ಪುತ್ತೂರು ಹಾಗೂ ಕಡಬ ತಾಲೂಕು ಸಂಪರ್ಕ ಜೋಡುಕಾವಲಿನಲ್ಲಿ ಸೇತುವೆ ನಿರೀಕ್ಷೆ


Team Udayavani, Jan 6, 2021, 3:41 AM IST

ಪುತ್ತೂರು ಹಾಗೂ ಕಡಬ ತಾಲೂಕು ಸಂಪರ್ಕ ಜೋಡುಕಾವಲಿನಲ್ಲಿ ಸೇತುವೆ ನಿರೀಕ್ಷೆ

ಸವಣೂರು: ಪುತ್ತೂರು ಹಾಗೂ ಕಡಬ ತಾಲೂಕನ್ನು ಜೋಡಿಸುವ ಜೋಡುಕಾವಲು ಎಂಬಲ್ಲಿ ಸೇತುವೆ ನಿರ್ಮಾಣವಾಗಬೇಕೆಂಬ ಬೇಡಿಕೆ ಬಹಳ ಸಮಯಗಳಿಂದ ಇದ್ದರೂ ಈವರೆಗೂ ಈ ಕುರಿತು ಯಾವುದೇ ಪ್ರಗತಿ ಕಂಡಿಲ್ಲ. ಜನತೆಯ ಕೂಗು ಆಡಳಿತಕ್ಕೆ ಇನ್ನೂ ತಟ್ಟಿಲ್ಲ.

ಕಡಬ ತಾಲೂಕಿನ ಸವಣೂರು- ಕುಮಾರ ಮಂಗಲ ಶಾಲೆ ಬಳಿಯ ರಸ್ತೆಯ ಮೂಲಕ ಪುತ್ತೂರು ತಾಲೂಕಿನ ತಿಂಗಳಾಡಿ, ತೆಗ್ಗು ಮೊದಲಾದ ಭಾಗಗಳನ್ನು ಸಂಪರ್ಕಿ ಸಲು ಪುಣcಪ್ಪಾಡಿ ಗ್ರಾಮದ ಜೋಡು ಕಾವಲು ಎಂಬಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂಬ ಬೇಡಿಕೆಯನ್ನು ಈ ಭಾಗದ ಜನರು ಹಿಂದಿನಿಂದಲೇ ಮಂಡಿಸಿದ್ದಾರೆ.

ಪುಣ್ಚಪ್ಪಾಡಿಯಿಂದ ತಿಂಗಳಾಡಿ, ತೆಗ್ಗು, ಕೆದಂಬಾಡಿ ಗ್ರಾಮಗಳನ್ನು ಸಂಪರ್ಕಿ ಸಲು ಜೋಡುಕಾವಲಿನಲ್ಲಿ ಸೇತುವೆ ನಿರ್ಮಾಣವಾದರೆ ಸುಲಭ ವಾಗಲಿದೆ. ಈ ಭಾಗದ ಜನರು ಆ ಪ್ರದೇಶ ಗಳನ್ನು ಸಂಪರ್ಕಿಸಬೇಕಾದರೆ ಕುಮಾರ ಮಂಗಲದಿಂದ ಮಾಡಾವು ಮೂಲಕ ಅಥವಾ ಕುಮಾರಮಂಗಲ-ಸವಣೂರು- ಸರ್ವೆ-ಕೂಡುರಸ್ತೆ ಮೂಲಕ ಸಾಗಿ ಹೋಗ ಬೇಕಾಗಿದೆ. ಇಲ್ಲಿ ಸೇತುವೆ ನಿರ್ಮಾಣವಾದರೆ ಈ ಭಾಗದ ಜನತೆಗೆ ಸುಲಭವಾಗಲಿದೆ.

