ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಎಂಟರ ಹರೆಯದ ಬಾಲಕ ದಾರುಣ ಬಲಿ!
Team Udayavani, Mar 11, 2021, 8:28 AM IST
ಬೆಳ್ತಂಗಡಿ: ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ.
ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ ಮುರ್ಷಿದ್ ಮೊದಲನೆಯವನಾಗಿದ್ದ. ತಂದೆ ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ ಜತೆಗೆ ತೆರಳಿದ್ದನೆಂದು ಹೇಳಲಾಗಿದೆ.
ತಂದೆಯೇ ಚಾಲಕನಾಗಿ ಲಾರಿ ಚಲಾಯಿಸಿದ ವೇಳೆ ಬಾಲಕ ಆಕಸ್ಮಿಕವಾಗಿ ಅದರ ಚಕ್ರದಡಿ ಸಿಲುಕಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಬೆಳ್ತಂಗಡಿ: ಸಂತೆ ಮಾರುಕಟ್ಟೆ ನೂತನ ಕಟ್ಟಡ ಹರಾಜು : ಸೋಮವಾರ ಸಂತೆ ಯಥಾ ಸ್ಥಳಕ್ಕೆ?
ಪ್ರಸ್ತುತ ಉಜಿರೆಯ ಕೊಟ್ರೋಡಿ ಕಾಂಪೌಂಡ್ ನ ರೈಫಾ ಗಾರ್ಡನ್ ಫ್ಲಾಟ್ನಲ್ಲಿ ನೆಲೆಸಿದ್ದ ದಂಪತಿಗೆ ನಾಲ್ಕು ವರ್ಷ ಪ್ರಾಯದ ಸಫಾ ಎಂಬ ಪುತ್ರಿ ಇದ್ದಾರೆ.
ಘಟನೆ ನಡೆದ ತಕ್ಷಣ ಮೂಡುಬಿದಿರೆ ಆಸ್ಪತ್ರೆಗೆ ಬಾಲಕನ್ನು ಸಾಗಿಸಲಾಗಿತ್ತಾದರೂ ಅದಾಗಲೇ ಮೃತಪಟ್ಟಿದ್ದ. ಅಲ್ಲೇ ಮರಣೋತ್ತರ ಪರೀಕ್ಷೆ ಕೈಗೊಂಡು ರಾತ್ರಿ 12.30ರ ವೇಳೆಗೆ ಉಜಿರೆ ಮಸ್ಜಿದ್ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಇದನ್ನೂ ಓದಿ:ಕುಂದಾಪುರ ಸೇರಿ ರಾಜ್ಯದ ಐದು ಕಡೆ ಎಆರ್ಟಿಒ ಕಚೇರಿ ಆರಂಭಿಸಲು ಪ್ರಸ್ತಾವ ಸ್ವೀಕೃತಿ : ಸವದಿ
ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