಹುಟ್ಟಿಕೊಳ್ಳುತ್ತದೆ.

ತೇಪೆ ಕಾರ್ಯ
ಗುರುವಾಯನಕರೆಯಿಂದ ಆರಂಭಗೊಂಡ ತೇಪೆ ಕಾರ್ಯವು ಜೈನ್‌ಪೇಟೆ, ಹಳೆಕೋಟೆ, ಚರ್ಚ್‌ ರೋಡ್‌, ಸಂತೆಕಟ್ಟೆ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಬಸ್‌ ನಿಲ್ದಾಣದ ಬಳಿ ನಡೆದು ಗುರುವಾರಕ್ಕೆ ಲಾೖಲವರೆಗೆ ತಲುಪಿದೆ. ಕಾಮಗಾರಿಯ ಸಂದರ್ಭ ಸಂಚಾರಕ್ಕೆ ಅಡಚಣೆಯಾದರೂ ಸದ್ಯ ವಾಹನಗಳು ಸರಾಗವಾಗಿ ಸಾಗುತ್ತಿವೆ.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.