ಸಂಚಾರ ಸಂದಿಗ್ಧದಲ್ಲಿ ಚಾರ್ಮಾಡಿ ಬಸ್‌ ಪ್ರಯಾಣಿಕರು

ಮಿನಿ ಬಸ್‌ ವೇಳಾಪಟ್ಟಿ ವ್ಯತ್ಯಯ; ಘಾಟಿ ರಸ್ತೆಗೆ ಇನ್ನೂ ಇಲ್ಲ ವಿಸ್ತರಣೆ ಭಾಗ್ಯ

Team Udayavani, Mar 14, 2020, 5:34 AM IST

ಸಂಚಾರ ಸಂದಿಗ್ಧದಲ್ಲಿ ಚಾರ್ಮಾಡಿ ಬಸ್‌ ಪ್ರಯಾಣಿಕರು

ಬೆಳ್ತಂಗಡಿ/ಮುಂಡಾಜೆ: ಕಳೆದ ಮಳೆಗಾಲದಲ್ಲಿ ಪ್ರವಾಹದ ಹೊಡೆತಕ್ಕೆ ನಲುಗಿದ ಚಾರ್ಮಾಡಿ ಘಾಟಿ ರಸ್ತೆ ವಿಸ್ತರಣೆಯ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಈ ನಡುವೆ ಅಲ್ಲಿನ ಜನರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿ ಮಿನಿ ಬಸ್‌ಗಳನ್ನು ಆರಂಭಿಸಿದ್ದರೂ ಅವು ವೇಳಾ ಪಟ್ಟಿಯಂತೆ ಸಂಚರಿಸದ
ಕಾರಣ ಚಾರ್ಮಾಡಿಯ ಪ್ರಯಾಣಿಕರ ಸಂಕಷ್ಟ ಕೊನೆಯಾಗಿಲ್ಲ.

ಆಗಸ್ಟ್‌ ಮಳೆಗೆ ಘಾಟಿ ರಸ್ತೆಯ ಹಲವು ಕಡೆ ಭೂ ಕುಸಿತ ಸಂಭವಿಸಿದ್ದರಿಂದ ರಸ್ತೆ ಏಕಪಥವಾಗಿದೆ. ರಸ್ತೆ
ವಿಸ್ತರಣೆಗಾಗಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸರ್ವೇ ನಡೆಸಿದ್ದು, ಶಾಶ್ವತ ರಸ್ತೆಗಾಗಿ 500 ಕೋ.ರೂ. ಅಂದಾಜು ಪಟ್ಟಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿದೆ. ಆದರೆ ಅರಣ್ಯ ಇಲಾಖೆ ಅನುಮತಿಸದಿರುವುದು ಅಡ್ಡಿಯಾಗಿದೆ. ಮಳೆಗಾಲ ಹತ್ತಿರವಾಗುತ್ತಿದ್ದರೂ ಜನ ಪ್ರತಿನಿಧಿಗಳಾಗಲೀ ಅಧಿಕಾರಿ
ಗಳಾಗಲೀ ಗಂಭೀರವಾಗಿ ಪರಿಗಣಿಸಿಲ್ಲ. ಈ ಬಾರಿಯೂ ಮಳೆ ಜೋರಾಗಿದ್ದರೆ ಘಾಟಿ ಮತ್ತೆ ಕುಸಿದು ಮಂಗಳೂರು- ಚಿಕ್ಕಮಗಳೂರು ಸಂಪರ್ಕ ಕಡಿತ ಗೊಳ್ಳುವ ಭೀತಿ ಇದೆ.

ಪ್ರಯಾಣಿಕರ ಅಸಹಾಯಕತೆ
ಪ್ರಯಾಣಿಕರ ಹಿತದೃಷ್ಟಿಯಿಂದ ಮಂಗಳೂರು ಕೆಎಸ್ಸಾರ್ಟಿಸಿ ಡಿಪೋದ ಆದೇಶದ ಮೇರೆಗೆ ಉಡುಪಿ ಡಿಪೋದಿಂದ ಡಿ.28ರಿಂದ ಒಟ್ಟು 6 ಮಿನಿಬಸ್‌ಗಳ ಸೇವೆಯನ್ನು ಆರಂಭಿಸಲಾಗಿತ್ತು. ಆರಂಭದಲ್ಲಿ ಸಾಕಷ್ಟು ಅನುಕೂಲವಾಗಿತ್ತಾದರೂ ಬಸ್‌ಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಮತ್ತು ಧರ್ಮಸ್ಥಳ ಡಿಪೋಗಳಿಂದ ಬೆಳಗ್ಗೆ ಹೊರಡುವ ಬಸ್‌ಗಳು ಏಕಕಾಲದಲ್ಲಿ ಉಜಿರೆಯಲ್ಲಿ ಸಾಲುಸಾಲಾಗಿ ನಿಲ್ಲುತ್ತಿವೆ. ಉಳಿದ ಸಮಯದಲ್ಲಿ ಬಸ್‌ ಲಭ್ಯವಿಲ್ಲದೆ ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಬಂದೊದಗಿದೆ.

