ಬೆಟ್ಟಂಪಾಡಿ: ಡಾಮರು ಕಾಮಗಾರಿಗೆ ಒತ್ತಾಯ
Team Udayavani, Oct 14, 2018, 3:10 PM IST
ನಿಡ್ಪಳ್ಳಿ : ಇರ್ದೆ, ಬೆಟ್ಟಂಪಾಡಿ,ನಿಡ್ಪಳ್ಳಿ ಗ್ರಾಮದ ಮಕ್ಕಳಿಗೆ ಹೈಸ್ಕೂಲ್ ಮಟ್ಟದ ಶಿಕ್ಷಣ ಪಡೆಯಲು ಇರುವ ಏಕೈಕ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆ. ಈ ಶಾಲೆಗೆ ತೆರಳುವ ರಸ್ತೆಗೆ ಡಾಮರು ಹಾಕಬೇಕು ಎನ್ನುವ ಒತ್ತಾಯ ಸಾರ್ವಜನಿಕವಾಗಿ ಕೇಳಿಬಂದಿದೆ.
ರೆಂಜದ ಮುಖ್ಯ ರಸ್ತೆಯಿಂದ ನವೋದಯ ಪ್ರೌಢಶಾಲೆಗೆ ಹೋಗುವ ರಸ್ತೆಗೆ ಕೆಲವು ವರ್ಷಗಳ ಹಿಂದೆ ಡಾಮರು ಹಾಕಲಾಗಿದೆ. ಅದೇ ಮುಖ್ಯ ರಸ್ತೆಯಿಂದ ಮುಂದೆ ಹೋದಾಗ ಬಲಕ್ಕೆ ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ತಿರುಗುವಲ್ಲಿಂದ ಅಂದಾಜು 100 ಮೀಟರ್ ಉದ್ದದ ರಸ್ತೆ ಕಚ್ಚಾ ರಸ್ತೆಯಾಗಿಯೇ ಉಳಿದಿದೆ. ಈ ರಸ್ತೆಯಲ್ಲಿ ಮಳೆಗಾಲದಲ್ಲಿ ಮಕ್ಕಳಿಗೆ ನಡೆದಾಡಲು ಕಷ್ಟಕರವಾಗಿದೆ. ರಸ್ತೆಗೆ ಕಾಂಕ್ರೀಟ್ ಅಥವಾ ಡಾಮರು ಹಾಕಬೇಕು ಎನ್ನುವ ಬೇಡಿಕೆ ಹಿಂದಿನಿಂದಲೂ ಇದೆ.
ಶಾಸಕರಿಗೆ ಮನವಿ
ಶಾಲೆಯಲ್ಲಿ ಕೂಡ ಕೆಲ ಮೂಲ ಸೌಕರ್ಯಗಳ ಕೊರತೆ ಇದೆ. ಒಂದು ನೂತನ ಕೊಠಡಿ ಕಾಮಗಾರಿ ಕೂಡ ಅರ್ಧದಲ್ಲಿ ನಿಂತಿದೆ. ಈ ಬಗ್ಗೆ ಶಾಸಕರಿಗೆ ಮನವಿ ನೀಡಲಾಗುವುದು. ಹಾಗೆಯೇ ಪ್ರೌಢಶಾಲೆಗೆ ಬರುವ ರಸ್ತೆಗೆ ಡಾಮರ್ ಹಾಕಿಸಲು ಕೂಡ ಶಾಸಕರ ಗಮನ ಸೆಳೆಯಲು ಪ್ರಯತ್ನಿಸಲಾಗುವುದು.
– ಸುಂದರ ನಾಯಕ್ ಬಾಳೆಗುಳಿ,
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ
ರಸ್ತೆಗೆ ಕಾಂಕ್ರೀಟ್ ಆಗಬೇಕು
ಶಾಲೆ ಆರಂಭವಾಗಿ ಸುಮಾರು 22 ವರ್ಷ ಕಳೆದರೂ ಇಲ್ಲಿಗೆ ಬರುವ ರಸ್ತೆ ಮಾತ್ರ ಕಾಂಕ್ರೀಟ್ ಆಗದೆ ಇದ್ದ ಹಾಗೆಯೇ ಇದೆ. ಶಾಲೆಯಲ್ಲಿ ಇರುವ ಕೆಲ ಸಣ್ಣ ಮಟ್ಟದ ಮೂಲ ಸೌಕರ್ಯಗಳ ಕೊರತೆಯನ್ನು ನೀಗಿಸುವುದರೊಂದಿಗೆ ರಸ್ತೆಯೂ ಅಭಿವೃದ್ಧಿ ಆಗಬೇಕು. ಈ ಬಗ್ಗೆ ಶಾಲಾಭಿವೃದ್ಧಿ ಸಮಿತಿಯಲ್ಲಿ ಪ್ರಸ್ತಾವನೆ ಸಿದ್ಧವಾಗಿದೆ. ಹಂತಹಂತವಾಗಿ ಇದರ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಹಕಾರದ ನಿರೀಕ್ಷೆಯಲ್ಲಿದ್ದೇವೆ.
- ಶ್ಯಾಮಲಾ ಎಂ., ಪ್ರಭಾರ ಮುಖ್ಯಶಿಕ್ಷಕ,
ಬೆಟ್ಟಂಪಾಡಿ ಪ್ರೌಢಶಾಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