‘ಭಾರತದ ಪರಂಪರೆ ವಿಶ್ವಮಾನ್ಯ’


Team Udayavani, Feb 6, 2019, 6:29 AM IST

6-february-7.jpg

ಬಂಟ್ವಾಳ : ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲಿ ಯಾವುದೇ ಸರಿಸಾಟಿ ಇಲ್ಲ. ಬಹು ಸಂಸ್ಕೃತಿಯ ನಾಡಾದರೂ ಇಡೀ ದೇಶವೇ ಒಂದು ಎಂಬ ಭಾವ ನಮ್ಮನ್ನು ಆವರಿಸಿದೆ. ಇಲ್ಲಿನ ಜ್ಞಾನ, ಪರಂಪರೆ ಎಲ್ಲವೂ ವಿಶ್ವಮಾನ್ಯ ವಾಗಲು ಕಾರಣವಾಗಿದೆ. ನಮ್ಮ ಭೌಗೋ ಳಿಕ ವ್ಯವಸ್ಥೆಯು ನಮ್ಮ ಜ್ಞಾನ ದಿಗಂತವನ್ನು ವಿಸ್ತರಿಸಿದೆ ಎಂದು ವಿದ್ವಾಂಸ ಶತಾವಧಾನಿ ಡಾ| ಆರ್‌. ಗಣೇಶ್‌ ಹೇಳಿದರು.

ಅವರು ಮಂಗಳವಾರ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ವೇದವ್ಯಾಸ ಧ್ಯಾನ ಮಂದಿರ ದಲ್ಲಿ ನಡೆದ ರಾಜ್ಯಮಟ್ಟದ 8ನೇ ವರ್ಷದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಸೂರ್ಯ ಪ್ರಭಾವ
ಸೂರ್ಯ ನಮ್ಮೆಲ್ಲರ ಶ್ರದ್ಧಾ ಕೇಂದ್ರ. ಭೂಮಧ್ಯೆ ರೇಖೆಯ ಭಾಗದಲ್ಲಿ ಇರುವಂತಹ ನಾವು ಸೂರ್ಯನ ನೇರ ಪ್ರಭಾವಕ್ಕೆ ಒಳಗಾಗಿರುವುದರಿಂದ ನಮ್ಮ ಚಿಂತನೆ, ಯೋಚನೆ ಗಳೆಲ್ಲವೂ ಉದಾತ್ತ ಮಟ್ಟಕ್ಕೆ ಏರಿದವು. ಏಕೆಂದರೆ ಸೂರ್ಯ ಜ್ಞಾನದ ಮೂಲ. ನಮ್ಮ ಸಂಸ್ಕೃತಿಯ ಯಾವುದೇ ಭಾಗವಿರಲಿ ಅದು ಅರಳಿಸಿ, ವ್ಯಕ್ತಿತ್ವವನ್ನು ವಿಕಸನಗೊಳಿಸಿ ನಮ್ಮನ್ನು ಎತ್ತರಕ್ಕೆ ಏರಿಸುವಂತದ್ದು ಎಂದರು.

ಜ್ಞಾನ ಪರಂಪರೆಯ ವಾರಸುದಾರರು
ನಮ್ಮ ಜ್ಞಾನದ ಪರಂಪರೆ ತುಂಬಾ ನಶಿಸಿ ಹೋಗಿದೆ ಎಂಬ ಭಾವನೆ ನಮ್ಮಲ್ಲಿದ್ದರೂ ಇಂದಿಗೂ ಶೇ. 80ಕ್ಕೂ ಹೆಚ್ಚು ಉಳಿದುಕೊಂಡಿದೆ ಎಂಬುದು ಹೆಮ್ಮೆಯ ವಿಚಾರ. ಪಾಕಿಸ್ತಾನ, ಅಪ ಘಾನಿಸ್ತಾನಗಳಂತಹ ದೇಶದಲ್ಲಿದ್ದ ನಮ್ಮ ಪ್ರಾಚೀನ ವಿಶ್ವವಿದ್ಯಾನಿಲಯಗಳು ನಿರಂತರ ದಾಳಿಯಿಂದ ಜರ್ಝರಿತ ಗೊಂಡಿವೆಯಾದರೂ ಇಂದಿಗೂ ಜ್ಞಾನ ಪರಂಪರೆಯ ವಾರಸುದಾರರು ನಾವು ಎಂಬ ಹೆಮ್ಮೆ ನಮಗಿರಲಿ ಎಂದು ಅವರು ಕಿವಿಮಾತು ಹೇಳಿದರು.

