ಮಂದಿರ ರಕ್ಷಣೆಗೆ ಅಭಿಯಾನ: ಪೈ


Team Udayavani, Jul 18, 2019, 5:00 AM IST

u-11

ಬೆಳ್ತಂಗಡಿ: ಮಂದಿರಗಳ ಸರಕಾರೀಕರಣದಿಂದ ಆಗುವ ದುಷ್ಪರಿಣಾಮಗಳನ್ನು ಎದುರಿಸಲು ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರೀಯ ಮಂದಿರ ಸಂಸ್ಕೃತಿ ರಕ್ಷಣೆ ಅಭಿಯಾನ ಆರಂಭಿಸಿದೆ ಎಂದೂ ಹಿಂದೂ ಜನಜಾಗೃತಿ ಸಮಿತಿಯ ವಿವೇಕ ಪೈ ಹೇಳಿದರು.

ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಜಿರೆ ಹಳೆಪೇಟೆ ಸೀತಾರಾಮ ಕಲಾಮಂದಿರದಲ್ಲಿ ಮಂಗಳವಾರ ಜರಗಿದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಗುರುಕಾರ್ಯದ ಕಕ್ಷೆ
ಗುರುಗಳ ಸ್ಥೂಲ ದೇಹ ಅಂದರೆ ವ್ಯಷ್ಟಿ ರೂಪ ಹಾಗೂ ಸಂಪೂರ್ಣ ರಾಷ್ಟ್ರವೆಂದರೆ ಗುರುಗಳ ಸಮಷ್ಟಿ ರೂಪವಾಗಿದೆ. ಗುರುಕಾರ್ಯದ ಕಕ್ಷೆಯು ವ್ಯಕ್ತಿಯ ಆಧ್ಯಾತ್ಮಿಕ ಉದ್ಧಾರದಿಂದ ಸಮಾಜ, ರಾಷ್ಟ್ರ ಹಾಗೂ ಧರ್ಮದ ಉತ್ಥಾನದ ತನಕ ವ್ಯಾಪಿಸಿ ರುತ್ತದೆ. ಧರ್ಮ ಸಂಸ್ಥಾಪನೆ ಅಂದರೆ ಹಿಂದೂ ರಾಷ್ಟ್ರ-ಸ್ಥಾಪನೆ ಕಾರ್ಯವು ವ್ಯಕ್ತಿ, ಸಮಾಜ, ರಾಷ್ಟ್ರ ಹಾಗೂ ಧರ್ಮ ಇವೆಲ್ಲದರ ಉತ್ಕರ್ಷವನ್ನು ಸಾಧಿಸುವ ಹಾಗೂ ಕಾಲಾನುಸಾರ ಆವಶ್ಯಕ ಗುರುಕಾರ್ಯವೇ ಆಗಿದೆ. ಈ ಕಾರ್ಯಕ್ಕಾಗಿ ಸ್ವಕ್ಷಮತೆಯಂತೆ ತನು-ಮನ-ಧನದಿಂದ ಸಹಭಾಗಿಯಾಗುವುದೇ ಕಾಲಾನುಸಾರ ನಿಜವಾದ ಗುರುದಕ್ಷಿಣೆ ಎಂದರು.

