ಚಾರ್ಮಾಡಿ: ಅರಣ್ಯ ಸಿಬಂದಿ ಶ್ರಮ; ಕಾಳ್ಗಿಚ್ಚು ಹತೋಟಿಯತ್ತ
Team Udayavani, Mar 25, 2023, 6:19 AM IST
ಬೆಳ್ತಂಗಡಿ: ಚಿಕ್ಕಮಗಳೂರು ಹಾಗೂ ಚಾರ್ಮಾಡಿ ಭಾಗದ ಬಾಳೂರು ಅರಣ್ಯ ಪ್ರದೇಶದಲ್ಲಿ ಕಂಡುಬಂದಿರುವ ಕಾಳ್ಗಿಚ್ಚು ಬೆಳ್ತಂಗಡಿ ಅರಣ್ಯ ವ್ಯಾಪ್ತಿಯ ಕಡೆ ಹಬ್ಬದಂತೆ 4 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ.
ಬಂಡಾಜೆ ಫಾಲ್ಸ್ ಮಧ್ಯಭಾಗ ಕಾಡಿನಲ್ಲಿರುವ ಒಣಹುಲ್ಲು ಹಾಗೂ ಮರದ ತುಂಡುಗಳಲ್ಲಿ ಸಣ್ಣ ಪ್ರಮಾಣದ ಬೆಂಕಿ ಇದ್ದು, ಅದನ್ನು ಆರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಬೆಂಕಿಯ ಪ್ರಖರತೆ ಕಡಿಮೆಯಾಗಿದ್ದು, ಕಾಳ್ಗಿಚ್ಚು ಹತೋಟಿಯತ್ತ ಬಂದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಡಿಆರ್ಎಫ್ಒಗಳಾದ ರವೀಂದ್ರ ಅಂಕಲಗಿ, ಯತೀಂದ್ರ, ಗಸ್ತು ಅರಣ್ಯ ಪಾಲಕರಾದ ಪಾಂಡುರಂಗ ಕಮತಿ, ರವಿ ಹಾಗೂ ಸ್ಥಳೀಯ ಕೆಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಹೊಗೆ, ಉರಿಬಿಸಿಲು ಕಾರ್ಯಾಚರಣೆಗೆ ಬಹಳಷ್ಟು ಅಡ್ಡಿಯಾಗುತ್ತಿದ್ದು, ಅರಣ್ಯ ಇಲಾಖೆ ಸಿಬಂದಿ ಹರಸಾಹಸ ನಡೆಸುವಂತಾಗಿದೆ. ತೀರಾ ದುರ್ಗಮ ಪ್ರದೇಶ, ಕಾಡಾನೆಗಳ ತಿರುಗಾಟವೂ ಆತಂಕ ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್