ಬೆಳ್ತಂಗಡಿ: ಎರಡು ಕಡೆ ಕೋತಿ ಶವ ಪತ್ತೆ  


Team Udayavani, Jan 12, 2019, 4:11 AM IST

monkey.jpg

ಬೆಳ್ತಂಗಡಿ: ಉಜಿರೆಯಲ್ಲಿ ಶುಕ್ರವಾರ ಕೋತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತಾಲೂಕು ಪಶು ವೈದ್ಯಾಧಿಕಾರಿಗಳಲ್ಲಿ ವಿಚಾರಿಸಿದಾಗ ಜ.10ರಂದು ಕೂಡ ಸವಣಾಲು ಸಮೀಪದ ಕನ್ನಾಜೆಬೈಲಿನಲ್ಲಿ ಇನ್ನೊಂದು ಕೊಳೆತ ಶವ ಪತ್ತೆಯಾಗಿರುವುದನ್ನು ತಿಳಿಸಿದ್ದಾರೆ.

ಎರಡೂ ಕಡೆ ಶವಗಳು ಕೊಳೆತಿದ್ದುದರಿಂದ ಪರೀಕ್ಷೆ ನಡೆಸದೆ ಸುಟ್ಟು ಹಾಕಿದ್ದಾರೆ. ಜತೆಗೆ ಈ ಕುರಿತು ಆರೋಗ್ಯ ಹಾಗೂ ಪಶು ಸಂಗೋಪನ ಇಲಾಖೆಯಲ್ಲಿ ವಿಚಾರಿಸಿದಾಗ, ಸಾಮಾನ್ಯ ಸಾವು ಎಂಬ ಉತ್ತರ ಲಭಿಸಿದೆ. ಉಜಿರೆಯಲ್ಲಿ ಕೋತಿ ಸತ್ತ ಪ್ರದೇಶಕ್ಕೆ ವೈದ್ಯಾಧಿಕಾರಿ ಡಾ| ಅರ್ಚನಾ, ಹೆಲ್ತ್‌ ಇನ್ಸ್‌ಪೆಕ್ಟರ್‌ ಸ್ವತಂತ್ರ ರಾವ್‌, ಮಂಗನ ಕಾಯಿಲೆ ವಿಶೇಷಾಧಿಕಾರಿ ಅಶೋಕ್‌, ಗ್ರಾ.ಪಂ. ಅಧ್ಯಕ್ಷ ಶ್ರೀಧರ ಪೂಜಾರಿ, ಸಿಬಂದಿ ರಮೇಶ್‌, ಉಜಿರೆ ಪಶು ವೈದ್ಯಾಧಿಕಾರಿ ಡಾ| ಕಾರ್ತಿಕ್‌, ಅರಣ್ಯಾ ಧಿಕಾರಿಗಳು ಭೇಟಿ ನೀಡಿದ್ದಾರೆ.

ಕನ್ನಾಜೆಬೈಲು: ಮಾಹಿತಿಯೇ ಇಲ್ಲ
ಜ. 10ರಂದು ಕನ್ನಾಜೆಬೈಲಿನಲ್ಲೂ ಶವ ಪತ್ತೆ ಕುರಿತು ಪಶು ಸಂಗೋಪನ ಇಲಾಖೆಯವರು ತಿಳಿಸಿದ್ದಾರೆ. ಆದರೆ ಹಲವು ದಿನಗಳಿಂದ ಮಂಗನ ಕಾಯಿಲೆ ಸುದ್ದಿ ಮಾಡುತ್ತಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ.
ಕನ್ನಾಜೆಬೈಲಿಗೆ ತಾಲೂಕು ಪಶು ವೈದ್ಯಾಧಿಕಾರಿ ಡಾ| ರತ್ನಾಕರ ಮಲ್ಯ, ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಶವ ವನ್ನು ಪರಿಶೀಲಿಸಿ, ಸುಟ್ಟು ಹಾಕಿದ್ದಾರೆ.

