ಬಡಕೊಟ್ಟು ಕುಟುಂಬಗಳ ಮನೆ ಬಹುತೇಕ ಪೂರ್ಣ
Team Udayavani, Sep 8, 2021, 3:10 AM IST
ಬೆಳ್ತಂಗಡಿ: ಉಜಿರೆ ಗ್ರಾಮದ ಬಡಕೊಟ್ಟು ಎಂಬಲ್ಲಿರುವ ಮೂಲ ನಿವಾಸಿ ಕೊರಗ ಕುಟುಂಬಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 11 ಮನೆಗಳು ಬಹುತೇಕ ಪೂರ್ಣಗೊಂಡಿದೆ.
ಕಳೆದ ವರ್ಷ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಪ್ರತೀ ಮನೆಗೆ 3.50 ಲಕ್ಷ ರೂ. ಘಟಕ ವೆಚ್ಚದಲ್ಲಿ ಅನುದಾನ ಬಿಡುಗಡೆಯಾಗಿತ್ತು. ಹೀಗಾಗಿ 2020 ಮಾರ್ಚ್ ಅವಧಿಯಲ್ಲಿ ಮನೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಕಾಂಕ್ರೀಟ್ ಮೇಚ್ಛಾವಣಿ ಹಂತದವರೆಗೆ ಪೂರ್ಣಗೊಂಡಿದೆ.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ತಾಲೂಕಿಗೆ ಪ್ರಸಕ್ತ ವರ್ಷ 15 ಮನೆಗಳು ಮಂಜೂರಾಗಿದ್ದು, ಅವುಗಳ ಪೈಕಿ 11 ಮನೆಗಳು ಬಡಕೊಟ್ಟು ಕುಟುಂಬಗಳಿಗೆ ನೀಡಲಾಗಿದೆ.
ಮಳೆಗಾಲದ ಮುನ್ನ ಕಾಮಗಾರಿ ಪೂರ್ಣ ಗೊಳಿಸುವ ಉದ್ದೇಶ ಹೊಂದಲಾಗಿತ್ತು. ಇದೀಗ ಎಲ್ಲ ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.
ಪ್ರತೀ ಮನೆಗೆ 3.50 ಲಕ್ಷ ರೂ. ಘಟಕ ಯೋಜನೆ ವೆಚ್ಚ ನೇರವಾಗಿ ಫಲಾನುಭವಿಗಳ ಕೈಸೇರಿದ್ದು, ಶಾಸಕರು ತಲಾ 1 ಲಕ್ಷ ರೂ.ನಂತೆ ವೈಯಕ್ತಿಕ ಅನುದಾನ ಒದಗಿಸಿ 400 ಚದರಡಿ ಮನೆ ನಿರ್ಮಾಣವಾಗಿದೆ.
ಫಲಾನುಭವಿಗಳಾದ ಅಕ್ಕು, ಚೋಮು, ಪ್ರೇಮಾ, ಲಲಿತಾ, ಮೇರಿ, ಚಂದ್ರಾವತಿ, ಮೀನಾಕ್ಷಿ, ರೀತಾ, ವನಿತಾ, ಸಾವಿತ್ರಿ, ಅಂಗಾರೆ ಸೇರಿ 11 ಮಂದಿಗೆ ಮನೆ ಪೂರ್ಣಗೊಂಡಿದೆ.
ಬಡೆಕೊಟ್ಟು ಕೊರಗ ಕುಟುಂಬದ 11 ಮನೆಗಳು ಇನ್ನು ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮೇಲ್ಛಾವಣಿ ಪೂರ್ಣಗೊಂಡಿದ್ದು, ಸಾರಣೆ ಹಂತದಲ್ಲಿದೆ. ವಯರಿಂಗ್, ಬಣ್ಣಬಳಿದು ಉದ್ಘಾಟನೆಗೆ ದಿನ ನಿಗದಿಪಡಿಸಲಾಗುವುದು. –ಹೇಮಚಂದ್ರ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