Kambala: ನೇಗಿಲು ಹಿರಿಯ ವಿಭಾಗದಲ್ಲಿ ದಿಡುಪೆಯ ಗುಂಡ ಮತ್ತು ಬಿಳಿಯೂರು ದಾಸ ಕೋಣಗಳು ಪ್ರಥಮ
Team Udayavani, Nov 27, 2023, 9:08 AM IST
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳದಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆಯಿತು.
ಸಾವಿರಾರು ಜನರ ಜಯಘೊಷದ ನಡುವೆ ಪಾರಂಬೇರಿನ ಗುಂಡ ಮತ್ತು ಬಿಳಿಯೂರು ದಾಸ ಮಹರಾಜಕರೆಯಲ್ಲಿ ಜಯ ಗಳಿಸಿತು. ಧನಂಜಯ ಗೌಡ ಸರಪಾಡಿ ಕೋಣಗಳನ್ನು ಓಡಿಸಿದರು.
ಸೆಮಿಫೈನಲ್ ಬೋಳದಗುತ್ತು ಮತ್ತು ನಾರಾಯಣ ಮಲೆಕುಡಿಯರ ಕೋಣಗಳು ತಲುಪಿತ್ತು. ನಾರಾಯಣ ಮಲೆಕುಡಿಯ ಅವರ ಕೋಣಗಳು ಗೆದ್ದು ಪೈನಲ್ ತಲುಪಿತು.
ನಂತರ ರೋಚಕ ಫೈನಲ್ನಲ್ಲಿ ಮಹರಾಜಕರೆಯಲ್ಲಿ ಪರಂಬೇರು ನಾರಾಯಣ ಮಲೆಕುಡಿಯ ಅವರ ಕೋಣಗಳು ಮಹರಾಜ ಕರೆಯಲ್ಲಿ ಓಡಿ ಫೈನಲ್ ಗೆದ್ದಿತು.
ಫೈನಲ್ ಗೆದ್ದ ನಾರಾಯಣ ಮಲೆಕುಡಿಯ ಅವರ ಕೋಣವು ಒಂದು ಲಕ್ಷ ನಗದು, 16 ಗ್ರಾಂ. ಚಿನ್ನ ಮತ್ತು ಟ್ರೋಫಿ ಗೆದ್ದಿದೆ. ರವಿವಾರ ರಾತ್ರಿ 4.30ಕ್ಕೆ ಬಹುಮಾನ ವಿತರಣೆ ನಡೆಯಿತು. ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ವಿವಿಧ ಗಣ್ಯರು ಬಹುಮಾನ ವಿತರಿಸಿದರು.
ಬೆಂಗಳೂರು ಕಂಬಳದಲ್ಲಿ ಫೈನಲ್ ತಲುಪಿ ಗೆದ್ದ ಕೊಣಗಳೊಂದಿಗೆ ಪ್ರೀತಿ, ವಿಶ್ವಾಸ, ನಂಬಿಕೆಗಳೂ ಗೆದ್ದವು. ಸಾಗಿದ್ದು ಕೋಣಗಳು ಮಾತ್ರ ಅಲ್ಲ. ತಳಸಮುದಾಯದಿಂದ ಬಂದ ಮಲೆಕುಡಿಯ ಸಮುದಾಯದ ಹೆಸರೂ ಆಗಿತ್ತು. ಮಲೆಕುಡಿಯ ಸಮುದಾಯದ ಕೋಣ ಮಲೆಕುಡಿಯರ ಹೆಸರಿನಲ್ಲೇ ಬೆಂಗಳೂರು ಕಂಬಳದಲ್ಲಿ ಓಡಲೇಬೇಕೆಂದು ಪಣತೊಟ್ಟವರು ಮಂಗಳೂರಿನ ಜನಪರ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ಅವರು.
ಇತ್ತೀಚೆಗಷ್ಟೇ ಬಂಗಾಡಿ ಪಾರಂಬೇರಿಗೆ ಭೇಟಿ ನೀಡಿದ್ದ ಅವರು ಕೋಣಗಳನ್ನು ನೋಡಿ ಬೆಂಗಳೂರು ಕಂಬಳದಲ್ಲಿ ಪಾಲು ಪಡೆಯಲೇಬೇಕೆಂದು ಪಣತೊಟ್ಟು ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದು ಮಾತ್ರವಲ್ಲ, ಕಂಬಳ ಮುಗಿಯುವವರೆಗೂ ಜೊತೆಗಿದ್ದರು. ಕೊನೆಗೂ ವಿಶ್ವಾಸ, ಪ್ರೀತಿ ಗೆದ್ದಿತು. ಮಲೆಕುಡಿಯರ ಕೋಣಗಳೂ ಫೈನಲ್ ಗೆದ್ದು ರಾಜ್ಯಮಟ್ಟದ ಕಂಬಳದಲ್ಲಿ ಮತ್ತೊಮ್ಮೆ ಮಲೆಕುಡಿಯರ ಕೋಣವನ್ನು ಮಲೆಕುಡಿಯರ ಹೆಸರಿನಲ್ಲೇ ಓಡಿಸಿ ಸಮುದಾಯದ ಹೆಸರನ್ನು ಮತ್ತೊಮ್ಮೆ ರಾಜ್ಯವ್ಯಾಪಿ ಕೇಳಿಸುವಂತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?