1 ಕಿ.ಮೀ.ಯಲ್ಲಿ ಸರ್ವೆ
ಆರೋಗ್ಯ ಇಲಾಖೆ ಉಜಿರೆಯಲ್ಲಿ ಶವ ಪತ್ತೆಯಾಗಿರುವ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ಮನೆಗಳ ಸರ್ವೇಗೆ ಸಿದ್ಧತೆ ನಡೆಸಿದೆ. ಜ್ವರದ ಪ್ರಕರಣ ಕಂಡು ಬಂದರೆ ಸೂಕ್ತ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಲೂಕಿನ ಕರಾಳ ನೆನಪು
ಮಂಗನ ಕಾಯಿಲೆ ಎಂದರೆ ಬೆಳ್ತಂಗಡಿ ತಾಲೂಕಿನ ಜನತೆ ಬೆಚ್ಚಿಬೀಳುವ ಮಟ್ಟಿಗೆ ಇಲ್ಲಿ 1980ರ ದಶಕದಲ್ಲಿ ಅದು ಸಾವುನೋವುಗಳನ್ನು ತಂದಿದೆ. ಕೊಯ್ಯೂರು ಹಾಗೂ ಪಟ್ರಮೆ ಗ್ರಾಮಗಳಲ್ಲಿ ಹೆಚ್ಚಿನ ತೊಂದರೆ ನೀಡಿದ್ದು, ಹತ್ತಾರು ಮಂದಿಯ ಸಾವಿನ ಜತೆಗೆ, ನೂರಾರು ಮಂದಿ ಹಾಸಿಗೆ ಹಿಡಿದಿದ್ದರು. 

ಸರ್ವೇಗೆ ಕ್ರಮ
ಉಜಿರೆಯಲ್ಲಿ ಕೋತಿಯು ಕಾಯಿಲೆಯಿಂದ ಸತ್ತಿರುವ ಸಾಧ್ಯತೆ ಇಲ್ಲ. ಪ್ರಸ್ತುತ ಮುನ್ನೆಚ್ಚರಿಕೆಯಾಗಿ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ವೆ ನಡೆಸುವುದಕ್ಕೆ ತಿಳಿಸಲಾಗಿದೆ. ಜ್ವರದ ಪ್ರಕರಣ ಕಂಡುಬಂದರೆ ಶೀಘ್ರ ಕ್ರಮಕೈಗೊಳ್ಳಲಾಗುತ್ತದೆ.
ಸ್ವತಂತ್ರ ರಾವ್‌, ಹೆಲ್ತ್‌ ಇನ್ಸ್‌ಪೆಕ್ಟರ್‌, ಉಜಿರೆ

ಸ್ಯಾಂಪಲ್‌ ಸಂಗ್ರಹ ಸಾಧ್ಯವಾಗಿಲ್ಲ
ಕೋತಿ ಶವ ಕೊಳೆತ ಸ್ಥಿತಿಯಲ್ಲಿದ್ದು, ಸ್ಯಾಂಪಲ್‌ ಸಂಗ್ರಹ ಸಾಧ್ಯವಾಗಿಲ್ಲ. ಸ್ಥಳೀಯ ಪಶುವೈದ್ಯಾಧಿಕಾರಿಗಳು ಮಂಗಗಳು ಜಗಳವಾಡಿ ಸತ್ತಿವೆ, ಕಾಯಿಲೆಯಿಂದ ಅಲ್ಲ ಎಂಬ ಮಾಹಿತಿ ನೀಡಿದ್ದಾರೆ. ಶವ ಸುಡಲಾಗಿದ್ದು, ಆತಂಕ ಅನಗತ್ಯ.
ಡಾ| ಕಲಾಮಧು, ತಾಲೂಕು ಆರೋಗ್ಯಾಧಿಕಾರಿ, ಬೆಳ್ತಂಗಡಿ

ಸಾಮಾನ್ಯ ಸಾವು ಸಾಧ್ಯತೆ
ಸವಣಾಲು ರಸ್ತೆಯ ಕನ್ನಾಜೆಬೈಲಿನ ಕಾಡಿನಲ್ಲಿ ಜ.10ರಂದು ಕೊಳೆತ ಸ್ಥಿತಿಯಲ್ಲಿ ಕೋತಿಯ ಶವ ಪತ್ತೆಯಾಗಿದ್ದು, ಕೊಳೆತಿರುವ ಕಾರಣ ಪರೀಕ್ಷೆ ಅಸಾಧ್ಯ. ಜಗಳ ಅಥವಾ ವಿದ್ಯುತ್‌ ಲೈನಿಗೆ ತಾಗಿ ಸತ್ತಿರುವ ಸಾಧ್ಯತೆ ಹೆಚ್ಚಿದೆ.
ಡಾ| ರತ್ನಾಕರ ಮಲ್ಯ, ಸ. ನಿರ್ದೇಶಕರು,  ಪ.ಸಂ. ಇಲಾಖೆ, ಬೆಳ್ತಂಗಡಿ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.