Belthangady; ಭಾರತೀಯತೆ ಸಂಪೂರ್ಣ ಒಪ್ಪಿಕೊಂಡವರು ಕ್ರೈಸ್ತರು: ಡಾ| ಹೆಗ್ಗಡೆ

ಬೆಳ್ತಂಗಡಿ ಧರ್ಮಪ್ರಾಂತ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ

Team Udayavani, Feb 11, 2024, 11:34 PM IST

Belthangady; ಭಾರತೀಯತೆ ಸಂಪೂರ್ಣ ಒಪ್ಪಿಕೊಂಡವರು ಕ್ರೈಸ್ತರು: ಡಾ| ಹೆಗ್ಗಡೆ

ಬೆಳ್ತಂಗಡಿ: ಕೇರಳದಿಂದ ಕರ್ನಾಟಕಕ್ಕೆ ಬಂದು ನೆಲೆನಿಂತ ಸಿರಿಯನ್‌ ಕಥೋಲಿಕ್‌ ಕ್ರೈಸ್ತ ಸಮುದಾಯ ಅನೇಕ ಸವಾಲುಗಳ ನಡುವೆ ಉದ್ಯೋಗ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದ ಪ್ರಗತಿಗೆ ಕಾರಣರಾದರು. ಭಾರತದಲ್ಲಿ ಭಾರತೀಯತೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡ ಸಮಾಜವಿದ್ದರೆ ಅದು ಕ್ರೈಸ್ತ ಸಮುದಾಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಕರ್ನಾಟಕದ ಪ್ರಥಮ ಸೀರೋ ಮಲಬಾರ್‌ ಧರ್ಮಪ್ರಾಂತವಾದ ಬೆಳ್ತಂಗಡಿ ಧರ್ಮಪ್ರಾಂತದ 25 ವರ್ಷ ಸಂಭ್ರಮ ಹಾಗೂ ಪ್ರಥಮ ಧರ್ಮಾಧ್ಯಕ್ಷರಾಗಿ ನೇಮಕಗೊಂಡ ಬಿಷಪ್‌ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿ ಯವರ ಧರ್ಮಾಧ್ಯಕ್ಷ ದೀಕ್ಷೆಯ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಅನೇಕ ದಶಕಗಳಿಂದ ಸರ್ವಧರ್ಮ ಸಮ್ಮೇಳನ ನಡೆಸುತ್ತ¤ ಬಂದಿದ್ದೇವೆ. ಕಳೆದ 25 ವರ್ಷಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಪ್ರೀತಿ ಬೆಳೆಸಿದ ಬೆಳ್ತಂಗಡಿ ಧರ್ಮಪ್ರಾಂತ ಹಾಗೂ ಬಿಷಪ್‌ ಅವರ ಸೇವೆಯನ್ನು ಅವರು ಶ್ಲಾಘಿಸಿದರು.

ಧರ್ಮವನ್ನು ದೂಷಿಸಬೇಡಿ
ಪ್ರಜಾಪ್ರಭುತ್ವ ಎಲ್ಲರಿಗೂ ಸಮಾನ ಹಕ್ಕು ನೀಡಿದೆೆ. ರಾಜ್ಯ ಸರಕಾರ ಎಲ್ಲ ಧರ್ಮ ಜಾತಿಯವರಿಗಾಗಿ 5 ಗ್ಯಾರಂಟಿ ನೀಡಿದೆ ಎಂದರು.

ಎಲ್ಲರಿಗೂ ಮಾದರಿ
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಯಾವುದೇ ಮೂಲ ಸೌಕರ್ಯವಿಲ್ಲದ ಕಾಲದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ ರಚನೆಯಾಗಿ ಎಲ್ಲ ವರ್ಗದ ಜನರಿಗೆ ಎಲ್ಲ ರೀತಿಯ ಸೇವೆ ಮಾಡಿ ಬದುಕು ಬೆಳಗಿರುವುದು ಮುಂದಿನ ದಿನಗಳಲ್ಲಿ ದಿಕ್ಸೂಚಿಯಾಗಿದೆ ಎಂದರು.

ಸಿರೋ ಮಲಬಾರ್‌ ಕೆಥೋಲಿಕ್‌ ಚರ್ಚ್‌ನ ಮೇಜರ್‌ ಆರ್ಚ್‌ ಬಿಷಪ್‌ ರೈ| ರೆ| ಡಾ| ರಾಫಾಯಲ್‌ ತಟ್ಟಿಲ್‌ ಕಾರ್ಯಕ್ರಮ ಉದ್ಘಾಟಿಸಿ, ಬಡವರ್ಗದ ಮತ್ತು ದೀನ ದಲಿತರನ್ನು ಮುಖ್ಯವಾಹಿನಿಗೆ ತರುವುದು ಧರ್ಮಪ್ರಾಂತದ ಮುಖ್ಯ ಗುರಿಯಾಗಿದೆ ಎಂದರು.

