ಬೆಳ್ಳಂಬೆಳಗ್ಗೆ ಹರಿಯಿತು ನೆತ್ತರಕೋಡಿ: ಸಿನಿಮೀಯ ರೀತಿಯಲ್ಲಿ ಮನೆಯೊಳಗೆ ನುಗ್ಗಿ ಗುಂಡಿನ ದಾಳಿ

ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಕಳಗಿ ಬಾಲಚಂದ್ರ ಕೊಲೆ ಆರೋಪಿ ಸಂಪತ್

Team Udayavani, Oct 8, 2020, 10:30 AM IST

ಬೆಳ್ಳಂಬೆಳಗ್ಗೆ ಹರಿಯಿತು ನೆತ್ತರಕೋಡಿ: ಸಿನಿಮೀಯ ರೀತಿಯಲ್ಲಿ ಮನೆಯೊಳಗೆ ನುಗ್ಗಿ ಗುಂಡಿನ ದಾಳಿ

ಸುಳ್ಯ: ಜನರೆಲ್ಲಾ ಆಗ ತಾನೇ ಮೈಮುರಿದುಕೊಂಡು ಏಳುತ್ತಿದ್ದರು. ಬೆಳಗಿನ ಚುಮುಚುಮು ಚಳಿಗೆ ಕೆಲವರು ವಾಕಿಂಗ್ ಹೋಗುತ್ತಿದ್ದರೆ, ಇನ್ನು ಹಲವರು ಬೆಳಗಿನ ಉಪಹಾರದ ಅಂದಾಜಿನಲ್ಲಿದ್ದರು. ಅಷ್ಟರಲ್ಲಿ ಕೇಳಿಸಿತ್ತು ಅದೊಂದು ಸದ್ದು, ಗುಂಡಿನ ಸದ್ದು. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳಯದ ಶಾಂತಿನಗರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನೆತ್ತರ ಕೋಡಿ ಹರಿದಿತ್ತು, ಕೊಲೆ ಆರೋಪಿಯೊಬ್ಬನ ಕೊಲೆಯಾಗಿತ್ತು!

ಸಂಪಾಜೆಯ ಜನನಾಯಕ ಕಳಗಿ ಬಾಲಚಂದ್ರರನ್ನು ಅಪಘಾತ ನಡೆಸಿ ಕೊಲೆ ಮಾಡಿದ ಆರೋಪಿಗಳಲ್ಲಿ ಒಬ್ಬನಾಗಿದ್ದ ಸಂಪಾಜೆ ಕಲ್ಲುಗುಂಡಿಯ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿ ನಗರದಲ್ಲಿ ಇಂದು ಮುಂಜಾನೆ ಮುಸುಕುಧಾರಿಗಳು ಗುಂಡಿಟ್ಟು ಕೊಲೆಗೈದಿದ್ದಾರೆ.

