Kadaba: ಕಾರು- ಸ್ಕೂಟರ್ ಭೀಕರ ಅಪಘಾತ; ಬಾಲಕ ಸ್ಥಳದಲ್ಲೇ ಸಾವು
Team Udayavani, Dec 16, 2023, 10:59 AM IST
ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ಡಿ.15ರ ಶುಕ್ರವಾರ ತಡರಾತ್ರಿ ನಡೆದಿದೆ.
ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ, ಸರಸ್ವತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.
ಬಿಪಿನ್ ತಮ್ಮ ಮನೆಗೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ, ಪಂಜ ಸಮೀಪದ ಪರಮೇಶ್ವರ ಎಂಬವರ ಕಾರು ಚಲನೆಯಿಂದ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