ಧರ್ಮಸ್ಥಳ: ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ; 9 ಜಾನುವಾರುಗಳು ವಶಕ್ಕೆ
Team Udayavani, Jul 29, 2020, 8:01 AM IST
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಕನ್ಯಾಡಿ-2 ರಾಮಮಂದಿರ ಸಮೀಪ ಲಾರಿಯಲ್ಲಿ ಹಿಂಸಾತ್ಮಕವಾಗಿ ಗೋ ಸಾಗಟ ನಡೆಸುತ್ತಿದ್ದ ತಂಡವನ್ನು ಮಂಗಳವಾರ ರಾತ್ರಿ ಭಜರಂಗದಳ ಕಾರ್ಯಕರ್ತರು ತಡೆದು ಲಾರಿ ಹಾಗೂ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನಡೆದಿದೆ.
ಆರೋಪಿಗಳಾದ ಅಂಡಿಂಜೆ ಗ್ರಾಮದ ಅಬ್ದುಲ್ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಲಂ: 379, ಕಲಂ: 34 ಐ.ಪಿ.ಸಿ, ಕಲಂ:5,7,9,11 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅಡಿ ದೂರು ದಾಖಲು ಮಾಡಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪವನ ನಾಯಕ ಅವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 8 ಹಸುಗಳು ಮತ್ತು 1 ಹೋರಿ ಸೇರಿ ಒಟ್ಟು 09 ಜಾನುವಾರು ಹಾಗೂ ಕೆ.ಎ.21 ಬಿ.8589 ನಂಬರಿನ ಲಾರಿ ಸೇರಿ ಒಟ್ಟು ಮೌಲ್ಯ 8,90,000 ಮೌಲ್ಯದ ಸೊತ್ತು ವಶ ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