ತಲಚೇರಿಯ ಆರ್ಚ್‌ ಬಿಷಪ್‌ ರೈ| ರೆ| ಜೋಸೆಪ್‌ ಪಾಂಪ್ಲಾನಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಹರೀಶ್‌ ಪೂಂಜ, ಅಶೋಕ್‌ ಕುಮಾರ್‌ ರೈ, ಬೆಂಗಳೂರಿನ ಆರ್ಚ್‌ ಬಿಷಪ್‌ ರೈ| ರೆ| ಪೀಟರ್‌ ಮಚಾಡೋ, ಮಂಗಳೂರಿನ ಬಿಷಪ್‌ ರೈ| ರೆ| ಡಾ| ಪೀಟರ್‌ ಪೌಲ್‌ ಸಲ್ದಾನ ಶುಭಹಾರೈಸಿದರು.

ಕೊಟ್ಟಯಾಂನ ಆರ್ಚ್‌ ಬಿಷಪ್‌ ರೈ| ರೆ| ಮ್ಯಾಥ್ಯೂ ಮೂಲಕ್ಕಟ್‌, ಬ್ರಹ್ಮಾವರ ಬಿಷಪ್‌ ರೈ| ರೆ| ಜೋಕಬ್‌ ಮಾರ್‌ ಎಲಿಯಾಸ್‌, ಪುತ್ತೂರು ಬಿಷಪ್‌ ರೈ| ರೆ| ಗೀವರ್ಗೀಸ್‌ ಮಕೋರಿಸ್‌, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್‌ ಸೊರಕೆ, ಕೆ. ಗಂಗಾಧರ ಗೌಡ, ವಿ.ಪ.ಸದಸ್ಯರಾದ ಕೆ.ಹರೀಶ್‌ ಕುಮಾರ್‌, ಕೆ. ಪ್ರತಾಪಸಿಂಹ ನಾಯಕ್‌, ಕ್ರೈಸ್ತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ಆರ್‌.ಲೋಬೋ, ಮಾಜಿ ಎಂಎಲ್‌ಸಿ ಐವನ್‌ ಡಿ’ಸೋಜಾ ಇತರರು ಉಪಸ್ಥಿತರಿದ್ದರ‌ು.

ಧರ್ಮಪ್ರಾಂತದಿಂದ 25 ಬಡ ಕುಟುಂಬಗಳಿಗೆ ಕಟ್ಟಿಕೊಟ್ಟ ಮನೆಯ ಕೀಲಿಕೈಯನ್ನು ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಸ್ತಾಂತರಿಸಿದರು. ಬೆಳಗ್ಗೆ 8.45ಕ್ಕೆ ಕೃತಜ್ಞತಾ ದಿವ್ಯಬಲಿಪೂಜೆ ನಡೆಯಿತು. ಧರ್ಮಪ್ರಾಂತದ ವಿಕಾರ್‌ ಜನರಲ್‌ ಜೋಸೆಫ್‌ ವಲಿಯಪರಂಬಿಲ್‌ ಸ್ವಾಗತಿಸಿದರು. ಲಿಲ್ಲಿ ಆ್ಯಂಟನಿವಂದಿಸಿ, ಫಾ| ಜೋಬಿ ಪಲ್ಲಟ್‌ ಹಾಗೂ ಏಂಜಲ್‌ ಉಡುಪಿ ನಿರೂಪಿಸಿದರು.

ಎಲ್ಲ ವರ್ಗದ ಜನರ ಉದಾತ್ತ ಅಭಿಮಾನ ಸಿಕ್ಕಿದೆ
ಧರ್ಮಪ್ರಾಂತದ ಧರ್ಮಗುರುಗಳಾಗಿ 25 ವರ್ಷ ಪೂರೈಸಿದ ಬಿಷಪ್‌ ರೈ| ರೆ| ಲಾರೆನ್ಸ್‌ ಮುಕ್ಕುಯಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ದೇವರ ಅಪಾರವಾದ ಆಶೀರ್ವಾದದಿಂದ ಸಮಾಜದ ಅಭಿವೃದ್ಧಿಗೆ ಅಳಿಲು ಸೇವೆಯನ್ನು ಮಾಡುವ ಪ್ರಯತ್ನ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.