ಸನಾತನ ಸಂಸ್ಥೆಯ ಸೌ. ರಾಧಿಕಾ ಪ್ರಭು ಮಾತನಾಡಿ, ಪರಾತ್ಪರ ಗುರು ಡಾ| ಜಯಂತ ಆಠವಲೆ ಅವರ ಗುಣಗಳ ಪರಿಚಯ ಮಾಡಿ, ಗುರುಗಳ ಕುರಿತು ಅಗಾಧ ಕೃತಜ್ಞತೆ ವ್ಯಕ್ತಪಡಿಸುವ ದಿನವೇ ಗುರು ಪೂರ್ಣಿಮೆ. ಪರಾತ್ಪರ ಗುರು ಪ.ಪೂ. ಡಾ| ಜಯಂತ ಆಠವಲೆಯವರಲ್ಲಿನ ಅದ್ವಿತೀಯ ಗುಣಗಳ ಎಲ್ಲೆಡೆ ಪರಿಚಯಿಸಬೇಕಿದೆ. ಆಧ್ಯಾತ್ಮಿಕ ಉನ್ನತಿ ಶೀಘ್ರವಾಗಿ ಆಗಲು ಪ್ರಯತ್ನಿಸುವುದು, ಇದೇ ಅವರ ಬಗ್ಗೆ ನಿಜವಾದ ಕೃತಜ್ಞತೆಯಾಗಿರಲಿದೆ ಎಂದರು.

“ಧರ್ಮಾಧಿಷ್ಠಿತ “ಹಿಂದೂ ರಾಷ್ಟ್ರದ ಸ್ಥಾಪನೆಯ ಆವಶ್ಯಕತೆ ಹಾಗೂ ಹಿಂದೂಗಳ ಯೋಗದಾನ’ ಈ ವಿಷಯದ ಕುರಿತು ಅವರು ಮಾರ್ಗದರ್ಶನ ಮಾಡಿದರು. ಇತರ ಸಮವಿಚಾರಿ ಸಂಘಟನೆಗಳೊಂದಿಗೆ ದೇಶಾ ದ್ಯಂತ 112 ಸ್ಥಳಗಳಲ್ಲಿ ಭಾವ ಪೂರ್ಣ ವಾತಾವರಣದಲ್ಲಿ ಇಂತಹ “ಗುರುಪೂರ್ಣಿಮಾ ಮಹೋ ತ್ಸವವನ್ನು’ ಆಚರಿಸ ಲಾಯಿತು.

ವ್ಯಾಸಪೂಜೆ ಹಾಗೂ ಸನಾತನ ಸಂಸ್ಥೆಯ ಗುರುಪರಂಪರೆಯಲ್ಲಿನ ಶ್ರೀಮತ್ಪರಮಹಂಸ ಚಂದ್ರಶೇಖ ರಾನಂದ, ಶ್ರೀ ಅನಂತಾನಂದ ಸಾಯಿಶ, ಸನಾತನ ಸಂಸ್ಥೆಯ ಶ್ರದ್ಧಾಸ್ಥಾನವಾಗಿರುವ ಸಂತ ಭಕ್ತರಾಜ ಮಹಾರಾಜ, ಪ.ಪೂ. ರಾಮಾನಂದ ಮಹಾರಾಜ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ| ಜಯಂತ ಬಾಳಾಜಿ ಆಠವಲೆಯವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು.
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಿಂದೂ ಸಂಘಟನೆಯ ಅದ್ವಿತೀಯ ಕಾರ್ಯ’ ಹಾಗೂ “ಪರಾತ್ಪರ ಗುರು (ಡಾ|) ಜಯಂತ ಬಾಳಾಜಿ ಆಠವಲೆ ಇವರ ಅಲೌಕಿಕ ಕಾರ್ಯ’ ಈ ವಿಷಯದಲ್ಲಿ ಚಿತ್ರ ಪ್ರದರ್ಶಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಹಿಂದೂ ರಾಷ್ಟ್ರ ನಿರ್ಮಾಣದ ಪಣ
ಜಾತ್ಯತೀತ ಭಾರತದಲ್ಲಿ ಹಿಂದೂಗಳು ಅನೇಕ ಸಮಸ್ಯೆಗಳಿಗೆ ಎಷ್ಟೇ ಪ್ರತಿಭಟನೆ ಮಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ, ಅದಕ್ಕಾಗಿ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕಾಗಿದೆ ಎಂದು ಹಿಂದುತ್ವವಾದಿ ಮಂಗಳೂರಿನ ಮಧುಸೂದನ್‌ ಅಯ್ಯರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.