ಪುತ್ತೂರು: ಕುಸಿಯುವ ಭೀತಿಯಲ್ಲಿ ಬಿಇಒ ಕಚೇರಿ ಕಟ್ಟಡ
Team Udayavani, May 25, 2022, 9:56 AM IST
ಪುತ್ತೂರು: ಅವಿಭಜಿತ ಪುತ್ತೂರು ತಾಲೂಕಿನ ಶಾಲೆಗಳ ಕೇಂದ್ರ ಸ್ಥಾನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡವೇ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ಆತಂಕ ಮೂಡಿಸಿದೆ.
ಕಟ್ಟಡ 1934ರಲ್ಲಿ ಬ್ರಿಟಿಷ್ ಕಾಲ ದಲ್ಲಿ ನಿರ್ಮಾಣವಾದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಕಟ್ಟಡದ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಅಪಾಯದ ಕರೆಗಂಟೆ ಬಾರಿಸುತ್ತಿದೆ. 5 ವರ್ಷಗಳ ಹಿಂದೆ ಈ ಕಟ್ಟಡದ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದಾಗ ಅದಕ್ಕಾಗಿ ಪಾಯ ತೋಡುವ ಸಂದರ್ಭ ಕಚೇರಿ ಪಕ್ಕ ಕುಸಿತ ಉಂಟಾಗಿತ್ತು. ಬಳಿಕ ಭೂಕುಸಿತ ಸ್ಥಳದಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಯಿತು. ಪ್ರಸ್ತುತ 88 ವರ್ಷಗಳಷ್ಟು ಹಳೆಯದಾದ ಕಟ್ಟಡದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುಕ್ತಿ ಸಿಗಬೇಕೆಂಬ ಕೂಗು ಹೆಚ್ಚಾಗಿದೆ.
ಅನುದಾನ ಇಲ್ಲ
ಹೊಸ ಬಿಇಒ ಕಚೇರಿ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಜಮೀನು ಪರಿಶೀಲನೆ ನಡೆದಿದೆ. ನಗರದ ನೆಲ್ಲಿಕಟ್ಟೆಯ ಶಾಲೆಯ ಜಮೀನಿನ ಪಕ್ಕದಲ್ಲೇ ಕಟ್ಟಡ ನಿರ್ಮಿಸಲು ಶಾಸಕರು ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಾಗ ಪರಿಶೀಲಿಸಿದ್ದಾರೆ. ಅನುದಾನ ಮಂಜೂರಾಗಿಲ್ಲ
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹೊಸದಾಗಿ ನಿರ್ಮಿಸುವ ಉದ್ದೇಶದಿಂದ ಶಾಸಕ ಸಂಜೀವ ಮಠಂದೂರು ಅವರ ಮಾರ್ಗದರ್ಶನದಂತೆ ಸರಕಾರಕ್ಕೆ ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಲಭ್ಯ ಆದ ಬಳಿಕ ಕಟ್ಟಡ ನಿರ್ಮಾಣಗೊಳ್ಳಲಿದೆ. – ಲೋಕೇಶ್ ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