ಸೋರುತ್ತಿರುವ ಬೆಟ್ಟಂಪಾಡಿ ಶಾಲಾ ಕಟ್ಟಡ: ಶಾಶ್ವತ ಪರಿಹಾರಕ್ಕೆ ಆಗ್ರಹ

ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಮನವಿ

Team Udayavani, Oct 3, 2019, 5:00 AM IST

x-20

ನಿಡ್ಪಳ್ಳಿ ಗ್ರಾ.ಪಂ. ಕಚೇರಿಯಲ್ಲಿ ನಡೆದ ತ್ತೈಮಾಸಿಕ ಸಭೆಯಲ್ಲಿ ಜಂಗಪ್ಪ ಮಾಹಿತಿ ನೀಡಿದರು.

 

ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾ.ಪಂ.ನ ತ್ತೈಮಾಸಿಕ ಸಭೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಮತಿ ನೇತೃತ್ವದಲ್ಲಿ ಪಂಚಾಯತ್‌ನಲ್ಲಿ ನಡೆಯಿತು.

ಮಳೆಯ ನೀರು ಕೊಠಡಿಯೊಳಗೆ ಬರುತ್ತದೆ. ಶಾಲೆಗಳಿಗೆ 2 ರಜೆ ಇದ್ದರೆ ಮೂರನೇ ದಿನ ಕೊಠಡಿಯಲ್ಲಿ ತುಂಬಿದ ನೀರನ್ನು ಹೊರ ಚೆಲ್ಲುವ ಕೆಲಸ ವಿದ್ಯಾರ್ಥಿಗಳದ್ದು. ಇದರಿಂದ ಪಾಠ – ಪ್ರವಚನಗಳಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ಪಂಚಾಯತ್‌ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗುವಂತೆ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ಯಾಮಲಾ ಆಗ್ರಹಿಸಿದರು.

ಶಾಲೆಯಿಂದ ಸ್ವಲ್ಪ ದೂರದಲ್ಲಿ ಕೊಳವೆ ಬಾವಿ ಸ್ವಿಚ್‌ ಇದೆ. ಮಳೆಗಾಲದಲ್ಲಿ ವಿದ್ಯುತ್‌ ಶಾಕ್‌ ಹೊಡೆಯುವ ಸಾಧ್ಯತೆ ಇದೆ. ಅದನ್ನು ಶಾಲೆಯ ಆವರಣದಲ್ಲಿ ಅಳವಡಿಸುವಂತೆ ಮೆಸ್ಕಾಂ ಅಧಿಕಾರಿಗಳನ್ನು ಆಗ್ರಹಿಸಿದರು. ಈ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ನೀಡುವಂತೆ ಮೆಸ್ಕಾಂ ಅಧಿಕಾರಿಗಳು ತಿಳಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು. ಶಾಲೆಯಲ್ಲಿ ಅಂಗವಿಕಲರ ಸಂಖ್ಯೆ ಹೆಚ್ಚು ಇದೆ. ಅವರಿಗೆ ವಿಶೇಷ ಶೌಚಾಲಯದ ಅಗತ್ಯವಿದೆ ಎಂದು ಮುಖ್ಯ ಶಿಕ್ಷಕಿ ಮನವಿ ಮಾಡಿದರು.

ಪಹಣಿ ಪತ್ರ ಆಗಿಲ್ಲ
ಚೂರಿಪದವು ಶಾಲೆಯ ಪಹಣಿ ಪತ್ರ ಇನ್ನೂ ಆಗಿಲ್ಲ. ಹಲವು ವರ್ಷಗಳಿಂದ ಮನವಿಯನ್ನು ಕಂದಾಯ ಇಲಾಖೆಗೆ ನೀಡುತ್ತಾ ಬಂದಿದ್ದೇವೆ. ಇವತ್ತೂ ಮನವಿ ನೀಡಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಭಾರ ಮುಖ್ಯ ಶಿಕ್ಷಕಿ ಆಶಾ ಆಗ್ರಹಿಸಿದರು. ಪಂಚಾಯತ್‌ನಿಂದಲೂ ಪಹಣಿ ಪತ್ರವನ್ನು ನೀಡುವಂತೆ ಹಲವು ಬಾರಿ ನಿರ್ಣಯ ಕಳು ಹಿಸಲಾಗಿದೆ ಎಂದು ಸುಮತಿ ಹೇಳಿದರು.

ಅಕ್ರಮ-ಸಕ್ರಮ ಬಾಕಿ
ಅಕ್ರಮ-ಸಕ್ರಮದ ಅರ್ಜಿಗಳು ಬಾಕಿ ಇವೆ. ಅಂಬೇಡ್ಕರ್‌ ಭವನದ ಗಡಿಗುರುತು ಮಾಡಿಲ್ಲ. ಯಾಕೆ ಬಾಕಿ ಉಳಿದಿದೆ ಎಂದು ಗ್ರಾಮಲೆಕ್ಕಿಗರನ್ನು ಸದಸ್ಯ ಲಕ್ಷ್ಮಣ ನಾಯ್ಕ ಪ್ರಶ್ನಿಸಿದರು. ಬರುವ ತ್ತೈಮಾಸಿಕ ಸಭೆಯ ಒಳಗಡೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಲೆಕ್ಕಿಗರಿಗೆ ಸೂಚನೆ ನೀಡಲಾಯಿತು.

