ಸುಳ್ಯ -ನಾರ್ಕೋಡು- ಮಂಡೆಕೋಲು ಬಸ್ ಆರಂಭ
Team Udayavani, Oct 5, 2018, 12:39 PM IST
ಅಜ್ಜಾವರ : ಸುಳ್ಯ-ಕಾಂತಮಂಗಲ ಅಜ್ಜಾವರ ರಸ್ತೆಯ ಕಾಂತಮಂಗಲದಲ್ಲಿ ಸೇತುವೆ ದುರಸ್ತಿ ಹಿನ್ನೆಲೆಯಲ್ಲಿ ರಸ್ತೆ ಮುಚ್ಚಿ ಒಂದು ತಿಂಗಳಾಗುತ್ತಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. ಬದಲಿ ಮಾರ್ಗವಾದ ಸುಳ್ಯ – ನಾರ್ಕೋಡು ಮೂಲಕ ಸರಕಾರಿ ಬಸ್ ಸಂಚಾರ ಆರಂಭಿಸಲಾಗಿದೆ.
ಕಾಂತಮಂಗಲ ಸೇತುವೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆ ಕುರಿತಾಗಿ ಗ್ರಾಮಸ್ಥರಲ್ಲಿರುವ ಗೊಂದಲಗಳ ಕುರಿತು ಸೆ. 10ರಂದು ಉದಯವಾಣಿ ಸುದಿನ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿರುವ ಸಾರಿಗೆ ಇಲಾಖೆ, ನಾರ್ಕೋಡು ಮೂಲಕ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಬಳಿಕ ಮಿಥುನ್ ಕರ್ಲಪ್ಪಾಡಿ ಸಹಿತ ಹಲವು ಗ್ರಾಮಸ್ಥರು ಸುಳ್ಯ ಡಿಪೋ ಅಧಿಕಾರಿಗಳಿಗೂ ಮನವಿ ಮಾಡಿ, ಶೀಘ್ರ ಬಸ್ಗಳ ಓಡಾಟ ಆರಂಭಿಸುವಂತೆ ಒತ್ತಾಯಿಸಿದ್ದರು. ಸುಳ್ಯ- ನಾರ್ಕೋಡು ರಸ್ತೆ ಹದಗೆಟ್ಟಿದ್ದರೂ ಪ್ರಯಾಣಿಕರ ಅನುಕೂಲಕ್ಕೆ ಬಸ್ ಸಂಚಾರ ಆರಂಭಿಸಿರುವುದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ದ್ವಿಚಕ್ರ ವಾಹನಗಳೂ ಈ ಮಾರ್ಗವಾಗಿ ಓಡಾಡಲು ಕಷ್ಟವಾಗುತ್ತಿದೆ. ಬಸ್ ಸೇವೆ ಆರಂಭಿಸಿದ್ದರಿಂದ ಸಂಚಾರಕ್ಕೆ ದುಬಾರಿ ವೆಚ್ಚ ಭರಿಸುವುದು ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