ಅಡಿಕೆ ಧಾರಣೆ ಇಳಿಸುವ ಖಾಸಗಿ ಮಾರುಕಟ್ಟೆ ತಂತ್ರಕ್ಕೆ ಕ್ಯಾಂಪ್ಕೋ ಪ್ರತಿತಂತ್ರ!


Team Udayavani, Sep 8, 2020, 4:11 AM IST

ಅಡಿಕೆ ಧಾರಣೆ ಇಳಿಸುವ ಖಾಸಗಿ ಮಾರುಕಟ್ಟೆ ತಂತ್ರಕ್ಕೆ ಕ್ಯಾಂಪ್ಕೋ ಪ್ರತಿತಂತ್ರ!

ಪುತ್ತೂರು: ಅಡಿಕೆ ಧಾರಣೆಯನ್ನು ಇಳಿಸಿ ಲಾಭ ಗಳಿಸುವ ಖಾಸಗಿ ಮಾರುಕಟ್ಟೆ ತಂತ್ರಗಾರಿಕೆಯನ್ನು ಸಹಕಾರ ಸಂಸ್ಥೆ ಕ್ಯಾಂಪ್ಕೋ ವಿಫ‌ಲಗೊಳಿಸಿದ್ದು, ಧಾರಣೆ ಏರಿಸುವ ಮೂಲಕ ಖಾಸಗಿಯವರೂ ಧಾರಣೆಯನ್ನು ಇನ್ನಷ್ಟು ಏರುವ ಅನಿವಾರ್ಯತೆ ಸೃಷ್ಟಿಸಿದೆ. ಮಂಗಳೂರು ಚಾಲಿ ಅಡಿಕೆ ಈ ಬಾರಿ ಭರ್ಜರಿ ಧಾರಣೆ ಏರಿಕೆ ಕಂಡಿತು. ಲಾಕ್‌ಡೌನ್‌ ಅನಂತರ 250 ರೂ. ಆಸುಪಾಸಿನಲ್ಲಿದ್ದ ಹಳೆ, ಹೊಸ ಅಡಿಕೆ ಧಾರಣೆ 380 ರಿಂದ 400 ರೂ. ತನಕ ಜಿಗಿದು ದಾಖಲೆ ಸೃಷ್ಟಿಸಿತು. ಆದರೆ ಎರಡು ವಾರಗಳಿಂದ ಖಾಸಗಿ ಖರೀದಿ ಕೇಂದ್ರಗಳಲ್ಲಿ ಧಾರಣೆ ಇಳಿಮುಖ ದಾಖಲಾಗಿತ್ತು.

ಏರಿಕೆಯ ಪ್ರತಿತಂತ್ರ
370ರಿಂದ 375 ರೂ. ತನಕ ಧಾರಣೆ ಕಂಡಿದ್ದ ಹೊಸ ಅಡಿಕೆ 348-350 ರೂ. ಆಸುಪಾಸಿನಲ್ಲಿದೆ. 400 ರೂ. ಗಡಿಯಲ್ಲಿದ್ದ ಹಳೆ ಅಡಿಕೆ ಕೂಡ 390 ರೂ. ಆಸುಪಾಸಿನಲ್ಲಿತ್ತು. ಈಗ ಕ್ಯಾಂಪ್ಕೋ ಸಂಸ್ಥೆ ಧಾರಣೆಯನ್ನು ಏರಿಕೆಯತ್ತ ಕೊಂಡೊಯ್ಯುವ ಮೂಲಕ ಇಳಿಕೆಯ ತಂತ್ರ
ಗಾರಿಕೆಗೆ ಸಡ್ಡು ಹೊಡೆದಿದೆ. ಸೆ. 7 ರಂದು ಕ್ಯಾಂಪ್ಕೋದಲ್ಲಿ ಹೊಸ ಅಡಿಕೆ 360 ರೂ., ಹಳೆ ಅಡಿಕೆ 400 ರೂ.ಗಳಲ್ಲಿ ಖರೀದಿಯಾಗಿದೆ. ಪರಿಣಾಮ ಖಾಸಗಿ ಖರೀದಿ ಕೇಂದ್ರಗಳಲ್ಲಿ ಹೊಸ ಅಡಿಕೆ 355, ಹಳೆ ಅಡಿಕೆ 395 ರೂ.ಗೆ ಖರೀದಿಸಲಾಗಿದೆ.