ನಿಡ್ಪಳ್ಳಿ ಶಾಲೆಯ ಬಳಿಯೇ ಅಂಗನವಾಡಿ ಕೇಂದ್ರ ಇದೆ. ಇಲ್ಲಿಯ ಮಕ್ಕಳು ಈ ಶಾಲೆಗೆ ಸೇರುತ್ತಾರೆ. ನೂತನ ಅಂಗನವಾಡಿ ಕೇಂದ್ರಕ್ಕೆ ಅನುದಾನ ಬಂದಿದೆ. ಕೇಂದ್ರಕ್ಕೆ ಯಾಕೆ ಒಪ್ಪಿಗೆ ನೀಡುವುದಿಲ್ಲ ಎಂದು ಸಭೆಯಲ್ಲಿ ಬೆಟ್ಟಂಪಾಡಿ ವ್ಯಾಪ್ತಿಯ ಅಂಗನವಾಡಿ ಮೇಲ್ವಿಚಾರಕಿ ನಾಗರತ್ನಾ ಹೇಳಿದರು.

ಶಾಲಾ ಮುಖ್ಯ ಶಿಕ್ಷಕ ತೋಪಯ್ಯ ಮಾತನಾಡಿ, ಶಾಲೆಯ ಬಳಿಯೇ ಅಂಗನ ವಾಡಿ ಕೇಂದ್ರಕ್ಕೆ ಜಾಗ ಇರುವುದರಿಂದ ಅಲ್ಲಿಯೇ ಅಂಗನವಾಡಿ ಕೇಂದ್ರ ನಿರ್ಮಿ ಸುವಂತೆ ಎಸ್‌ಡಿಎಂಸಿ ಸಭೆಯಲ್ಲಿ ನಿರ್ಣಯವಾಗಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷರು ಶಾಲೆಯ ಬಳಿಯೇ ನೂತನ ಅಂಗನವಾಡಿ ಕೇಂದ್ರವನ್ನು ಮಾಡಲು ನನ್ನ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ ಎಂದು ಪಂಚಾಯತ್‌ ಸದಸ್ಯ ಲಕ್ಷ್ಮಣ ನಾಯ್ಕ ಹೇಳಿದರು.

ಪಂಚಾಯತ್‌ ಆಡಳಿತ ಮಂಡಳಿ, ಎಸ್‌ಡಿಎಂಸಿ, ಅಂಗನವಾಡಿ ಮೇಲ್ವಿಚಾರಕರು, ಮುಖ್ಯ ಶಿಕ್ಷಕರು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತೀರ್ಮಾನಿಸಲಾಯಿತು. ನಿಡ್ಪಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ರಸ್ತೆಯ ವ್ಯವಸ್ಥೆಯನ್ನು ಮಾಡುವಂತೆ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದರು.

ಗ್ರಾ.ಪಂ. ಉಪಾಧ್ಯಕ್ಷ ಅವಿನಾಶ್‌ ರೈ, ಸದಸ್ಯ ಲಕ್ಷ್ಮಣ ನಾಯ್ಕ, ಪಶು ಸಂಗೋಪನೆ ಪಾಣಾಜೆ ಕೇಂದ್ರದ ಜಾನುವಾರು ವೈದ್ಯ ಪುಷ್ಪರಾಜ್‌ ಶೆಟ್ಟಿ, ಮೆಸ್ಕಾಂ ಇಲಾಖೆಯ ಬೆಟ್ಟಂಪಾಡಿ ಜೆಇ ಪುತ್ತು, ಅರಣ್ಯ ರಕ್ಷಕ ಮೋಹನ್‌, ಗ್ರಾಮಕರಣಿಕ ಜಂಗಪ್ಪ, ನಿಡ್ಪಳ್ಳಿ ಶಾಲೆಯ ಮುಖ್ಯ ಶಿಕ್ಷಕ ತೋಪಯ್ಯ, ಅಂಗನವಾಡಿ ಮೇಲ್ವಿಚಾರಕಿ ನಾಗರತ್ನಾ, ಪಾಣಾಜೆ ಸಿಎ ಬ್ಯಾಂಕ್‌ನ ಸಿಇಒ ಬಿ. ಲಕ್ಷ್ಮಣ ನಾಯ್ಕ, ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಕುಸುಮಾವತಿ ಎ.ವಿ., ಚೂರಿ ಪದವು ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ., ಅಂಗನವಾಡಿ ಕಾರ್ಯಕರ್ತೆಯರಾದ ಭಾಗೀರಥಿ, ಜಯಂತಿ, ಸುಧಾ, ದೇವಕಿ, ಆಶಾ ಕಾರ್ಯಕರ್ತೆಯರಾದ ದಿವ್ಯಾ ಸಿ.ಎಚ್‌., ಗೀತಾ, ಪಿಡಿಒ ಸಂಧ್ಯಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು. ಸಿಬಂದಿ ವಿನೀತ್‌ ಕುಮಾರ್‌, ಸಂಶೀನಾ, ಜಯಕುಮಾರಿ, ರೇವತಿ ಪಿ. ಸಹಕರಿಸಿದರು.

ಅಧಿಕಾರಿ, ಸದಸ್ಯರ ಗೈರು
ಅಧಿಕಾರಿಗಳು, ಪಂಚಾಯತ್‌ ಸದಸ್ಯರು ಬೆರಳಣಿಕೆಯಲ್ಲಿ ಭಾಗವಹಿಸಿರುವುದು ಕಂಡುಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪಂಚಾಯತ್‌ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.