ನೈಜತೆ ಅರಿವಿಗೆ ಬರಲಿ
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಪ್ರಸ್ತಾವನೆ ನೀಡಿ ಮಾತನಾಡಿ, ನಮ್ಮ ಸಂಸ್ಕೃತಿಯ ವಿಶ್ವವ್ಯಾಪಕತೆಯ ಬಗೆಗೆ ನಮಗೆ ಅರಿವಿಲ್ಲದಿರುವುದು ದುರಂತ. ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕಗಳಿಂದ ನಮ್ಮ ವೀರ ಪರಂಪರೆಯ ವಿಷಯ ಕೈಬಿಡಲಾಗಿದೆ. ಇಂತಹ ದುರುದ್ದೇಶಪೂರಿತ ವ್ಯಕ್ತಿಗಳೇ ಶಿಕ್ಷಣ ಇಲಾಖೆಯನ್ನು ನಿರ್ವಹಿಸುತ್ತಿರುವುದು ಖೇದಕರ. ಆದರೆ ಯಾವುದೋ ಒಂದು ಹಂತದಲ್ಲಿ ನೈಜತೆ ಅರಿವಿಗೆ ಬರಲೇಬೇಕಲ್ಲವೇ. ಅದಕ್ಕಾಗಿ ಈ ವಿಚಾರ ಸಂಕಿರಣ ಎಂದರು.

ದಿನಪೂರ್ತಿ ನಡೆದ ವಿಚಾರ ಸಂಕಿರಣದ 2ನೇಯ ಅವಧಿಯಲ್ಲಿ ಮಹಾರಾಷ್ಟ್ರದ ಔರಂಗಬಾದ್‌ ವಿಶ್ವವಿದ್ಯಾನಿಲಯದ ಡಾ| ಶರದ್‌ ಹೆಬ್ಟಾಳ್ಕರ್‌ ಭಾರತೀಯ ಸಂಸ್ಕೃತಿಯ ವಿಶ್ವಸಂಚಾರ ಎಂಬ ವಿಷಯ ಮಂಡಿಸಿದರು.

ಪ್ರಜ್ಞಾಪ್ರವಾಹ ಸಂಯೋಜಕ ರಘನಂದನ್‌, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ ಹಾಗೂ ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ್‌ ಉಪಸ್ಥಿತರಿದ್ದರು.

ವಿಚಾರ ಸಂಕಿರಣದಲ್ಲಿ ಭಾರತೀಯ ಸಂಸ್ಕೃತಿಯ ವಿಶ್ವಸಂಚಾರದ ವಿವಿಧ ಆಯಾಮಗಳನ್ನು ಬಿಂಬಿಸುವ ನೂರಾರು ಪ್ರದರ್ಶಿನಿಗಳು, ಹತ್ತಾರು ಸ್ತಬ್ಧಚಿತ್ರಗಳು ನೋಡುಗರ ಗಮನ ಸೆಳೆದವು.

ಮಹಾನ್‌ ರಾಷ್ಟ್ರ
ಇಲ್ಲಿನ ಆಹಾರ, ಉಡುಗೆ-ತೊಡುಗೆ, ಪದ್ಧತಿಗಳು ಎಲ್ಲವೂ ವಿಭಿನ್ನವಾಗಿ ತೋರಿಬಂದರೂ ನಮ್ಮದು ಒಂದೇ ಸಂಸ್ಕೃತಿಯನ್ನು ಹೊಂದಿದ ಮಹಾನ್‌ ರಾಷ್ಟ್ರ. ಯಾವ ಆಚರಣೆಗೂ ಇಲ್ಲಿ ವಿರೋಧವಿಲ್ಲ. ಆದ್ದರಿಂದ ಭಾರತದವರು, ಹಿಂದೂಗಳು ಅಸಹಿಷ್ಣುಗಳಾಗಲು ಸಾಧ್ಯವೇ ಇಲ್ಲ. 
 ಶತಾವಧಾನಿ ಡಾ| ಆರ್‌. ಗಣೇಶ್‌ ವಿದ್ವಾಂಸ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.