Belthangady ಕಾರಿಗೆ ಟೆಂಪೋ ಢಿಕ್ಕಿ: ಚಾಲಕನಿಗೆ ಹಲ್ಲೆ
Team Udayavani, Oct 2, 2023, 11:31 PM IST
ಬೆಳ್ತಂಗಡಿ: ಉಜಿರೆ ಮೀನು ಮಾರುಕಟ್ಟೆಯಲ್ಲಿ ಮೀನು ತರುವ ಟೆಂಪೋ ಕಾರಿಗೆ ಢಿಕ್ಕಿ ಹೊಡೆದ ಕಾರಣಕ್ಕೆ ಟೆಂಪೋ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿರು ವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಕುವೆಟ್ಟು ಗ್ರಾಮದ ಚಿಲಿಂಬಿ ನಿವಾಸಿ ಶೌಕತ್ ಅಲಿ (24) ಹಲ್ಲೆಗೆ ಒಳಗಾದವರು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಶೌಕತ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ನಾನು ಟೆಂಪೊವನ್ನು ಹಿಂದಕ್ಕೆ ತೆಗೆಯುತ್ತಿ ದ್ದಾಗ ಆಕಸ್ಮಿಕವಾಗಿ ಕಾರಿಗೆ ತಾಗಿದ್ದು ಇದನ್ನು ಪ್ರಶ್ನಿಸಿ ನಾಗೇಶ, ಪ್ರವೀಣ, ಹರಿ, ವಿನಯ ಹಾಗೂ ಇತರರು ತೀವ್ರವಾಗಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿದೂರು ನೀಡಿರುವ ನ್ಯಾಯತರ್ಪು ಗ್ರಾಮದ ನಿವಾಸಿ, ಉಜಿರೆಯ ಮಾರುಕಟ್ಟೆಯಲ್ಲಿ ಮೀನು ಕ್ಲೀನಿಂಗ್ ಕೆಲಸ ಮಾಡುವ ಗಿರಿಜಾ, ಮೀನು ಸಾಗಾಟದ ಟೆಂಪೋ ಚಾಲಕ ಕಾರಿಗೆ ಟೆಂಪೋವನ್ನು ತಾಗಿಸಿ ಜಖಂಗೊಳಿ ಸಿದ್ದಾರೆ. ಬಳಿಕ ಮಾರುಕಟ್ಟೆಗೆ ನುಗ್ಗಿ ಕತ್ತಿಯನ್ನು ತೆಗೆಯಲು ಪ್ರಯತ್ನಿಸಿದ್ದನ್ನು ವಿರೋಧಿಸಿದಾಗ ನನ್ನನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ. ಬೆಳ್ತಂಗಡಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