ಸಾಲ ಮರುಪಾವತಿ ಅವಧಿ ವಿಸ್ತರಿಸಿದ ಕೇಂದ್ರ ; ರಾಜ್ಯ ಸರಕಾರದ ಮೌನ; ರೈತರು ಅತಂತ್ರ


Team Udayavani, Jun 8, 2020, 2:07 PM IST

ಸಾಲ ಮರುಪಾವತಿ ಅವಧಿ ವಿಸ್ತರಿಸಿದ ಕೇಂದ್ರ ; ರಾಜ್ಯ ಸರಕಾರದ ಮೌನ; ರೈತರು ಅತಂತ್ರ

ಸಾಂದರ್ಭಿಕ ಚಿತ್ರ

ಮುಂಡಾಜೆ: ಕೋವಿಡ್ ಲಾಕ್‌ಡೌನ್‌ ಕಾರಣದಿಂದ ಜನ ಸಾಮಾನ್ಯರ ಆದಾಯಕ್ಕೆ ಪೆಟ್ಟು ಬಿದ್ದಿರುವ ಕಾರಣ ಕೇಂದ್ರ ಸರಕಾರ ಮತ್ತು ಆರ್‌ಬಿಐ ಹೊರಡಿಸಿದ ಸಾಲ ಮರುಪಾವತಿ ವಿಸ್ತರಣೆ ಹೊಸ ಆದೇಶದಲ್ಲಿ ಬ್ಯಾಂಕ್‌ಗಳ ಸುಸ್ತಿ ಹಾಗೂ ಚಾಲ್ತಿ ಸಾಲಗಳನ್ನು ಮರು ಪಾವತಿ ಸಲು ಆಗಸ್ಟ್‌ ಕೊನೆಯವರೆಗೆ ಸಮಯವಿದೆ ಎಂದು ತಿಳಿಸಲಾಗಿದೆ. ಆದರೆ ರಾಜ್ಯ ಸರಕಾರ ಈ ಬಗ್ಗೆ ಯಾವುದೇ ಆದೇಶ ಹೊರಡಿಸದೆ ಮೌನಕ್ಕೆ ಶರಣಾಗಿರುವುದರಿಂದ ಸಾಲ ಕಟ್ಟಬೇಕಾದ ರೈತರು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ. ರಾಜ್ಯ ಸರಕಾರದ ಅಧೀನದಲ್ಲಿರುವ ಸಹಕಾರ ಸಂಘಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲಗಾರ ರೈತರಿಗೆ ಜೂ. 30ರೊಳಗೆ ಅಥವಾ ಅದರೊಳಗಿನ ಅವಧಿಯ ದಿನಾಂಕಕ್ಕೆ ಮರುಪಾವತಿಸುವಂತೆ ನೋಟಿಸ್‌ ಬರಲಾರಂಭಿಸಿದೆ. ಕೃಷಿ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಹಾಗೂ ಬೆಲೆ ಸ್ಥಿರತೆ ನಿಗದಿಗೊಂಡಿಲ್ಲ. ಮಳೆಗಾಲದ ಕೃಷಿ ಕೆಲಸ, ಔಷಧ ಸಿಂಪಡಣೆ, ಗೊಬ್ಬರ ಹಾಕುವ ಕೆಲಸಗಳಿಗೆ ಹಣ ಇಲ್ಲದೇ
ರೈತರು ಪರದಾಡುವಂತಾಗಿದೆ. ಅತ್ತದರಿ, ಇತ್ತಪುಲಿ ಸಹಕಾರ ಸಂಘಗಳ ಸಿಬಂದಿ ಸಾಲ ಮರುಪಾವತಿ ಕುರಿತು ಬಾಕಿದಾರರಿಗೆ ನೋಟಿಸ್‌ ಜಾರಿ ಮಾಡತೊಡಗಿದ್ದಾರೆ. ಈ ಬಗ್ಗೆ ಸಾಲಗಾರರು ಸಹಕಾರ ಸಂಘಗಳಿಗೆ ಬಂದು ಸಿಬಂದಿಯನ್ನು ತರಾ ಟೆಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯ ಸರಕಾರದ ಆದೇಶ ಬದಲಾಗದ ಕಾರಣ ಸಿಬಂದಿ ಕೂಡ ಏನನ್ನೂ ಹೇಳಲಾರದ ಸ್ಥಿತಿಯಲ್ಲಿದ್ದಾರೆ.

