ಚೆಕ್ ಅಮಾನ್ಯ ಪ್ರಕರಣ: 5.72 ಲಕ್ಷ ರೂ. ದಂಡ
Team Udayavani, Mar 5, 2023, 6:35 AM IST
ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್ ಅಮಾನ್ಯ (ಬೌನ್ಸ್) ಪ್ರಕರಣದಲ್ಲಿ 5,72,800 ರೂ. ದಂಡ ವಿಧಿಸಿ ಆದೇಶ ನೀಡಿದೆ.
ವಾಮದಪದವು ಪಾಲೊಟ್ಟು ನಿವಾಸಿ ಕೃಷ್ಣಪ್ಪ ಪೂಜಾರಿ ಪ್ರಕರಣದ ಆರೋಪಿಯಾಗಿದ್ದು, ಆತ ಬಂಟ್ವಾಳ ಪಿಎಲ್ಡಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್ ಕೂಡ ಅಮಾನ್ಯಗೊಂಡಿತ್ತು. ಹೀಗಾಗಿ ಬ್ಯಾಂಕ್ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ ಬಂಟ್ವಾಳ ಸಿವಿಲ್ ಜಡ್ಜ್ ಹಿರಿಯ ವಿಭಾಗ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಒಟ್ಟು ದಂಡದಲ್ಲಿ 5 ಸಾವಿರ ರೂ. ನ್ಯಾಯಾಲಯ ಹಾಗೂ ಉಳಿದ ಮೊತ್ತವನ್ನು ಬ್ಯಾಂಕಿಗೆ ಪಾವತಿಸಲು ಆದೇಶಿಸಿದೆ. ಬ್ಯಾಂಕಿನ ಪರ ನ್ಯಾಯವಾದಿ ಶಿವಪ್ರಕಾಶ್ ಜೈನ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