ಕಳಗಿ ಬಾಲಚಂದ್ರ ಹತ್ಯೆಯ ಆರೋಪಿ ಸಂಪತ್ ಕೆಲ ತಿಂಗಳ ಹಿಂದಕ್ಕೆ ಜಾಮೀನು ಪಡೆದು ನ್ಯಾಯಾಂಗ ಬಂಧನದಿಂದ ಹೊರ ಬಂದಿದ್ದ. ಕಲ್ಲು ಮತ್ತು ಮರಳು ವ್ಯಾಪಾರಸ್ಥರಾಗಿದ್ದ ಆತ ಎಂದಿನಂತೆ ತನ್ನ ವ್ಯವಹಾರದಲ್ಲಿ ತೊಡಗಿಕೊಂಡಿದ್ದ. ಕೆಲವೊಮ್ಮೆ ಆತ ಸುಳ್ಯದ ಶಾಂತಿ ನಗರದಲ್ಲಿರುವ ರಾಮಕೃಷ್ಣ ಎಂಬವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದ ಎನ್ನಲಾಗಿದೆ. ನಿನ್ನೆಯೂ ಆತ ಶಾಂತಿನಗರದಲ್ಲಿ ಉಳಿದುಕೊಂಡಿದ್ದ. ಅ.8ರಂದು ಮುಂಜಾನೆ 6.30 ಕ್ಕೆ ಆತ ತನ್ನ ಕಾರಲ್ಲಿ ಹೊರಟು ಹೋಗುತ್ತಿದ್ದಾಗ ಐದಾರು ಮಂದಿ ಮುಸುಕುಧಾರಿಗಳು ಆತನ ಕಾರನ್ನು ಅಡ್ಡಗಟ್ಟಿ ಕನ್ನಡಿಗೆ ಹೊಡೆದು ನಿಲ್ಲಿಸಿದರು. ಅಪಾಯವನ್ನು ಅರಿತ ಸಂಪತ್ ಕಾರಿನಿಂದಿಳಿದು ತನ್ನ ಮನೆ ಕಡೆಗೆ ಓಡಿದ. ಆ ವೇಳೆಗೆ ಮುಸುಕುಧಾರಿಗಳು ಕೋವಿಯಿಂದ ಆತನ ಬೆನ್ನಿಗೆ ಗುಂಡಿಕ್ಕಿದ್ದರೆಂದು ಹೇಳಲಾಗಿದೆ.

ಸಂಪತ್

ಇದನ್ನೂ ಓದಿ:ಸುಳ್ಯವನ್ನು ಬೆಚ್ಚಿ ಬೀಳಿಸಿದ ಗುಂಡಿನ ದಾಳಿ: ಅಪರಿಚಿತರಿಂದ ಬೆಳ್ಳಂಬೆಳ್ಳಗ್ಗೆ ಶೂಟೌಟ್

ಗುಂಡೇಟು ತಿಂದ ಆತ ತಾನಿರುವ ಮನೆಗೆ ಹೋಗದೆ ಪಕ್ಕದಲ್ಲಿರುವ ಇನ್ನೊಂದು ಮನೆಗೆ ಹೊಕ್ಕಿದ್ದ. ಅಲ್ಲಿಗೂ ಅಟ್ಟಾಡಿಸಿಕೊಂಡು ಬಂದ ಮುಸುಕುಧಾರಿಗಳು ಮನೆಯೊಳಗೆ ಹೊಕ್ಕು ಮತ್ತೆ ಗುಂಡಿಕ್ಕಿದರಲ್ಲದೆ ಕೋವಿಯಿಂದ ಆತನ ತಲೆಗೆ ಹೊಡೆದರೆಂದು ತಿಳಿದು ಬಂದಿದೆ.

ಸುಳ್ಯ

ಈ ಘಟನೆ ನಡೆಯುವಾಗ ಮನೆಯವರು ಬೆದರಿ ಹೊರಗೋಡಿ ಬಂದರು. ಮನೆಯಲ್ಲಿದ್ದ ತಿಮ್ಮಪ್ಪ ಎಂಬುವರು ಮುಸುಕುಧಾರಿಗಳನ್ನು ತಡೆಯಲು ಯತ್ನಿಸಿದಾಗ ಅವರು ತಿಮ್ಮಪ್ಪರ ಕೈಗೆ ಕಡಿದಿದ್ದಾರೆ.

ಸಂಪತ್

ಗುಂಡೇಟಿನಿಂದ ತೀವ್ರ ಜಖಂಗೊಂಡ ಸಂಪತ್ ಮನೆಯೊಳಗಡೆ ಬಿದ್ದು ಮೃತಪಟ್ಟರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನ್ಚಂದ್ರ ಜೋಗಿ, ಎಸ್.ಐ. ಹರೀಶ್ ಎಂ.ಆರ್. ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಬಂದೋಬಸ್ತ್ ಏರ್ಪಡಿಸಿದ್ದಾರೆ. ನೂರಾರು ಮಂದಿ ಕುತೂಹಲಿಗರು ಘಟನಾ ಸ್ಥಳದಲ್ಲಿ ಸೇರಿದ್ದಾರೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.