ಎಂಕೆಸಿಸಿ ಸಾಲ
ಓರ್ವ ಕೃಷಿಕನಿಗೆ ಗರಿಷ್ಠ 3 ಲಕ್ಷ ರೂ. ತನಕ ನೀಡುತ್ತಿರುವ ಎಂಕೆಸಿಸಿ ಹೆಸರಿನ ಒಂದು ವರ್ಷ ಅವಧಿಯ ನವೀಕರಿಸಬಹುದಾದ ಕೃಷಿ ಸಾಲದ ಮೊತ್ತವನ್ನು ರಾಜ್ಯ ಸರಕಾರ ಕೇಂದ್ರ ಸರಕಾರದಿಂದ ಶೇ. 7.4 ಬಡ್ಡಿ ದರ ದಲ್ಲಿ ಪಡೆದು ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿದೆ. ರೈತರು ಇದಕ್ಕೆ ಯಾವುದೇ ಬಡ್ಡಿ ಪಾವತಿಸಬೇಕಾದ ಅಗತ್ಯ ಇಲ್ಲದ ಕಾರಣ ಈ ಸಾಲಗಳ ಅವಧಿ ವಿಸ್ತರಣೆ ಮಾಡಿದರೆ ಸರಕಾರಕ್ಕೆ ಹಾಗೂ ಸಹಕಾರ ಸಂಘಗಳಿಗೆ ಯಾವುದೇ ನಷ್ಟವಾಗದು. ಆದರೆ ಸಾಲದ ಅಸಲು ಮೊತ್ತವನ್ನು ರೈತರು ನಿಗದಿತ ದಿನಗಳ ಅವಧಿಗೆ ಪಾವತಿ ಸಲೇ ಬೇಕು. ಆದರೆ ಸಂಕಷ್ಟದ ಈ ದಿನಗಳಲ್ಲಿ ಮೊತ್ತ ಹೊಂದಾಣಿಕೆ ಮಾಡಿಕೊಳ್ಳಲಾಗದೇ ಸಾಲಗಾರರು ಬವಣೆ ಪಡುವಂತಾಗಿದೆ.

ನೋಟಿಸ್‌ ಬಂದಿದೆ
ಕೇಂದ್ರ ಸರಕಾರ ಸಾಲ ಮರುಪಾವತಿಗೆ ಆಗಸ್ಟ್‌ ಕೊನೆಯವರೆಗೆ ಸಮಯವಿದೆ ಎಂದು ಘೋಷಣೆ ಮಾಡಿದ್ದರೂ ಜೂನ್‌ನಲ್ಲೇ ಸಾಲ ಮರುಪಾವತಿಸುವಂತೆ
ಸಹಕಾರ ಸಂಘದಿಂದ ನೋಟಿಸ್‌ ಬಂದಿದೆ.
– ವಿಶ್ವನಾಥ, ಎಂಕೆಸಿಸಿ ಸಾಲಗಾರ, ಮುಂಡಾಜೆ

ಆದೇಶ ಬಂದಿಲ್ಲ
ಸಾಲ ಮರು ಪಾವತಿ ದಿನಾಂಕ ವಿಸ್ತರಣೆ ಕುರಿತು ರಾಜ್ಯ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಈ ಕಾರಣದಿಂದ ಸಹಕಾರ ಸಂಘದವರು ಸಾಲ ಮರುಪಾವತಿಗೆ ನೋಟಿಸ್‌ ನೀಡುತ್ತಿದ್ದಾರೆ.
– ಪ್ರವೀಣ್‌ ನಾಯಕ್‌, ಉಪನಿಬಂಧಕರು, ಸಹಕಾರ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.