ಸಾಲ ಬಾಧೆಯಲ್ಲಿ ಚಾರ್ಮಾಡಿ ವ್ಯಾಪಾರಸ್ಥರು

 40 ದಿವಸಗಳಿಂದ ಅಂಗಡಿ ಮುಂಗಟ್ಟು ಬಂದ್‌

Team Udayavani, Sep 19, 2019, 4:44 AM IST

q-43

ಚಾರ್ಮಾಡಿ ರಸ್ತೆಯಲ್ಲಿ ಗುಡ್ಡ ಜರಿದಿದ್ದ ಭಾಗ.

ಬೆಳ್ತಂಗಡಿ: ಚಾರ್ಮಾಡಿ ರಸ್ತೆ ಕೇವಲ ಸಂಪರ್ಕಕ್ಕಷ್ಟೇ ಸೀಮಿತವಾಗದೆ ಪ್ರವಾಸೋದ್ಯಮದ ಭಾಗವಾಗಿ ಸ್ಥಳೀಯರ ಜೀವನೋಪಾಯಕ್ಕೂ ಆಸರೆಯಾಗಿತ್ತು. ಆದರೆ ಪ್ರಕೃತಿ ವಿಕೋಪ ದಿಂದ ಈ ಪ್ರದೇಶದ 50ಕ್ಕೂ ಹೆಚ್ಚು ಹೊಟೇಲಿಗರು, ವ್ಯಾಪಾರಸ್ಥರು ಈಗ ಸಾಲಬಾಧೆಗೆ ಸಿಲುಕಿದ್ದಾರೆ.

ಆಸ್ಪತ್ರೆ, ಶಿಕ್ಷಣ, ಧಾರ್ಮಿಕ ಮಾತ್ರವಲ್ಲದೆ ವ್ಯಾಪಾರ – ವಹಿವಾಟು, ಉದ್ಯೋಗ ಇತ್ಯಾದಿಗಳ ನೆಲೆಯಲ್ಲಿಯೂ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವೆ ಸಂಪರ್ಕ ಕಲ್ಪಿ ಸುವ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿಯಿಂದ ಮೂಡಿಗೆರೆ ವರೆಗೆ ಆ. 9ರ ಬಳಿಕ ಶ್ಮಶಾನ ಮೌನ ಆವರಿಸಿದೆ. ಇದರಿಂದ ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲ ಮಾಡಿ ಅಂಗಡಿ ತೆರೆದಿದ್ದವರು ಕೈಸುಟ್ಟುಕೊಂಡಿದ್ದಾರೆ.

ಶಿರಾಡಿ ರಸ್ತೆಯತ್ತ ಇಂಗಿತ
ಚಾರ್ಮಾಡಿ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದರೂ ಪರಿಸ್ಥಿತಿ ಮತ್ತೆ ಯಾವಾಗ ಬಿಗಡಾ ಯಿಸುತ್ತದೆ ಎಂದು ಹೇಳಲಾಗದು. ಆದ್ದರಿಂದ ಶಿರಾಡಿ ಹಾಗೂ ಪರ್ಯಾಯ ರಸ್ತೆಗಳತ್ತ ಹೊಟೇಲನ್ನು ಸ್ಥಳಾಂತರಿಸುವ ಚಿಂತನೆ ನಡೆಸಿರುವು ದಾಗಿ ಹಸನಬ್ಬ ಚಾರ್ಮಾಡಿ ಇಂಗಿತ ವ್ಯಕ್ತಪಡಿಸಿದ್ದಾರೆ. ಕೊಟ್ಟಿಗೆ ಹಾರದಿಂದ ಕಳಸಕ್ಕಾಗಿ ತೆರಳುವ ಬಸ್‌ಗಳು ಮಾಗುಂಡಿ ಯಾಗಿ ಹೊರನಾಡು ಮೂಲಕ ತೆರಳುತ್ತಿವೆ. ಇದರಿಂದ ಕೊಟ್ಟಿಗೆಹಾರ ಪ್ರದೇಶದ ಸುಮಾರು 40 ಹೊಟೇಲ್‌ಗ‌ಳು ಬಾಗಿಲು ತೆರೆಯದೆ 40 ದಿವಸಗಳು ಕಳೆದಿವೆ.

