![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Kambala: ನೇಗಿಲು ಹಿರಿಯ ವಿಭಾಗದಲ್ಲಿ ದಿಡುಪೆಯ ಗುಂಡ ಮತ್ತು ಬಿಳಿಯೂರು ದಾಸ ಕೋಣಗಳು ಪ್ರಥಮ
Team Udayavani, Nov 27, 2023, 9:08 AM IST
![4-bng-kambala](https://www.udayavani.com/wp-content/uploads/2023/11/4-bng-kambala-620x372.jpg)
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳದಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆಯಿತು.
ಸಾವಿರಾರು ಜನರ ಜಯಘೊಷದ ನಡುವೆ ಪಾರಂಬೇರಿನ ಗುಂಡ ಮತ್ತು ಬಿಳಿಯೂರು ದಾಸ ಮಹರಾಜಕರೆಯಲ್ಲಿ ಜಯ ಗಳಿಸಿತು. ಧನಂಜಯ ಗೌಡ ಸರಪಾಡಿ ಕೋಣಗಳನ್ನು ಓಡಿಸಿದರು.
ಸೆಮಿಫೈನಲ್ ಬೋಳದಗುತ್ತು ಮತ್ತು ನಾರಾಯಣ ಮಲೆಕುಡಿಯರ ಕೋಣಗಳು ತಲುಪಿತ್ತು. ನಾರಾಯಣ ಮಲೆಕುಡಿಯ ಅವರ ಕೋಣಗಳು ಗೆದ್ದು ಪೈನಲ್ ತಲುಪಿತು.
ನಂತರ ರೋಚಕ ಫೈನಲ್ನಲ್ಲಿ ಮಹರಾಜಕರೆಯಲ್ಲಿ ಪರಂಬೇರು ನಾರಾಯಣ ಮಲೆಕುಡಿಯ ಅವರ ಕೋಣಗಳು ಮಹರಾಜ ಕರೆಯಲ್ಲಿ ಓಡಿ ಫೈನಲ್ ಗೆದ್ದಿತು.
ಫೈನಲ್ ಗೆದ್ದ ನಾರಾಯಣ ಮಲೆಕುಡಿಯ ಅವರ ಕೋಣವು ಒಂದು ಲಕ್ಷ ನಗದು, 16 ಗ್ರಾಂ. ಚಿನ್ನ ಮತ್ತು ಟ್ರೋಫಿ ಗೆದ್ದಿದೆ. ರವಿವಾರ ರಾತ್ರಿ 4.30ಕ್ಕೆ ಬಹುಮಾನ ವಿತರಣೆ ನಡೆಯಿತು. ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ವಿವಿಧ ಗಣ್ಯರು ಬಹುಮಾನ ವಿತರಿಸಿದರು.
ಬೆಂಗಳೂರು ಕಂಬಳದಲ್ಲಿ ಫೈನಲ್ ತಲುಪಿ ಗೆದ್ದ ಕೊಣಗಳೊಂದಿಗೆ ಪ್ರೀತಿ, ವಿಶ್ವಾಸ, ನಂಬಿಕೆಗಳೂ ಗೆದ್ದವು. ಸಾಗಿದ್ದು ಕೋಣಗಳು ಮಾತ್ರ ಅಲ್ಲ. ತಳಸಮುದಾಯದಿಂದ ಬಂದ ಮಲೆಕುಡಿಯ ಸಮುದಾಯದ ಹೆಸರೂ ಆಗಿತ್ತು. ಮಲೆಕುಡಿಯ ಸಮುದಾಯದ ಕೋಣ ಮಲೆಕುಡಿಯರ ಹೆಸರಿನಲ್ಲೇ ಬೆಂಗಳೂರು ಕಂಬಳದಲ್ಲಿ ಓಡಲೇಬೇಕೆಂದು ಪಣತೊಟ್ಟವರು ಮಂಗಳೂರಿನ ಜನಪರ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ಅವರು.
ಇತ್ತೀಚೆಗಷ್ಟೇ ಬಂಗಾಡಿ ಪಾರಂಬೇರಿಗೆ ಭೇಟಿ ನೀಡಿದ್ದ ಅವರು ಕೋಣಗಳನ್ನು ನೋಡಿ ಬೆಂಗಳೂರು ಕಂಬಳದಲ್ಲಿ ಪಾಲು ಪಡೆಯಲೇಬೇಕೆಂದು ಪಣತೊಟ್ಟು ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದು ಮಾತ್ರವಲ್ಲ, ಕಂಬಳ ಮುಗಿಯುವವರೆಗೂ ಜೊತೆಗಿದ್ದರು. ಕೊನೆಗೂ ವಿಶ್ವಾಸ, ಪ್ರೀತಿ ಗೆದ್ದಿತು. ಮಲೆಕುಡಿಯರ ಕೋಣಗಳೂ ಫೈನಲ್ ಗೆದ್ದು ರಾಜ್ಯಮಟ್ಟದ ಕಂಬಳದಲ್ಲಿ ಮತ್ತೊಮ್ಮೆ ಮಲೆಕುಡಿಯರ ಕೋಣವನ್ನು ಮಲೆಕುಡಿಯರ ಹೆಸರಿನಲ್ಲೇ ಓಡಿಸಿ ಸಮುದಾಯದ ಹೆಸರನ್ನು ಮತ್ತೊಮ್ಮೆ ರಾಜ್ಯವ್ಯಾಪಿ ಕೇಳಿಸುವಂತೆ ಮಾಡಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.