ಅಸಮರ್ಪಕ ಮಾರ್ಗಸೂಚಿ
ಮಂಗಳೂರು ಮೂರನೇ ಡಿಪೋದ ಬಸ್‌ಗಳು ಮೂಡಿಗೆರೆಯಿಂದ ಹೊರಡುವಾಗ ಮಂಗಳೂರು ಅಥವಾ ಧರ್ಮಸ್ಥಳ ಮಾರ್ಗಸೂಚಿಯನ್ನು ಹೊತ್ತು ಉಜಿರೆ ವರೆಗೆ ಮಾತ್ರ ಸಂಚರಿಸಿ, ಅಲ್ಲಿ ಪ್ರಯಾಣಿಕರನ್ನು ಇಳಿಸಿ, ತಿರುಗಿ ಮೂಡಿಗೆರೆ ಕಡೆಗೆ ಚಲಿಸುತ್ತವೆ. ಈ ಬಗ್ಗೆ ನಿರ್ವಾಹಕರಲ್ಲಿ ವಿಚಾರಿಸಿದರೆ ಉಜಿರೆ ಮಾರ್ಗಸೂಚಿಯ ಫಲಕ ಇಲ್ಲದ್ದರಿಂದ ಮಂಗಳೂರು ಅಥವಾ ಧರ್ಮಸ್ಥಳ ಫಲಕ ಹಾಕುತ್ತಿದ್ದೇವೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ.

ಕೆಎಸ್ಸಾರ್ಟಿಸಿಗೆ ಉತ್ತಮ ಆದಾಯ ತರುತ್ತಿದ್ದರೂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ
ಸಮಸ್ಯೆ ತಲೆದೋರಿದೆ. ಮತ್ತೂಂದೆಡೆ ಮಿತಿ ಮೀರಿ ಪ್ರಯಾಣಿಕರನ್ನು ತುಂಬುತ್ತಿರುವುದೂ ಸಮಸ್ಯೆಯಾಗಿದೆ.

ನಾನು ಮಿನಿಬಸ್‌ನ ನಿತ್ಯ ಪ್ರಯಾಣಿಕ. ಬೆಳಗ್ಗೆ ಉಜಿರೆಯಿಂದ ಹೋಗುವಾಗಲೂ ಸಂಜೆ ಮೂಡಿಗೆರೆಯಿಂದ ಮರಳುವಾಗಲೂ ನಿಗದಿತ ವೇಳಾಪಟ್ಟಿ ಇಲ್ಲದ ಕಾರಣ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ.
– ಅಮರನಾಥ, ವ್ಯಾಪಾರಸ್ಥರು

ಸಹಕಾರ ಸಾರಿಗೆ ಬಸ್‌ಗಳು ಆಗುಂಬೆ ಕಡೆ ಸಂಚಾರವನ್ನು ಮೊಟಕುಗೊಳಿಸುವುದರಿಂದ ಆಗುಂಬೆ ಮಾರ್ಗದಲ್ಲೂ ನಮ್ಮ ಡಿಪೋದ ಮಿನಿ ಬಸ್‌ಗಳನ್ನು ಓಡಿಸಲಾಗುತ್ತಿದೆ. ಹೀಗಾಗಿ ಮಿನಿ ಬಸ್‌ಗಳ ಕೊರತೆಯಾಗಿದ್ದರಿಂದ ನಿಗದಿತ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗುತ್ತಿದೆ.
– ಉಮೇಶ್‌, ಸಂಚಾರ ನಿಯಂತ್ರಕ, ಕೆಎಸ್ಸಾರ್ಟಿಸಿ ಮಂಗಳೂರು 3ನೇ ಡಿಪೋ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.