ಆಸ್ಪತ್ರೆ ತುರ್ತು ಸೇವೆಗೆ ಸಮಸ್ಯೆ
ಚಾರ್ಮಾಡಿಯಲ್ಲಿ ಲಘು ವಾಹನ ಸಂಚಾರಕ್ಕೆ ಹಗಲು ಮಾತ್ರ ಅನುವು ಮಾಡಿದ್ದರಿಂದ ಚಿಕ್ಕಮಗಳೂರು, ಆಲ್ದೂರು, ಮೂಡಿಗೆರೆ, ಕೊಟ್ಟಿಗೆ ಹಾರ ಸುತ್ತಮುತ್ತಲ ಜನರಿಗೆ ಆಸ್ಪತ್ರೆ, ಪಾಸ್‌ಪೋರ್ಟ್‌, ಶಿಕ್ಷಣ ಸಂಬಂಧಿತ ಕೆಲಸಗಳಿಗೆ ಹಗಲು ತೆರಳಲು ಸಮಾಸ್ಯೆಯಾಗುತ್ತಿದೆ. ರಾತ್ರಿ ತಡವಾದಲ್ಲಿ ಚೆಕ್‌ ಪೋಸ್ಟ್‌ನಲ್ಲೇ ಕಾಯುವ ಪರಿಸ್ಥಿತಿ. ಮಂಗಳೂರು ಆಸ್ಪತ್ರೆಗಳ ವೈದ್ಯರು ಹೆಚ್ಚಾಗಿ ಸಂಜೆ 4 ಗಂಟೆ ಬಳಿಕ ಅರ್ಟ್ಟ್‌ಮೆಂಟ್‌ ನೀಡುತ್ತಿದ್ದು, ಹಿಂದಿರುಗಿ ಚಾರ್ಮಾಡಿ ತಲುಪುವಾಗ ರಾತ್ರಿ ಯಾದಲ್ಲಿ ಮುಂದಕ್ಕೆ ಸಂಚಾರ ಸಾಧ್ಯವಾಗುತ್ತಿಲ್ಲ. ಈ ಕುರಿತು ಜಿಲ್ಲಾಡಳಿತ ಗಮನ ಹರಿಸುವಂತೆ ರೋಗಿಗಳ ಮನೆಮಂದಿ ವಿನಂತಿಸು ತ್ತಿದ್ದಾರೆ.

3 ಕಡೆ 10 ಅಡಿ ರಸ್ತೆಗೆ ಹಾನಿ
ಭೂ ಕುಸಿತದಿಂದ ಚಾರ್ಮಾಡಿ ವ್ಯಾಪ್ತಿಯ ಮೂರು ಕಡೆ ಸುಮಾರು 10 ಅಡಿ ರಸ್ತೆ ಕುಸಿದಿದೆ. ಬೆಳ್ತಂಗಡಿಯಿಂದ ತೆರಳುವ 11ನೇ ತಿರುವಿನ ಬಳಿಕ, ಅಲೆಕಾನ್‌ ಕ್ರಾಸ್‌, ಅಣ್ಣಪ್ಪ ಬೆಟ್ಟ ಸಮೀಪದ ವ್ಯೂ ಪಾಯಿಂಟ್‌ ಸ್ಥಳಗಳಲ್ಲಿ 10 ಅಡಿ ರಸ್ತೆ ಕೊರೆದುಹೋಗಿದ್ದು, ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಿಮೆಂಟ್‌ ಇಟ್ಟಿಗೆಯ ತಡೆಗೋಡೆ ನಿರ್ಮಿಸಲಾಗಿದ್ದು, ಶೀಘ್ರ ಶಾಶ್ವತ ಕಾಮಗಾರಿ ಆರಂಭಿಸುವಂತೆ ಸವಾರರು ಒತ್ತಾಯಿಸುತ್ತಿದ್ದಾರೆ.

40 ವರ್ಷಗಳಿಂದ ಇಲ್ಲಿ ಹೊಟೇಲ್‌ ನಡೆಸುತ್ತಿದ್ದೇನೆ. ಪ್ರತಿ ದಿನ 20 ಬಸ್‌ಗಳು ನಮ್ಮ ಹೋಟೆಲ್‌ಗೆ ಬರುತ್ತಿದ್ದವು. ಈಗ ವ್ಯಾಪಾರವಿಲ್ಲದೆ ಬಾಡಿಗೆ ನೀಡಲು ಕೂಡ ಸಾಧ್ಯವಾಗುತ್ತಿಲ್ಲ.
– ರಮೇಶ್‌ ಭಟ್‌, ಹೊಟೇಲ್‌ ಮಾಲಕ

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.