ಸುಮಾರು 15 ಕಿ.ಮೀ. ಸುತ್ತು ದಾರಿ ಕ್ರಮಿಸುವುದು ತಪ್ಪುತ್ತದೆ. ತಿಂಗಳಾಡಿ, ತೆಗ್ಗು, ಕೆದಂಬಾಡಿ ಗ್ರಾಮ ದವರಿಗೆ ಪುಣ್ಯಕ್ಷೇತ್ರಗಳಾದ ಧರ್ಮಸ್ಥಳ, ಸೌತಡ್ಕ ಮೊದಲಾದೆಡೆ ಹೋಗಬೇಕಾ ದರೆ ಪುತ್ತೂರಿಗೆ ತೆರಳಿ ಹೋಗಬೇಕಿದೆ.ಇಲ್ಲಿ ಸೇತುವೆ ನಿರ್ಮಾಣವಾದರೆ ಅವ ರಿಗೂ ಸಮಯ, ವೆಚ್ಚ ಕಡಿಮೆ ಯಾಗಲಿದೆ.

ರಸ್ತೆಯೂ ಅಭಿವೃದ್ಧಿಯಾಗಬೇಕು
ಜೋಡುಕಾವಲಿಗೆ ಸಂಪರ್ಕಿಸುವ ಪುತ್ತೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಗೆ ಬರುವ ತಿಂಗಳಾಡಿ-ತೆಗ್ಗು ರಸ್ತೆ ಅಭಿ ವೃದ್ಧಿಯಾಗಿದೆ. ಸುಳ್ಯ ಕ್ಷೇತ್ರ ವ್ಯಾಪ್ತಿಯ ಸವಣೂರು-ಕುಮಾರಮಂಗಲ ರಸ್ತೆಯೂ ಅಭಿವೃದ್ಧಿಯಾಗಿದೆ. ಆದರೆ ಕುಮಾರ ಮಂಗಲ-ಜೋಡುಕಾವಲು ರಸ್ತೆ ಇನ್ನೂ ಅಭಿವೃದ್ಧಿಯಾಗಿಲ್ಲ. ಈ ರಸ್ತೆಯನ್ನೂ ಅಭಿ ವೃದ್ಧಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿದೆ.

ಪ್ರಯತ್ನ ಮುಂದುವರಿದಿದೆ
ಜೋಡುಕಾವಲಿನಲ್ಲಿ ಸೇತುವೆ ನಿರ್ಮಾಣ ಬೇಡಿಕೆಯ ಕುರಿತು ಹಲವು ವರ್ಷಗಳಿಂದ ಉಭಯ ಕ್ಷೇತ್ರದ ಶಾಸ ಕರಿಗೆ, ಸಂಸದರಿಗೆ ಸೇರಿದಂತೆ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದೇವೆ. ಇಲ್ಲಿ ಸೇತುವೆ ನಿರ್ಮಾಣವಾಗುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ. ಈ ಬಾರಿ ಸೇತುವೆ ನಿರ್ಮಾಣದ ಕಾರ್ಯಯೋಜನೆಗಳು ಆರಂಭವಾಗುವ ನಿರೀಕ್ಷೆ ಇದೆ.
-ಗಿರಿಶಂಕರ ಸುಲಾಯ, ಸದಸ್ಯರು, ಗ್ರಾ. ಪಂ.ಸವಣೂರು

ಸೇತುವೆ ಆಗಲೇಬೇಕಿದೆ
ಜೋಡುಕಾವಲಿನಲ್ಲಿ ಸೇತುವೆ ನಿರ್ಮಾಣ ಖಂಡಿತಾವಾಗಿಯೂ ಆಗಬೇಕಿದೆ. ಇದಕ್ಕಾಗಿ ಅನುದಾನ ಹೆಚ್ಚು ಬೇಕಾಗುತ್ತದೆ. ಶಾಸಕ ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
-ರಾಜೇಶ್ವರಿ ಕನ್ಯಾಮಂಗಲ, ಅಧ್ಯಕ್ಷರು, ಕಡಬ ತಾ.ಪಂ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.