ಭಕ್ತಕೋಡಿ ಸ್ವಿಫ್ಟ್- ಓಮ್ನಿ ಅಪಘಾತ: ಗಾಯಗೊಂಡಿದ್ದ ಓಮ್ನಿ ಚಾಲಕ ಸಾವು
Team Udayavani, Oct 27, 2020, 2:04 PM IST
ಸವಣೂರು: ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅ.25ರಂದು ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮೃತಪಟ್ಟಿದ್ದಾರೆ.
ಮೃತರಾದ ಓಮ್ನಿ ಚಾಲಕ ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.
ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು ನಜ್ಜುಗುಜ್ಜಾಗಿತ್ತು.
ಢಿಕ್ಕಿಯ ರಭಸಕ್ಕೆ ಓಮ್ನಿ ಚಾಲಕ ಅಬ್ದುಲ್ ರಹಿಮಾನ್ ಎಂಬವರ ಎರಡು ಕಾಲಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು