Belthangady ದಾಖಲೆಗಳಿಲ್ಲದೆ ಅಡಿಕೆ ಸಾಗಾಟ; ಅಧಿಕಾರಿಗಳಿಂದ ದಂಡ
Team Udayavani, Mar 25, 2024, 12:52 AM IST
ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಯಾವುದೇ ಬಿಲ್/ ದಾಖಲೆಗಳಿಲ್ಲದೆ ಸುಲಿದ ಅಡಿಕೆಯನ್ನು ಸಾಗಾಟ ಮಾಡುತ್ತಿರುವುದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದು, ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿ ವಾಹನ ಚಾಲಕನಿಗೆ ದಂಡ ವಿಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಸಿದ್ದಬೈಲು ಪರಾರಿ ಬಳಿ ಮಾ. 22ರ ಸಂಜೆ 5.30ರ ಸುಮಾರಿಗೆ ಪಿಕಪ್ ವಾಹನವನ್ನು ಪರಿಶೀಲನೆ ನಡೆಸಿದಾಗ ವಾಹನ ಕೆಟ್ಟು ಹೋಗಿದ್ದರಿಂದ ನಿಲ್ಲಿಸಿದ್ದಾಗಿಯೂ ವಾಹನದಲ್ಲಿ 200 ಕೆ.ಜಿ. ಸುಲಿದ ಒಣ ಅಡಿಕೆ ಸಾಗಾಟ ಮಾಡುತ್ತಿರುವುದಾಗಿಯೂ ವಾಹನ ಚಾಲಕ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ನಿವಾಸಿ ನಾಶಿಫ್ (23) ಎಂಬಾತ ತಿಳಿಸಿದ್ದನು.
ದಾಖಲೆಗಳನ್ನು ಕೇಳಿದಾಗ ಸಾಗಾಟ ಮಾಡಲು ಯಾವುದೇ ಬಿಲ್/ದಾಖಲೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದನು.
ಪ್ರಕರಣ ಸಂಬಂಧ ಎರಡು ಪಿಕಪ್ ವಾಹನ ಮತ್ತು ಸಾಗಾಟ ಮಾಡುತ್ತಿದ್ದ ಸುಲಿದ ಅಡಿಕೆಯನ್ನು ವಶಕ್ಕೆ ಪಡೆದುಕೊಂಡು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಗೆ ಮುಂದಿನ ತನಿಖೆಗಾಗಿ ಹಸ್ತಾಂತರ ಮಾಡಲಾಗಿತ್ತು. ಅವರು 33,346 ರೂ. ದಂಡ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