Acid Attack ಪ್ರಕರಣ; ಘಟನೆಗೆ ಮುನ್ನ ಸಂತ್ರಸ್ತೆಯನ್ನು ಭೇಟಿಯಾಗಿದ್ದ ಆರೋಪಿ
ಪ್ರೀತಿ ನಿರಾಕರಿಸಿದ್ದರಿಂದ ಕೃತ್ಯ; ಕಾಲೇಜು ಸಮೀಪ ಉಡುಪು ಬದಲಿಸಿ ಸಮವಸ್ತ್ರ ಧರಿಸಿದ್ದ
Team Udayavani, Mar 6, 2024, 9:03 AM IST
ಕಡಬ: ಪ್ರೀತಿ ನಿರಾಕರಣೆಯ ಹಿನ್ನೆಲೆಯಲ್ಲಿ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧಳಾಗುತ್ತಿದ್ದ ತನ್ನ ಪ್ರೇಯಸಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್ ಸಿಬಿ (22) ಘಟನೆಗೆ ಸ್ವಲ್ಪ ಸಮಯದ ಮೊದಲು ಆಕೆಯನ್ನು ಭೇಟಿಯಾಗಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಮಾ. 3ರಂದು ರಾತ್ರಿ ಕೇರಳದಿಂದ ರೈಲಿನಲ್ಲಿ ಮಂಗಳೂರಿಗೆ ಬಂದಿಳಿದಿದ್ದ ಅಬಿನ್ ರೈಲು ನಿಲ್ದಾಣದಲ್ಲಿಯೇ ರಾತ್ರಿ ಕಳೆದು ಮರುದಿನ ಮುಂಜಾನೆ ಬಸ್ ಹತ್ತಿ ಕಡಬಕ್ಕೆ ತಲುಪಿದ್ದ. ಬಸ್ನಿಂದ ಇಳಿದ ಆತ ಪರೀಕ್ಷೆ ಬರೆಯಲು ಕಾಲೇಜಿಗೆ ಬರುತ್ತಿದ್ದ ಸಂತ್ರಸ್ತ ವಿದ್ಯಾರ್ಥಿನಿಯನ್ನು ಕಡಬ ಪೇಟೆಯಲ್ಲಿ ಭೇಟಿಯಾಗಿ ಮಾತನಾಡಿ ರುವುದು ಅಂಗಡಿಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ತನ್ನ ಪ್ರೀತಿಯನ್ನು ನಿರಾಕರಿಸದಂತೆ ಕೇಳಿಕೊಂಡಿದ್ದ ಎನ್ನಲಾಗಿದೆ.
ಬೇಕರಿಯಲ್ಲಿ ಫೋನ್ ಚಾರ್ಜ್ಗಿಟ್ಟಿದ್ದ
ಯುವತಿ ತನ್ನನ್ನು ನಿರ್ಲಕ್ಷಿಸಿ ಕಾಲೇಜಿಗೆ ಹೋದುದರಿಂದ ಸಿಟ್ಟಿಗೆದ್ದ ಅಬಿನ್ ಬಳಿಕ ಕಡಬದ ಬೇಕರಿಯೊಂದಕ್ಕೆ ತೆರಳಿ ಅಲ್ಲಿ ತನ್ನ ಮೊಬೈಲ್ ಫೋನ್ ಚಾರ್ಜಿಗಿಟ್ಟು ಸ್ವಲ್ಪ ಸಮಯದಲ್ಲಿ ಬರುವುದಾಗಿ ಬೇಕರಿ ಮಾಲಕರಲ್ಲಿ ಹೇಳಿ ಬೇರೆಡೆಗೆ ತೆರಳಿದ್ದ. ಆ ವೇಳೆ ಕಪ್ಪು ಪ್ಯಾಂಟ್ ಹಾಗೂ ಕಪ್ಪು ಅಂಗಿ ಧರಿಸಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ.
ಬೇಕರಿಯಿಂದ ತನ್ನ ಬ್ಯಾಗ್ ಸಮೇತ ಹೊರಟ ಆತ ಕಡಬ ಎಪಿಎಂಸಿ ಪ್ರಾಂಗಣದ ಬಳಿಯಿಂದ ಕಡಬ ಸರಕಾರಿ ಪ.ಪೂ. ಕಾಲೇಜಿಗೆ ಹೋಗುವ ಕಾಂಕ್ರೀಟ್ ರಸ್ತೆಯಲ್ಲಿ ನಡೆದು ಹೋಗಿ ಅಲ್ಲಿಯೇ ರಸ್ತೆಯ ಪಕ್ಕದಲ್ಲಿ ಜನವಸತಿ ಇಲ್ಲದ ಮನೆಯೊಂದರ ಹಿಂಬದಿ ಯಾರಿಗೂ ಕಾಣದಂತೆ ಬಟ್ಟೆ ಬದಲಾಯಿಸಿ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ನೇರ ಕಾಲೇಜಿಗೆ ತೆರಳಿದ್ದ.
ಕೇರಳದಿಂದ ಕಡಬಕ್ಕೆ ಹಲವು ಬಾರಿ ಬಂದಿದ್ದ ಆತ ಯುವತಿಯ ಜತೆಗೆ ಈ ಹಿಂದೆ ಕಾಲೇಜಿನ ಬಳಿಯೂ ಬಂದಿದ್ದ ಎನ್ನುವುದು ತನಿಖೆಯಿಂದ ಬಯಲಾಗಿದೆ. ಕಡಬದ ಅಂಗಡಿಗಳು, ಕಾಲೇಜನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಎಲ್ಲ ಮಾಹಿತಿಗಳನ್ನು ಹೊಂದಿದ್ದ ಆರೋಪಿ ಕೊನೆಯ ಬಾರಿ ಯುವತಿಯ ಜತೆ ಮಾತನಾಡಿ ಆಕೆ ತನ್ನ ಪ್ರೀತಿಗೆ ಸ್ಪಂದಿಸದೇ ಹೋದಲ್ಲಿ ಆ್ಯಸಿಡ್ ದಾಳಿ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ.
ಘಟನೆಯಲ್ಲಿ ಆರೋಪಿಯು ತಾನು ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಯನ್ನು ಗುರಿಯಾ ಗಿರಿಸಿ ಆ್ಯಸಿಡ್ ಎರಚಿದಾಗ ಆಕೆಯ ಹತ್ತಿರದಲ್ಲಿದ್ದ ಆಕೆಯ ಇಬ್ಬರು ಸ್ನೇಹಿತೆಯರಿಗೂ ಆ್ಯಸಿಡ್ ತಗಲಿ ಗಾಯಗಳಾಗಿವೆ.
ಪೊಲೀಸ್ ಕಸ್ಟಡಿ
ಆರೋಪಿಯನ್ನು ತನಿಖೆಗೊಳಪಡಿಸಿ ಸ್ಥಳ ಮಹಜರು ಇತ್ಯಾದಿ ನಡೆಸಿರುವ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?