ವಿಟ್ಲ: ಕಾರು ಢಿಕ್ಕಿ ಹೊಡೆದು ಬಾಲಕ ಗಂಭೀರ
Team Udayavani, Nov 27, 2021, 5:56 PM IST
ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಸಂಭವಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮಾಣಿ ಕರ್ನಾಟಕ ಪೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.