450 ರೂ. ನಿರೀಕ್ಷೆ !
ಉತ್ತರ ಭಾರತದಲ್ಲಿ ಪ್ರವಾಹದ ಕಾರಣ ಪೂರ್ತಿ ಪ್ರಮಾಣದಲ್ಲಿ ಮಾರುಕಟ್ಟೆ ತೆರೆಯದಿರುವುದು ಕೂಡ ಈಗಿನ ಧಾರಣೆ ಏರಿಳಿಕೆಗೆ ಕಾರಣ. ಇದು ತಾತ್ಕಾಲಿಕ ಸಮಸ್ಯೆ. ಇದನ್ನೇ ನೆಪವಾಗಿಟ್ಟುಕೊಂಡು ಧಾರಣೆ ಇಳಿಸುವ ತಂತ್ರ ನಡೆಯುತ್ತಿದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಈ ಬಾರಿ ಫಸಲು ಕಡಿಮೆ ಆಗಿರುವುದು, ಅಂತರ್‌ ದೇಶೀಯ ಗಡಿಗಳು ತೆರವು ಸಾಧ್ಯತೆ ಕಡಿಮೆ ಇರುವುದು, ಈಗಾಗಲೇ ಶೇ. 75ರಷ್ಟು ಅಡಿಕೆ ಮಾರಾಟ ಆಗಿರುವುದು ಮೊದಲಾದ ಕಾರಣಗಳಿಂದ ಅಡಿಕೆ ಕೊರತೆ ಉಂಟಾಗಿ ಧಾರಣೆ 450 ರೂ.ಗೆ ಏರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ರೈಲ್ವೇಯಲ್ಲಿ ಸಾಗಾಟ ಧಾರಣೆ ಏರಿಕೆಗೆ ಪೂರಕ
ಕೊಂಕಣ ರೈಲ್ವೇ ಪುತ್ತೂರಿನಿಂದ ಸ್ಪ³ರ್ಧಾತ್ಮಕ ದರದಲ್ಲಿ ಗುಜಾರಾತ್‌, ಅಹಮದಾಬಾದ್‌ ಮೊದಲಾದೆಡೆ ಅಡಿಕೆ ಸಾಗಾಟಕ್ಕೆ ಮುಂದೆ ಬಂದಿದೆ. ಇದರಿಂದ ಸಾಗಾಟದ ವೆಚ್ಚ ಇಳಿಮುಖ ಮತ್ತು ಸಮಯ ಉಳಿತಾಯವಾಗಲಿದ್ದು ಅಡಿಕೆ ಧಾರಣೆ ಏರಿಕೆಗೆ ಪರೋಕ್ಷ ಕಾರಣವಾಗಲಿದೆ. ಈ ಹಿಂದೆ ಲಾರಿ, ಟ್ರಕ್‌ಗಳಲ್ಲಿ ಅಡಿಕೆಯನ್ನು ಸಾಗಿಸುತ್ತಿದ್ದಾಗ ಆಗುತ್ತಿದ್ದುದಕ್ಕಿಂತ ರೈಲ್ವೇಯಲ್ಲಿ ವೆಚ್ಚ ಕಡಿಮೆ ಆಗುವ ಕಾರಣ ಈ ಲಾಭ ಧಾರಣೆ ಏರಿಕೆಗೆ ಕಾರಣವಾದೀತು ಎಂದು ಊಹಿಸಲಾಗಿದೆ.

ಉತ್ತರ ಭಾರತದ ದಾಸ್ತಾನು ಕೇಂದ್ರಗಳಲ್ಲಿ ಶೇ. 65ಕ್ಕೂ ಅಧಿಕ ಪ್ರಮಾಣದಲ್ಲಿ ಅಡಿಕೆ ಕೊರತೆ ಉಂಟಾಗಿದೆ. ಅವು ಪೂರ್ಣವಾಗಿ ತೆರೆದಾಗ ಅಡಿಕೆಗೆ ಇನ್ನಷ್ಟು ಬೇಡಿಕೆ ಬರಲಿದೆ. ಈಗಾಗಲೇ ಕ್ಯಾಂಪ್ಕೋ ಗುಣಮಟ್ಟದ ಹಳೆ ಅಡಿಕೆಗೆ ಕೆ.ಜಿ.ಗೆ 400 ರೂ. ನೀಡಿ ಖರೀದಿಸುತ್ತಿದೆ. – ಸತೀಶ್ಚಂದ್ರ ಎಸ್‌.ಆರ್‌.,ಅಧ್ಯಕ್ಷರು, ಕ್ಯಾಂಪ್ಕೋ

ಅಡಿಕೆ ಧಾರಣೆ ಬಗ್ಗೆ ಬೆಳೆಗಾರರು ಆತಂಕ ಪಡಬೇಕಿಲ್ಲ. ಬೇಡಿಕೆ ಈಗಲೂ ಇದೆ. ಅಡಿಕೆ ಆಮದು ಈಗ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬೆಳೆಗಾರರಲ್ಲಿ ಯಾವುದೇ ಭಯ ಬೇಡ. –
ಮಹೇಶ್‌ ಪಿ.,
ಕಾರ್ಯದರ್ಶಿ, ಅಖೀಲ ಭಾರತ ಅಡಿಕೆ ಬೆಳೆಗಾರರ ಸಂಘ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.