ಧರ್ಮಸ್ಥಳಕ್ಕೆ ನಿಯೋಜಿತ ಮುಖ್ಯಮಂತ್ರಿ ಎಚ್‌ಡಿಕೆ


Team Udayavani, May 23, 2018, 1:41 PM IST

23-may-11.jpg

ಬೆಳ್ತಂಗಡಿ: ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಬೆಳಗ್ಗೆ 9.30ರ ಸುಮಾರಿಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ವಿಶೇಷ ಮೆರವಣಿಗೆಯೊಂದಿಗೆ
ದೇವಸ್ಥಾನಕ್ಕೆ ಕರೆತರಲಾಯಿತು. ಬಳಿಕ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌.ಡಿ.ಕೆ. ಅವರು ನಾಡು
ಸಮೃದ್ಧವಾಗಿರುವಂತೆ ಬೇಡಿದರು. ಬಳಿಕ ದೇವಸ್ಥಾನ ಬಳಿ ಕುಳಿತು ಕೆಲಕಾಲ ಧ್ಯಾನ ಮಾಡಿದರು. ಈ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇನ್ದ್ರ ಕುಮಾರ್‌ ಜೆಡಿಎಸ್‌ ಮುಖಂಡರು ಉಪಸ್ಥಿತರಿದ್ದರು.

ಪೂಜೆ ಬಳಿಕ ಎಚ್‌.ಡಿ.ಕೆ. ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಬೀಡಿಗೆ
ತೆರಳಿ ಮಾತುಕತೆ ನಡೆಸಿದರು. ಈ ವೇಳೆ ಹೆಗ್ಗಡೆ ಅವರನ್ನು ಗೌರವಿಸಲಾಯಿತು. ಹೆಗ್ಗಡೆ ದಂಪತಿ ಅವರೂ ಕುಮಾರಸ್ವಾಮಿ ದಂಪತಿಯನ್ನು ಗೌರವಿಸಿ ವಿಗ್ರಹ ಕೊಡುಗೆಯಾಗಿ ನೀಡಿದರು.

ದೇವಸ್ಥಾನ ದಿಂದ ವಿಶ್ರಾಂತಿ ಗೃಹಕ್ಕೆ ತೆರಳಿದ ಕುಮಾರಸ್ವಾಮಿ ಅವರು ಸುಮಾರು 30 ನಿಮಿಷಗಳ ಕಾಲ ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿದರು ಎನ್ನಲಾಗಿದೆ. 11 ಗಂಟೆ ಸುಮಾರಿಗೆ ಧರ್ಮ ಸ್ಥಳದಿಂದ ಶೃಂಗೇರಿಯತ್ತ ಕುಮಾರಸ್ವಾಮಿ ಪ್ರಯಾಣ ಬೆಳೆಸಿದರು.

ಬಿಗಿ ಭದ್ರತೆ
ದೇವಸ್ಥಾನದ ಸುತ್ತ ಹಾಗೂ ದ್ವಾರದ ಬಳಿ ಬಿಗಿ ಭದ್ರತೆ ನಿಯೊಜಿ ಸಲಾಗಿತ್ತು. ಎಸ್ಪಿ ರವಿಕಾಂತೇ ಗೌಡ ಅವರು ಭದ್ರತೆ
ಪರಿಶೀಲನೆ ಹಾಗೂ ಎಚ್‌. ಡಿ.ಕೆ. ಅವರ ಜತೆಗಿದ್ದರು. ಸ್ಥಳೀಯ ಠಾಣೆಗಳ ಸಿಬಂದಿ, ಸಂಚಾರ ಠಾಣೆಯ ಸಿಬಂದಿ, ಗೃಹರಕ್ಷಕ ದಳದ ಸಿಬಂದಿ ಸಹಿತ ಭದ್ರತ ದಳದ ಸಿಬಂದಿ ಹೆಚ್ಚಿನ ಭದ್ರತೆ ಒದಗಿಸಿದರು. ಕುಮಾರಸ್ವಾಮಿ ಅವರು ಆಗಮಿಸುವ ವೇಳೆಗೆ ಕೆಲಕಾಲ ಪ್ರವೇಶವನ್ನೂ ನಿರ್ಬಂಧಿಸಲಾಗಿತ್ತು.

ಹೆಲಿಪ್ಯಾಡ್‌ ಬಳಿ ಅಭಿಮಾನಿಗಳು
ಎಚ್‌.ಡಿ. ಕುಮಾರ ಸ್ವಾಮಿ ಅವರು ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಪತ್ನಿ ಜತೆ ಸಮೇತರಾಗಿ ಹೆಲಿಪ್ಯಾಡ್‌ಗೆ ಅಗಮಿಸಿದರು. ಈ ವೇಳೆ ಗಣ್ಯರು ಸ್ವಾಗತಿಸಲು ನೆರೆದಿದ್ದು, ಆಭಿಮಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಸಿಬಂದಿ ಪರದಾಡಬೇಕಾಯಿತು.

ಈ ವೇಳೆ ಮಾಜಿ ಸಚಿವ ಅಮರನಾಥ ಶೆಟ್ಟಿ, ಜೆ.ಡಿ.ಎಸ್‌. ಜಿಲ್ಲಾಧ್ಯಕ್ಷ ಮಹಮದ್‌ ಕುಂಞಿ, ಉಪಾಧ್ಯಕ್ಷ ಜಗನ್ನಾಥ್‌, ಎಂ.ಬಿ. ಸದಾಶಿವ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಮತಿ ಎಸ್‌. ಹೆಗ್ಡೆ, ಯುವ ಜೆಡಿಎಸ್‌ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ, ಪ್ರವೀಣ್‌ ಚಂದ್ರ ಜೈನ್‌, ಸೂರಜ್‌, ರಾಜಶ್ರೀ ಎಸ್‌. ಹೆಗ್ಡೆ , ವಸಂತ್‌ ಪೂಜಾರಿ, ಜಿಲ್ಲಾ ವಕ್ತಾರ ಸುಶೀಲ್‌ ನೊರೊನ್ಹಾ , ರಮೀಜಾ ಬಾನು, ಜೈನ್‌, ಮಧುಸೂದನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.