ಚಾರ್ಮಾಡಿ: ಲಘು ವಾಹನ ಸಂಚಾರಕ್ಕೆ ಮುಕ್ತ: ಉಭಯ ಜಿಲ್ಲಾಧಿಕಾರಿಗಳ ಆದೇಶ
Team Udayavani, Aug 14, 2021, 1:49 AM IST
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದ್ದ ರಿಂದ, ಈ ಹಿಂದೆ ರಾತ್ರಿ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿತ್ತು. ಪ್ರಸಕ್ತ ಹೆದ್ದಾರಿ ಇಲಾಖೆ ಅಗತ್ಯ ಕಾಮಗಾರಿ ಕೈಗೊಂಡಿದ್ದರಿಂದ ಪ್ರಯಾಣಿಕರ ಅಗತ್ಯತೆ ಹಾಗೂ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ದಿನದ 24 ತಾಸು ಲಘುವಾಹನ ಸಂಚಾರಕ್ಕೆ ಅವಕಾಶ ನೀಡಿ ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜು. 23ರಂದು 6ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾದ ಬಳಿಕ ಘಾಟಿಯಲ್ಲಿ ಸಂಜೆ 7ರಿಂದ ಬೆ. 6ರ ತನಕ ಎಲ್ಲ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಬೆಳಗ್ಗಿನ ಅವಧಿಯಲ್ಲಿ ವಾಹನದಟ್ಟಣೆ ಉಂಟಾಗಿ ಬಹಳಷ್ಟು ಸಮಸ್ಯೆ ಎದುರಾಗಿತ್ತು. ನಿರ್ಬಂಧ ತೆರವಿಗೆ ಶಾಸಕರಾದ ಬೆಳ್ತಂಗಡಿಯ ಹರೀಶ್ ಪೂಂಜ, ಮೂಡಿಗೆರೆಯ ಎಂ.ಪಿ.ಕುಮಾರಸ್ವಾಮಿ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಒತ್ತಡ ಹೇರಿದ್ದರಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಯಾವುದಕ್ಕೆಲ್ಲ ಅವಕಾಶ :
ಉಭಯ ಜಿಲ್ಲಾಧಿಕಾರಿಗಳು ಚರ್ಚಿಸಿ ಆ.12ರಂದು ಆದೇಶ ಹೊರಡಿಸಿದ್ದು ಟೆಂಪೋ ಟ್ರಾವೆಲರ್, ಆ್ಯಂಬುಲೆನ್ಸ್, ಕಾರು, ಜೀಪು, ಮಿನಿವ್ಯಾನ್ ಹಾಗೂ ಇನ್ನಿತರ ಲಘು ವಾಹನಗಳು ಘಾಟಿಯಲ್ಲಿ ದಿನಪೂರ್ತಿ ಸಂಚರಿಸಲು ಅವಕಾಶ ನೀಡಿದ್ದಾರೆ. ಘನ ವಾಹನಗಳಾದ ಕೆಂಪು ಬಸ್, ಆರು ಚಕ್ರದ ಲಾರಿಗಳಿಗೆ ಬೆ. 6ರಿಂದ ಸಂಜೆ 7ರ ತನಕ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬುಲೆಟ್ ಟ್ಯಾಂಕರ್, ರಾಜಹಂಸ, ಶಿಪ್ ಕಾರ್ಗೋ ಹಾಗೂ ಇನ್ನಿತರ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…